Homeಮುಖಪುಟ'ಜ್ಞಾನೇಶ್ ಕುಮಾರ್ ನಮಗೆ 'ಗೆಟ್ ಲಾಸ್ಟ್' ಅಂದ್ರು' : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ ‘ಇಲ್ಲಿಂದ ತೊಲಗಿ’ (get lost) ಎಂಬುವುದಾಗಿ ಹೇಳಿದ್ದಾರೆ ಎಂದು ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಗಂಭೀರ ಆರೋಪ ಮಾಡಿದ್ದಾರೆ.

ಸಭೆ ಮುಗಿದ ಕೆಲವೇ ನಿಮಿಷಗಳಲ್ಲಿ, ಚುನಾವಣಾ ಆಯೋಗವು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತೀಕ್ಷ್ಣವಾದ ಪೋಸ್ಟ್ ಒಂದನ್ನು ಹಾಕಿದೆ. ಅದರಲ್ಲಿ, “ತೃಣಮೂಲ ಕಾಂಗ್ರೆಸ್‌ಗೆ ಚುನಾವಣಾ ಆಯೋಗದ ನೇರ ಮಾತು. ಈ ಬಾರಿ ಪಶ್ಚಿಮ ಬಂಗಾಳದ ಚುನಾವಣೆಗಳು ಖಂಡಿತವಾಗಿಯೂ ಭಯಮುಕ್ತ, ಹಿಂಸಾಚಾರಮುಕ್ತ, ಬೆದರಿಕೆ ರಹಿತ ಮತ್ತು ಆಮಿಷ ರಹಿತವಾಗಿ ನಡೆಯಲಿವೆ. ಅಷ್ಟೇ ಅಲ್ಲದೆ ಯಾವುದೇ ದಾಳಿಗಳು, ಬೂತ್ ಜಾಮಿಂಗ್ ಮತ್ತು ಸೋರ್ಸ್ ಜಾಮಿಂಗ್ ಇಲ್ಲದೆ ಚುನಾವಣೆ ನಡೆಯಲಿದೆ” ಎಂದು ಆಯೋಗ ಹೇಳಿದೆ.

ನಾಲ್ವರು ಸದಸ್ಯರ ಟಿಎಂಸಿ ನಿಯೋಗದಲ್ಲಿ ಒ’ಬ್ರಿಯಾನ್ ಅವರ ಸಾಗರಿಕಾ ಘೋಷ್, ಸಾಕೇತ್ ಗೋಖಲೆ ಮತ್ತು ಮೇನಕಾ ಗುರುಸ್ವಾಮಿ ಇದ್ದರು. ಮತದಾರರ ಪಟ್ಟಿಯಿಂದ ಸುಮಾರು 27 ಲಕ್ಷ ‘ನ್ಯಾಯಾಂಗ ಪರಿಶೀಲನೆಯಲ್ಲಿರುವ’ (under adjudication) ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಲು ಈ ನಿಯೋಗವು ಆಯೋಗವನ್ನು ಭೇಟಿ ಮಾಡಿತ್ತು.

“ಸಭೆ ಆರಂಭವಾದ ಕೇವಲ ಏಳು ನಿಮಿಷಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರು ನಮಗೆ ಏನು ಹೇಳಿದರು ಎಂಬುದನ್ನು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ಅವರು ‘ಇಲ್ಲಿಂದ ತೊಲಗಿ’ (Get lost) ಎಂದು ಹೇಳಿದರು. ತೃಣಮೂಲ ಕಾಂಗ್ರೆಸ್ ನಿಯೋಗಕ್ಕೆ ಮುಖ್ಯ ಚುನಾವಣಾ ಆಯುಕ್ತರು ನೀಡಿದ ಪ್ರತಿಕ್ರಿಯೆ ಇದು. ನಾವು ಸಂಸತ್ತಿನಲ್ಲಿ ಎರಡನೇ ಅತಿದೊಡ್ಡ ವಿರೋಧ ಪಕ್ಷವಾಗಿದ್ದೇವೆ” ಎಂದು ಡೆರೆಕ್ ಒ’ಬ್ರಿಯಾನ್ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಬೆಳಿಗ್ಗೆ ಸುಮಾರು 10:02ಕ್ಕೆ ಸಭೆ ಪ್ರಾರಂಭವಾಯಿತು, ಏಳೆಂಟು ನಿಮಿಷಗಳಲ್ಲಿ ಕೊನೆಗೊಂಡಿತು ಎಂದು ಒ’ಬ್ರಿಯಾನ್ ದೂರಿದ್ದಾರೆ.

ಈ ಮಧ್ಯೆ, ಟಿಎಂಸಿ ನಿಯೋಗದ ಸದಸ್ಯರು ಮುಖ್ಯ ಚುನಾವಣಾ ಆಯುಕ್ತರ ಮುಂದೆ ಧ್ವನಿ ಏರಿಸಿದ್ದರು, ಅವರಿಗೆ ಸಭೆಯ ಮರ್ಯಾದೆಯನ್ನು ಕಾಪಾಡಿಕೊಳ್ಳುವಂತೆ ವಿನಂತಿಸಲಾಯಿತು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಹೇಳಿರುವುದಾಗಿ ‘ದಿ ಪ್ರಿಂಟ್’ ವರದಿ ಮಾಡಿದೆ.

ಮಮತಾ ಬ್ಯಾನರ್ಜಿಯವರು ಸಿಇಸಿ ಜ್ಞಾನೇಶ್ ಕುಮಾರ್ ಅವರಿಗೆ ಬರೆದ ಒಂಬತ್ತು ಪತ್ರಗಳ ಬಗ್ಗೆ ನಿಯೋಗವು ಸಭೆಯಲ್ಲಿ ಪ್ರಸ್ತಾಪಿಸಿತು, ಆದರೆ ಆ ಪತ್ರಗಳಿಗೆ ‘ಯಾವುದೇ ಸ್ವೀಕೃತಿ ಅಥವಾ ಉತ್ತರ ಬಂದಿಲ್ಲ’ ಎಂದು ಒ’ಬ್ರಿಯಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾವು ಅವರಿಗೆ (ಜ್ಞಾನೇಶ್ ಕುಮಾರ್) ನೀವು ಈ ಒಂಬತ್ತೂ ಪತ್ರಗಳನ್ನು ನಿರ್ಲಕ್ಷಿಸಿದ್ದೀರಿ ಎಂದು ಹೇಳಿದೆವು. ಚುನಾವಣಾ ಪ್ರಕ್ರಿಯೆಯ ಭಾಗವಾಗಿರುವ ಮತ್ತು ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಅಧಿಕಾರಿಗಳ ಬಗ್ಗೆ ನಾವು ಆರು ಉದಾಹರಣೆಗಳನ್ನು ನೀಡಿದ್ದೇವೆ. ನಂದಿಗ್ರಾಮದಲ್ಲಿ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡ ಮುಖ್ಯ ಚುನಾವಣಾ ಅಧಿಕಾರಿಯ ಉದಾಹರಣೆ ಸೇರಿದಂತೆ ಒಟ್ಟು ಆರು ನಿದರ್ಶನಗಳನ್ನು ನಾವು ಅವರ ಮುಂದಿಟ್ಟಿದ್ದೇವೆ” ಎಂದು ಒ’ಬ್ರಿಯಾನ್ ಹೇಳಿದ್ದಾರೆ.

“ನಾವು ಅವರಿಗೆ (ಜ್ಞಾನೇಶ್ ಕುಮಾರ್) ಹೇಳಿದೆವು, ನೀವು ಈ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದೀರಿ, ಹೀಗಿರುವಾಗ ನೀವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಹೇಗೆ ನಡೆಸಲು ಬಯಸುತ್ತೀರಿ? ಆಗ ಅವರು ‘ನಿಕಲ್ ಜಾವೋ ಯಹಾ ಸೆ’ (ಇಲ್ಲಿಂದ ಹೊರಟುಹೋಗಿ) ಎಂದು ಹೇಳಿದರು” ಎಂದು ಒ’ಬ್ರಿಯಾನ್ ವಿವರಿಸಿದ್ದಾರೆ.

ಚುನಾವಣಾ ಆಯೋಗದ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸಾಕೇತ್ ಗೋಖಲೆ, ಇದೊಂದು ಸುಳ್ಳು ಎಂದು ಆರೋಪಿಸಿದ್ದಾರೆ. “ಇದು ಸುಳ್ಳು. ಸಭೆಯಲ್ಲಿ ನಾನು ವೈಯಕ್ತಿಕವಾಗಿ ಹಾಜರಿದ್ದೆ. ಇಂತಹ ಯಾವುದೇ ಮಾತು ಅಲ್ಲಿ ನಡೆದಿಲ್ಲ. ಸಿಇಸಿ ಜ್ಞಾನೇಶ್ ಕುಮಾರ್ ನಮಗೆ ಹೇಳಿದ್ದು ಕೇವಲ ‘ಗೆಟ್ ಲಾಸ್ಟ್’ (ಇಲ್ಲಿಂದ ತೊಲಗಿ) ಎಂದು ಮಾತ್ರ. ಸಭೆಯ ಸಂಭಾಷಣೆಯ ಪ್ರತಿಲಿಪಿಯನ್ನು ಬಿಡುಗಡೆ ಮಾಡಲು ನಾವು ಇಸಿಐಗೆ ಸವಾಲು ಹಾಕುತ್ತೇವೆ. ಇಲ್ಲದಿದ್ದರೆ ನಾವೇ ಅದನ್ನು ಮಾಡುತ್ತೇವೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಟಿಎಂಸಿ ಅಧಿಕೃತ ಸಾಮಾಜಿಕ ಮಾಧ್ಯಮಗ ಖಾತೆಗಳು ಕೂಡ ಚುನಾವಣಾ ಆಯೋಗದ ಆರೋಪಕ್ಕೆ ತಿರುಗೇಟು ನೀಡಿದ್ದು, “ಚುನಾವಣಾ ಆಯೋಗಕ್ಕೆ ನಮ್ಮ ನೇರ ಮಾತು. ಈ ಬಾರಿ ಚುನಾವಣೆಗಳು ಹೀಗಿರಬೇಕು: ದೆಹಲಿಯ ನಿಯಂತ್ರಣದಿಂದ ಮುಕ್ತವಾಗಿರಬೇಕು, ರಾಜಕೀಯ ಪಕ್ಷಪಾತದಿಂದ ಮುಕ್ತವಾಗಿರಬೇಕು, ಆಯ್ದ ವ್ಯಕ್ತಿಗಳನ್ನು ಗುರಿಯಾಗಿಸುವುದರಿಂದ ಮುಕ್ತವಾಗಿರಬೇಕು ಮತ್ತು ದ್ವಂದ್ವ ನೀತಿಯಿಂದ ಮುಕ್ತವಾಗಿರಬೇಕು” ಎಂದು ಬರೆದುಕೊಂಡಿದೆ.

ನ್ಯಾಯಾಂಗ ಅಧಿಕಾರಿಗಳ ಪರಿಶೀಲನೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರಿಂದ, ಈ 27 ಲಕ್ಷ ಮತದಾರರು ಈ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ.

“ನ್ಯಾಯಾಂಗ ಅಧಿಕಾರಿಗಳಿಂದ ಹೆಸರು ಅಳಿಸಲ್ಪಟ್ಟ ಮತದಾರರು ಮೇಲ್ಮನವಿ ನ್ಯಾಯಮಂಡಳಿಯನ್ನು ಸಂಪರ್ಕಿಸಬಹುದು. ನ್ಯಾಯಮಂಡಳಿ ಆದೇಶ ನೀಡಿದರೆ ಅವರ ಹೆಸರುಗಳು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸಲಾಗುತ್ತದೆ. ನಂತರ ಅವರು ಮತ ಚಲಾಯಿಸಬಹುದು, ಆದರೆ ಈ ಚುನಾವಣೆಯಲ್ಲಿ ಅಲ್ಲ” ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಕುಮಾರ್ ಅಗರ್ವಾಲ್ ಸೋಮವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಫೆಬ್ರವರಿ 28ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಒಟ್ಟು ಮತದಾರರ ಸಂಖ್ಯೆ 7.04 ಕೋಟಿಯಾಗಿದೆ. ಈ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗುವ ಮೊದಲು ರಾಜ್ಯದಲ್ಲಿ 7.66 ಕೋಟಿ ಮತದಾರರಿದ್ದರು. ಅಂದರೆ, ಈ ಪ್ರಕ್ರಿಯೆಯ ನಂತರ ಮತದಾರರ ಸಂಖ್ಯೆಯಲ್ಲಿ ಶೇಕಡ 8.09 ರಷ್ಟು ಇಳಿಕೆಯಾಗಿದೆ.







ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...