Homeಕರ್ನಾಟಕಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

- Advertisement -
- Advertisement -

ಬುದ್ಧಿ ಇಲ್ಲದವರಿಗೆ ಬೌದ್ಧಧರ್ಮ ಅರ್ಥವಾಗುವುದಿಲ್ಲ, ಆದ್ದರಿಂದಲೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಂತಹ ಅನಾರೋಗ್ಯ ಮನಸ್ಸಿನವರು ಬೌದ್ಧ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಬುಧವಾರ ಮೈಸೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದಲ್ಲಿ ಬ್ರಾಹ್ಮಣ ಸಮಾಜದ ಕಾರ್ಯಕ್ರಮದಲ್ಲಿ ಬೌದ್ಧ ಧರ್ಮದಿಂದ ಭಾರತಕ್ಕೆ ಅಪಾಯವಿತ್ತು ಎಂದು ಇನ್ನೊಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಮನಸ್ಸು ಅನಾರೋಗ್ಯದಿಂದ ತುಂಬಿ ತುಳುಕುತ್ತಿದೆ ಎಂದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಭಾರತಕ್ಕೆ ಅಪಾಯ: ಸಚಿವ ಸುಧಾಕರ್‌ 

“ಅರ್ಟಿಕಲ್ 15 ಪ್ರಕಾರ ಯಾವುದೇ ಧರ್ಮ, ಜಾತಿ, ವ್ಯಕ್ತಿಯನ್ನು  ನಿಂದಿಸುವುದು ಅಪರಾಧ. ಆದರೆ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಇನ್ನೊಬ್ಬರನ್ನು ಮೆಚ್ಚಿಸಲು ಅವಹೇಳನ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆ ಪ್ರವಾಸದ ವೇಳೆ ‘ನಾನು ಬುದ್ಧನ ನಾಡಿನಿಂದ ಬಂದವರೆಂದು’ ಹೇಳುತ್ತಾರೆ. ಆದರೆ ಕರ್ನಾಟಕದ ಅನಾರೋಗ್ಯ ಮಂತ್ರಿ ಬುದ್ಧಿ ಇಲ್ಲದಂತೆ ಮಾತಾಡುತ್ತಾರೆ.
ಬೌದ್ಧ ಧರ್ಮ ಭಾರತದಲ್ಲಿ ಹುಟ್ಟಿ ಹೊರ ದೇಶದಲ್ಲಿ ವಿಶಾಲವಾಗಿ ಬೆಳೆದಿದೆ. ಬೌದ್ಧ ಧಮ್ಮದ ಸಾರ ಪ್ರೀತಿ, ಕರುಣೆ, ದಯೆ, ಸೌಹಾರ್ದತೆ ಹಾಗೂ ವೈಜ್ಞಾನಿಕ ತಳಹದಿಯಿಂದ ಕೂಡಿದೆ. ನಿಂದಿಸುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಚಿವ ಸುಧಾಕರ್ ಕ್ಷಮೆಯಾಚಿಸಲಿ

ಬುದ್ಧರು ಸ್ಥಾಪಿಸಿರುವ ಧಮ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡಿರುವ ಸಚಿವ ಡಾ.ಕೆ.ಸುಧಾಕರ್ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗುತ್ತದೆಂದು ಧ್ರುವ ನಾರಾಯಣ ಅವರು ಎಚ್ಚರಿಕೆ ನೀಡಿದರು.

ವಿದೇಶಾಂಗ ಇಲಾಖೆ ವೈಫಲ್ಯ

ವಿದೇಶಾಂಗ ಇಲಾಖೆ ವೈಫಲ್ಯದಿಂದಲೇ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಉಕ್ರೇನ್ ರಷ್ಯಾ ಯುದ್ಧದಲ್ಲಿ ಮೃತಪಟ್ಟಿದ್ದಾರೆ ಎಂದು ಆರ್.ಧ್ರುವನಾರಾಯಣ ಆರೋಪಿಸಿದರು.

ಅರ್ಹತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ವಿದೇಶದಲ್ಲಿ ವ್ಯಾಸಂಗ ಮಾಡಲು ತೆರಳುತ್ತಾರೆ ಎಂಬ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಬಿಜೆಪಿ ನಾಯಕರು ಹೇಳಿಕೆ ಕೊಡುವುದರಲ್ಲಿ ನಿಸ್ಸಿಮ್ಮರು. ಬೆಂಕಿ ಹಚ್ಚುವುದು, ಮನೆ ಒಡೆಯುವುದು, ಹುಳಿ ಹಿಂಡುವುದೇ ಬಿಜೆಪಿಯವರ ವೃತ್ತಿ. ಇದನ್ನು ಬ್ರಿಟಿಷರಿಂದ ಕಲಿತುಕೊಂಡಿದ್ದಾರೆ” ಎಂದು ಕುಟುಕಿದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಅಪಾಯ ಎನ್ನುವ ಸಚಿವ ಸುಧಾಕರ್‌ ತಮ್ಮ ಹಳೆಯ ಹೇಳಿಕೆಗಳನ್ನೇ ಮರೆತರೆ? 

ಕಾಂಗ್ರೆಸ್‌ ಪಾದಯಾತ್ರೆಯನ್ನು ಮೇಕೆ ತಿನ್ನುವ ಪಾದಯಾತ್ರೆ ಎಂದಿರುವ ಶಾಸಕ ಸಿ.ಟಿ.ರವಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಸಿ.ಟಿ.ರವಿ ಅವರಿಗೆ ಧಮ್ ಇದ್ದರೆ, ತಾಕತ್ತಿದ್ದರೆ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಲಿ. 2.5 ವರ್ಷದಿಂದ ಯೋಜನೆಗೆ ಯಾಕೆ ಅನುಮತಿ ಕೊಡಿಸಲಿಲ್ಲ. ಉಡಾಫೆ ಮತ್ತು ಬೇಜಾವಾಬ್ದಾರಿಯಿಂದ ಮಾತಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಇಬ್ಬಗೆ ನೀತಿ

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಇಡೀ ಸರ್ಕಾರವೇ ಖಂಡಿಸಿತು. ಅದೇ ಬೆಳ್ತಂಗಡಿಯ ಕನ್ಯಾಡಿ ಗ್ರಾಮದ ದಲಿತ ಯುವಕ ದಿನೇಶ್ ನಾಯಕ್ ಹತ್ಯೆಗೆ ಒಂದು ಪ್ರತಿಕ್ರಿಯೆಯನ್ನೂ ನೀಡಲಿಲ್ಲ. ಇದು ಬಿಜೆಪಿಯ ಇಬ್ಬಗೆ ನೀತಿಯನ್ನು ತೋರಿಸುತ್ತದೆ. ಇದು ಮನುವಾದಿ ಸಂಸ್ಕೃತಿ ದೋತ್ಯಕ. ಬಿಜೆಪಿಯ ಇಬ್ಬಗೆ ನೀತಿಯನ್ನು ಖಂಡಿಸುವುದಾಗಿ ತಿಳಿಸಿದರು.

ಎಸ್ಸಿ, ಎಸ್ಟಿ ದೌರ್ಜನ್ಯ ಹೆಚ್ಚಳ

ದೇಶದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿವೆ. ಕಳೆದ ವರ್ಷ 50291 ಪ್ರಕರಣ ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ 36467 ಅತಿ ಹೆಚ್ಚು ಪ್ರಕರಣ ದಾಖಲಾಗಿವೆ. ಖಾವಿ ಧರಿಸಿದ ಮುಖ್ಯಮಂತ್ರಿ ಇರುವ ರಾಜ್ಯದಲ್ಲಿ ಯಾಕೆ ದೌರ್ಜನ್ಯ ಹೆಚ್ಚಳವಾಯಿತು? ಖಾವಿ ಶಾಂತಿಯ ಸಂಕೇತವಲ್ಲವೇ? 84% ಪ್ರಕರಣಗಳು ಬಾಕಿ ಉಳಿದಿವೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...