Homeಮುಖಪುಟ'ಜ್ಞಾನೇಶ್ ಕುಮಾರ್ ನಮಗೆ 'ಗೆಟ್ ಲಾಸ್ಟ್' ಅಂದ್ರು' : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ ‘ಇಲ್ಲಿಂದ ತೊಲಗಿ’ (get lost) ಎಂಬುವುದಾಗಿ ಹೇಳಿದ್ದಾರೆ ಎಂದು ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಗಂಭೀರ ಆರೋಪ ಮಾಡಿದ್ದಾರೆ.

ಸಭೆ ಮುಗಿದ ಕೆಲವೇ ನಿಮಿಷಗಳಲ್ಲಿ, ಚುನಾವಣಾ ಆಯೋಗವು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತೀಕ್ಷ್ಣವಾದ ಪೋಸ್ಟ್ ಒಂದನ್ನು ಹಾಕಿದೆ. ಅದರಲ್ಲಿ, “ತೃಣಮೂಲ ಕಾಂಗ್ರೆಸ್‌ಗೆ ಚುನಾವಣಾ ಆಯೋಗದ ನೇರ ಮಾತು. ಈ ಬಾರಿ ಪಶ್ಚಿಮ ಬಂಗಾಳದ ಚುನಾವಣೆಗಳು ಖಂಡಿತವಾಗಿಯೂ ಭಯಮುಕ್ತ, ಹಿಂಸಾಚಾರಮುಕ್ತ, ಬೆದರಿಕೆ ರಹಿತ ಮತ್ತು ಆಮಿಷ ರಹಿತವಾಗಿ ನಡೆಯಲಿವೆ. ಅಷ್ಟೇ ಅಲ್ಲದೆ ಯಾವುದೇ ದಾಳಿಗಳು, ಬೂತ್ ಜಾಮಿಂಗ್ ಮತ್ತು ಸೋರ್ಸ್ ಜಾಮಿಂಗ್ ಇಲ್ಲದೆ ಚುನಾವಣೆ ನಡೆಯಲಿದೆ” ಎಂದು ಆಯೋಗ ಹೇಳಿದೆ.

ನಾಲ್ವರು ಸದಸ್ಯರ ಟಿಎಂಸಿ ನಿಯೋಗದಲ್ಲಿ ಒ’ಬ್ರಿಯಾನ್ ಅವರ ಸಾಗರಿಕಾ ಘೋಷ್, ಸಾಕೇತ್ ಗೋಖಲೆ ಮತ್ತು ಮೇನಕಾ ಗುರುಸ್ವಾಮಿ ಇದ್ದರು. ಮತದಾರರ ಪಟ್ಟಿಯಿಂದ ಸುಮಾರು 27 ಲಕ್ಷ ‘ನ್ಯಾಯಾಂಗ ಪರಿಶೀಲನೆಯಲ್ಲಿರುವ’ (under adjudication) ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಲು ಈ ನಿಯೋಗವು ಆಯೋಗವನ್ನು ಭೇಟಿ ಮಾಡಿತ್ತು.

“ಸಭೆ ಆರಂಭವಾದ ಕೇವಲ ಏಳು ನಿಮಿಷಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರು ನಮಗೆ ಏನು ಹೇಳಿದರು ಎಂಬುದನ್ನು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ಅವರು ‘ಇಲ್ಲಿಂದ ತೊಲಗಿ’ (Get lost) ಎಂದು ಹೇಳಿದರು. ತೃಣಮೂಲ ಕಾಂಗ್ರೆಸ್ ನಿಯೋಗಕ್ಕೆ ಮುಖ್ಯ ಚುನಾವಣಾ ಆಯುಕ್ತರು ನೀಡಿದ ಪ್ರತಿಕ್ರಿಯೆ ಇದು. ನಾವು ಸಂಸತ್ತಿನಲ್ಲಿ ಎರಡನೇ ಅತಿದೊಡ್ಡ ವಿರೋಧ ಪಕ್ಷವಾಗಿದ್ದೇವೆ” ಎಂದು ಡೆರೆಕ್ ಒ’ಬ್ರಿಯಾನ್ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಬೆಳಿಗ್ಗೆ ಸುಮಾರು 10:02ಕ್ಕೆ ಸಭೆ ಪ್ರಾರಂಭವಾಯಿತು, ಏಳೆಂಟು ನಿಮಿಷಗಳಲ್ಲಿ ಕೊನೆಗೊಂಡಿತು ಎಂದು ಒ’ಬ್ರಿಯಾನ್ ದೂರಿದ್ದಾರೆ.

ಈ ಮಧ್ಯೆ, ಟಿಎಂಸಿ ನಿಯೋಗದ ಸದಸ್ಯರು ಮುಖ್ಯ ಚುನಾವಣಾ ಆಯುಕ್ತರ ಮುಂದೆ ಧ್ವನಿ ಏರಿಸಿದ್ದರು, ಅವರಿಗೆ ಸಭೆಯ ಮರ್ಯಾದೆಯನ್ನು ಕಾಪಾಡಿಕೊಳ್ಳುವಂತೆ ವಿನಂತಿಸಲಾಯಿತು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಹೇಳಿರುವುದಾಗಿ ‘ದಿ ಪ್ರಿಂಟ್’ ವರದಿ ಮಾಡಿದೆ.

ಮಮತಾ ಬ್ಯಾನರ್ಜಿಯವರು ಸಿಇಸಿ ಜ್ಞಾನೇಶ್ ಕುಮಾರ್ ಅವರಿಗೆ ಬರೆದ ಒಂಬತ್ತು ಪತ್ರಗಳ ಬಗ್ಗೆ ನಿಯೋಗವು ಸಭೆಯಲ್ಲಿ ಪ್ರಸ್ತಾಪಿಸಿತು, ಆದರೆ ಆ ಪತ್ರಗಳಿಗೆ ‘ಯಾವುದೇ ಸ್ವೀಕೃತಿ ಅಥವಾ ಉತ್ತರ ಬಂದಿಲ್ಲ’ ಎಂದು ಒ’ಬ್ರಿಯಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾವು ಅವರಿಗೆ (ಜ್ಞಾನೇಶ್ ಕುಮಾರ್) ನೀವು ಈ ಒಂಬತ್ತೂ ಪತ್ರಗಳನ್ನು ನಿರ್ಲಕ್ಷಿಸಿದ್ದೀರಿ ಎಂದು ಹೇಳಿದೆವು. ಚುನಾವಣಾ ಪ್ರಕ್ರಿಯೆಯ ಭಾಗವಾಗಿರುವ ಮತ್ತು ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಅಧಿಕಾರಿಗಳ ಬಗ್ಗೆ ನಾವು ಆರು ಉದಾಹರಣೆಗಳನ್ನು ನೀಡಿದ್ದೇವೆ. ನಂದಿಗ್ರಾಮದಲ್ಲಿ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡ ಮುಖ್ಯ ಚುನಾವಣಾ ಅಧಿಕಾರಿಯ ಉದಾಹರಣೆ ಸೇರಿದಂತೆ ಒಟ್ಟು ಆರು ನಿದರ್ಶನಗಳನ್ನು ನಾವು ಅವರ ಮುಂದಿಟ್ಟಿದ್ದೇವೆ” ಎಂದು ಒ’ಬ್ರಿಯಾನ್ ಹೇಳಿದ್ದಾರೆ.

“ನಾವು ಅವರಿಗೆ (ಜ್ಞಾನೇಶ್ ಕುಮಾರ್) ಹೇಳಿದೆವು, ನೀವು ಈ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದೀರಿ, ಹೀಗಿರುವಾಗ ನೀವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಹೇಗೆ ನಡೆಸಲು ಬಯಸುತ್ತೀರಿ? ಆಗ ಅವರು ‘ನಿಕಲ್ ಜಾವೋ ಯಹಾ ಸೆ’ (ಇಲ್ಲಿಂದ ಹೊರಟುಹೋಗಿ) ಎಂದು ಹೇಳಿದರು” ಎಂದು ಒ’ಬ್ರಿಯಾನ್ ವಿವರಿಸಿದ್ದಾರೆ.

ಚುನಾವಣಾ ಆಯೋಗದ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸಾಕೇತ್ ಗೋಖಲೆ, ಇದೊಂದು ಸುಳ್ಳು ಎಂದು ಆರೋಪಿಸಿದ್ದಾರೆ. “ಇದು ಸುಳ್ಳು. ಸಭೆಯಲ್ಲಿ ನಾನು ವೈಯಕ್ತಿಕವಾಗಿ ಹಾಜರಿದ್ದೆ. ಇಂತಹ ಯಾವುದೇ ಮಾತು ಅಲ್ಲಿ ನಡೆದಿಲ್ಲ. ಸಿಇಸಿ ಜ್ಞಾನೇಶ್ ಕುಮಾರ್ ನಮಗೆ ಹೇಳಿದ್ದು ಕೇವಲ ‘ಗೆಟ್ ಲಾಸ್ಟ್’ (ಇಲ್ಲಿಂದ ತೊಲಗಿ) ಎಂದು ಮಾತ್ರ. ಸಭೆಯ ಸಂಭಾಷಣೆಯ ಪ್ರತಿಲಿಪಿಯನ್ನು ಬಿಡುಗಡೆ ಮಾಡಲು ನಾವು ಇಸಿಐಗೆ ಸವಾಲು ಹಾಕುತ್ತೇವೆ. ಇಲ್ಲದಿದ್ದರೆ ನಾವೇ ಅದನ್ನು ಮಾಡುತ್ತೇವೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಟಿಎಂಸಿ ಅಧಿಕೃತ ಸಾಮಾಜಿಕ ಮಾಧ್ಯಮಗ ಖಾತೆಗಳು ಕೂಡ ಚುನಾವಣಾ ಆಯೋಗದ ಆರೋಪಕ್ಕೆ ತಿರುಗೇಟು ನೀಡಿದ್ದು, “ಚುನಾವಣಾ ಆಯೋಗಕ್ಕೆ ನಮ್ಮ ನೇರ ಮಾತು. ಈ ಬಾರಿ ಚುನಾವಣೆಗಳು ಹೀಗಿರಬೇಕು: ದೆಹಲಿಯ ನಿಯಂತ್ರಣದಿಂದ ಮುಕ್ತವಾಗಿರಬೇಕು, ರಾಜಕೀಯ ಪಕ್ಷಪಾತದಿಂದ ಮುಕ್ತವಾಗಿರಬೇಕು, ಆಯ್ದ ವ್ಯಕ್ತಿಗಳನ್ನು ಗುರಿಯಾಗಿಸುವುದರಿಂದ ಮುಕ್ತವಾಗಿರಬೇಕು ಮತ್ತು ದ್ವಂದ್ವ ನೀತಿಯಿಂದ ಮುಕ್ತವಾಗಿರಬೇಕು” ಎಂದು ಬರೆದುಕೊಂಡಿದೆ.

ನ್ಯಾಯಾಂಗ ಅಧಿಕಾರಿಗಳ ಪರಿಶೀಲನೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರಿಂದ, ಈ 27 ಲಕ್ಷ ಮತದಾರರು ಈ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ.

“ನ್ಯಾಯಾಂಗ ಅಧಿಕಾರಿಗಳಿಂದ ಹೆಸರು ಅಳಿಸಲ್ಪಟ್ಟ ಮತದಾರರು ಮೇಲ್ಮನವಿ ನ್ಯಾಯಮಂಡಳಿಯನ್ನು ಸಂಪರ್ಕಿಸಬಹುದು. ನ್ಯಾಯಮಂಡಳಿ ಆದೇಶ ನೀಡಿದರೆ ಅವರ ಹೆಸರುಗಳು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸಲಾಗುತ್ತದೆ. ನಂತರ ಅವರು ಮತ ಚಲಾಯಿಸಬಹುದು, ಆದರೆ ಈ ಚುನಾವಣೆಯಲ್ಲಿ ಅಲ್ಲ” ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಕುಮಾರ್ ಅಗರ್ವಾಲ್ ಸೋಮವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಫೆಬ್ರವರಿ 28ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಒಟ್ಟು ಮತದಾರರ ಸಂಖ್ಯೆ 7.04 ಕೋಟಿಯಾಗಿದೆ. ಈ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗುವ ಮೊದಲು ರಾಜ್ಯದಲ್ಲಿ 7.66 ಕೋಟಿ ಮತದಾರರಿದ್ದರು. ಅಂದರೆ, ಈ ಪ್ರಕ್ರಿಯೆಯ ನಂತರ ಮತದಾರರ ಸಂಖ್ಯೆಯಲ್ಲಿ ಶೇಕಡ 8.09 ರಷ್ಟು ಇಳಿಕೆಯಾಗಿದೆ.







ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...