Homeಕರ್ನಾಟಕರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ; ದಲಿತರಿಗೆ ಅವಕಾಶ ಯಾಕಿಲ್ಲ?- ಜಿಗಜಿಣಗಿ ಪ್ರಶ್ನೆ

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ; ದಲಿತರಿಗೆ ಅವಕಾಶ ಯಾಕಿಲ್ಲ?- ಜಿಗಜಿಣಗಿ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಬಿಜೆಪಿಯಲ್ಲಿ ಇನ್ನೂ ವಿರೋಧ ಪಕ್ಷದ ಸ್ಥಾನ ಭರ್ತಿ ಆಗಿಲ್ಲ, ಮತ್ತೊಂದೆಡೆ ಹೀನಾಯವಾಗಿ ಸೋತಿರುವ ಬಿಜೆಪಿಯು, ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಯ ಚರ್ಚೆಗಳು ಜೋರಾಗಿದೆ. ಇದೀಗ ರಾಜ್ಯ ಬಿಜೆಪಿ ನಾಯಕರಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕನ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಮುಂದುವರಿದಿದೆ.

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಬಲ ಆಕಾಂಕಿಗಳಾಗಿದ್ದು, ಉಭಯ ನಾಯಕರು ಈ ಬಗ್ಗೆ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಇದರ ಹೊರತಾಗಿ, ಆರ್.ಅಶೋಕ್, ಅಶ್ವತ್ಥ ನಾರಾಯಣ ಅವರ ಹೆಸರೂ ವಿಪಕ್ಷ ನಾಯಕನ ಸ್ಥಾನಕ್ಕೆ ಕೇಳಿಬಂದಿದೆ.

ಇನ್ನು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಯ ಬೇಡಿಕೆ ಪಕ್ಷದ ಆಂತರಿಕ ವಲಯಗಳಲ್ಲಿ ಕೇಳಿಬಂದಿದೆ. ಮಾಜಿ ಸಚಿವ ವಿ. ಸೋಮಣ್ಣ ಹಾಗೂ ಹಿರಿಯ ಸಂಸದ ರಮೇಶ್ ಜಿಗಜಿಣಗಿ ತಾವು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳೆಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಜುಲೈ 3ರಂದು ವಿಧಾನ ಸಭೆಯ ಜಂಟಿ ಅಧಿವೇಶನ ನಡೆಯಲಿರುವುದರಿಂದ ಅದಕ್ಕೂ ಮುನ್ನ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

ದಲಿತರು ಬಿಜೆಪಿ ಅಧ್ಯಕ್ಷ ಆಗಬಾರದೇ? ನಾನೂ ಆಕಾಂಕ್ಷಿ ಎಂದ ಜಿಗಜಿಣಗಿ

ಮಾಜಿ ಸಚಿವ ವಿ ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಬಯಕೆಯನ್ನು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೊರ ಹಾಕಿದ್ದಾರೆ. ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ ರಾಷ್ಟ್ರೀಯ ನಾಯಕರ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡ್ತಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರುವುದು ಸಹಜ. ನಾನೂ ಬಿಜೆಪಿಯ ಹಿರಿಯ ನಾಯಕ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯದ ಅಧ್ಯಕ್ಷ ಆಗಬಾರದೇ? ಎಂದು ಪ್ರಶ್ನಿಸಿದರು.

ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೇಳಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಎಲ್ಲಿ ಕೇಳಬೇಕು ಎಂಬುದು ನನಗೆ ಗೊತ್ತಿದೆ. ನನಗೂ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೋರುತ್ತೇನೆ ಎಂದು ರಮೇಶ ಜಿಗಜಿಣಗಿ ತಮ್ಮ ಆಶಯ ವ್ಯಕ್ತಪಡಿಸಿದರು.

ರಮೇಶ್ ಜಿಗಜಿಣಗಿ, ವಿಜಯಪುರ ಸಂಸದ

ನನಗಿಂತ ಬುದ್ಧಿವಂತರು ಇದ್ದರೆ ಅವರಿಗೆ ಅಧ್ಯಕ್ಷ ಸ್ಥಾನ ನೀಡಲಿ: ಸೋಮಣ್ಣ

”ಪಕ್ಷ ನೀಡಿದ ಕೆಲಸ ಒಪ್ಪಿಕೊಂಡ ಕಾರಣಕ್ಕಾಗಿ ನಾನು ಈಗ ನಿರುದ್ಯೋಗಿಯಾಗಿದ್ದೇನೆ. ಆದರೆ, ಸುಮ್ಮನೆ ಕೂರುವವನಲ್ಲ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧ” ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದರು.

ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಕಾನೂನು ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ”ಬಿಜೆಪಿ ಸೇರಿದ ಬಳಿಕ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಯಾವುದಕ್ಕೂ ವಿಚಲಿತನಾಗಿಲ್ಲ. ನಾನು ಸನ್ಯಾಸಿ ಅಲ್ಲ ಎಂದು ಈಗಾಗಲೇ ಹೇಳಿರುವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಹೌದು ಎಂಬುದನ್ನು ಬಹಿರಂಗಪಡಿಸಿದ್ದೇನೆ” ಎಂದರು.

”ಅಧಿಕಾರ ಇರಲಿ, ಇಲ್ಲದಿರಲಿ ಜನರ ಜತೆಗಿದ್ದು ಕೆಲಸ ಮಾಡುತ್ತೇನೆ. ಒಳಗೊಂದು, ಹೊರಗೊಂದು ಮಾತನಾಡಲು ನನಗೆ ಬರುವುದಿಲ್ಲ. ಹಿಂದೆ, ಮುಂದೆ ಮಾತನಾಡಿದವರ ನೀತಿಪಾಠ ನನಗೆ ಗೊತ್ತಿದೆ. ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳುವವರೆಗೆ ಕಾಯೋಣ. ನನಗಿಂತ ಬುದ್ಧಿವಂತರು ಯಾರಾದರೂ ಇದ್ದರೆ ಅವರಿಗೆ ಅಧ್ಯಕ್ಷ ಸ್ಥಾನ ನೀಡಲಿ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

”ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೆ ನಾನು ನಿರಾಯಾಸವಾಗಿ ಗೆಲ್ಲುತ್ತಿದ್ದೆ. ಪಕ್ಷದ ವರಿಷ್ಠರ ಸೂಚನೆಯಂತೆ ‘ಫೋರ್’, ‘ಸೆಕ್ಸ್’ ಹೊಡೆಯಲು ಹೋಗಿ ಎರಡೂ ಕಡೆ ಸೋತು, ನಿರುದ್ಯೋಗಿಯಾಗಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದರು.

ವಿ ಸೋಮಣ್ಣ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...