Homeಕರ್ನಾಟಕಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

- Advertisement -
- Advertisement -

ಬುದ್ಧಿ ಇಲ್ಲದವರಿಗೆ ಬೌದ್ಧಧರ್ಮ ಅರ್ಥವಾಗುವುದಿಲ್ಲ, ಆದ್ದರಿಂದಲೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಂತಹ ಅನಾರೋಗ್ಯ ಮನಸ್ಸಿನವರು ಬೌದ್ಧ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಬುಧವಾರ ಮೈಸೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದಲ್ಲಿ ಬ್ರಾಹ್ಮಣ ಸಮಾಜದ ಕಾರ್ಯಕ್ರಮದಲ್ಲಿ ಬೌದ್ಧ ಧರ್ಮದಿಂದ ಭಾರತಕ್ಕೆ ಅಪಾಯವಿತ್ತು ಎಂದು ಇನ್ನೊಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಮನಸ್ಸು ಅನಾರೋಗ್ಯದಿಂದ ತುಂಬಿ ತುಳುಕುತ್ತಿದೆ ಎಂದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಭಾರತಕ್ಕೆ ಅಪಾಯ: ಸಚಿವ ಸುಧಾಕರ್‌ 

“ಅರ್ಟಿಕಲ್ 15 ಪ್ರಕಾರ ಯಾವುದೇ ಧರ್ಮ, ಜಾತಿ, ವ್ಯಕ್ತಿಯನ್ನು  ನಿಂದಿಸುವುದು ಅಪರಾಧ. ಆದರೆ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಇನ್ನೊಬ್ಬರನ್ನು ಮೆಚ್ಚಿಸಲು ಅವಹೇಳನ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆ ಪ್ರವಾಸದ ವೇಳೆ ‘ನಾನು ಬುದ್ಧನ ನಾಡಿನಿಂದ ಬಂದವರೆಂದು’ ಹೇಳುತ್ತಾರೆ. ಆದರೆ ಕರ್ನಾಟಕದ ಅನಾರೋಗ್ಯ ಮಂತ್ರಿ ಬುದ್ಧಿ ಇಲ್ಲದಂತೆ ಮಾತಾಡುತ್ತಾರೆ.
ಬೌದ್ಧ ಧರ್ಮ ಭಾರತದಲ್ಲಿ ಹುಟ್ಟಿ ಹೊರ ದೇಶದಲ್ಲಿ ವಿಶಾಲವಾಗಿ ಬೆಳೆದಿದೆ. ಬೌದ್ಧ ಧಮ್ಮದ ಸಾರ ಪ್ರೀತಿ, ಕರುಣೆ, ದಯೆ, ಸೌಹಾರ್ದತೆ ಹಾಗೂ ವೈಜ್ಞಾನಿಕ ತಳಹದಿಯಿಂದ ಕೂಡಿದೆ. ನಿಂದಿಸುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಚಿವ ಸುಧಾಕರ್ ಕ್ಷಮೆಯಾಚಿಸಲಿ

ಬುದ್ಧರು ಸ್ಥಾಪಿಸಿರುವ ಧಮ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡಿರುವ ಸಚಿವ ಡಾ.ಕೆ.ಸುಧಾಕರ್ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗುತ್ತದೆಂದು ಧ್ರುವ ನಾರಾಯಣ ಅವರು ಎಚ್ಚರಿಕೆ ನೀಡಿದರು.

ವಿದೇಶಾಂಗ ಇಲಾಖೆ ವೈಫಲ್ಯ

ವಿದೇಶಾಂಗ ಇಲಾಖೆ ವೈಫಲ್ಯದಿಂದಲೇ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಉಕ್ರೇನ್ ರಷ್ಯಾ ಯುದ್ಧದಲ್ಲಿ ಮೃತಪಟ್ಟಿದ್ದಾರೆ ಎಂದು ಆರ್.ಧ್ರುವನಾರಾಯಣ ಆರೋಪಿಸಿದರು.

ಅರ್ಹತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ವಿದೇಶದಲ್ಲಿ ವ್ಯಾಸಂಗ ಮಾಡಲು ತೆರಳುತ್ತಾರೆ ಎಂಬ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಬಿಜೆಪಿ ನಾಯಕರು ಹೇಳಿಕೆ ಕೊಡುವುದರಲ್ಲಿ ನಿಸ್ಸಿಮ್ಮರು. ಬೆಂಕಿ ಹಚ್ಚುವುದು, ಮನೆ ಒಡೆಯುವುದು, ಹುಳಿ ಹಿಂಡುವುದೇ ಬಿಜೆಪಿಯವರ ವೃತ್ತಿ. ಇದನ್ನು ಬ್ರಿಟಿಷರಿಂದ ಕಲಿತುಕೊಂಡಿದ್ದಾರೆ” ಎಂದು ಕುಟುಕಿದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಅಪಾಯ ಎನ್ನುವ ಸಚಿವ ಸುಧಾಕರ್‌ ತಮ್ಮ ಹಳೆಯ ಹೇಳಿಕೆಗಳನ್ನೇ ಮರೆತರೆ? 

ಕಾಂಗ್ರೆಸ್‌ ಪಾದಯಾತ್ರೆಯನ್ನು ಮೇಕೆ ತಿನ್ನುವ ಪಾದಯಾತ್ರೆ ಎಂದಿರುವ ಶಾಸಕ ಸಿ.ಟಿ.ರವಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಸಿ.ಟಿ.ರವಿ ಅವರಿಗೆ ಧಮ್ ಇದ್ದರೆ, ತಾಕತ್ತಿದ್ದರೆ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಲಿ. 2.5 ವರ್ಷದಿಂದ ಯೋಜನೆಗೆ ಯಾಕೆ ಅನುಮತಿ ಕೊಡಿಸಲಿಲ್ಲ. ಉಡಾಫೆ ಮತ್ತು ಬೇಜಾವಾಬ್ದಾರಿಯಿಂದ ಮಾತಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಇಬ್ಬಗೆ ನೀತಿ

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಇಡೀ ಸರ್ಕಾರವೇ ಖಂಡಿಸಿತು. ಅದೇ ಬೆಳ್ತಂಗಡಿಯ ಕನ್ಯಾಡಿ ಗ್ರಾಮದ ದಲಿತ ಯುವಕ ದಿನೇಶ್ ನಾಯಕ್ ಹತ್ಯೆಗೆ ಒಂದು ಪ್ರತಿಕ್ರಿಯೆಯನ್ನೂ ನೀಡಲಿಲ್ಲ. ಇದು ಬಿಜೆಪಿಯ ಇಬ್ಬಗೆ ನೀತಿಯನ್ನು ತೋರಿಸುತ್ತದೆ. ಇದು ಮನುವಾದಿ ಸಂಸ್ಕೃತಿ ದೋತ್ಯಕ. ಬಿಜೆಪಿಯ ಇಬ್ಬಗೆ ನೀತಿಯನ್ನು ಖಂಡಿಸುವುದಾಗಿ ತಿಳಿಸಿದರು.

ಎಸ್ಸಿ, ಎಸ್ಟಿ ದೌರ್ಜನ್ಯ ಹೆಚ್ಚಳ

ದೇಶದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿವೆ. ಕಳೆದ ವರ್ಷ 50291 ಪ್ರಕರಣ ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ 36467 ಅತಿ ಹೆಚ್ಚು ಪ್ರಕರಣ ದಾಖಲಾಗಿವೆ. ಖಾವಿ ಧರಿಸಿದ ಮುಖ್ಯಮಂತ್ರಿ ಇರುವ ರಾಜ್ಯದಲ್ಲಿ ಯಾಕೆ ದೌರ್ಜನ್ಯ ಹೆಚ್ಚಳವಾಯಿತು? ಖಾವಿ ಶಾಂತಿಯ ಸಂಕೇತವಲ್ಲವೇ? 84% ಪ್ರಕರಣಗಳು ಬಾಕಿ ಉಳಿದಿವೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...