Homeಮುಖಪುಟಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ -ಸಿಡಿಲಿನ ಹೊಡೆತಕ್ಕೆ 75 ಸಾವು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ -ಸಿಡಿಲಿನ ಹೊಡೆತಕ್ಕೆ 75 ಸಾವು

ಹಿಮಾಚಲ ಪ್ರದೇಶದಲ್ಲಿ, ಕಾಂಗ್ರಾ ಮತ್ತು ಡಾಲ್‌ಹೌಸಿ ಸೇರಿದಂತೆ ಹಲವಾರು ಜಿಲ್ಲೆಗಳು ಜಲಾವೃತವಾಗಿವೆ. ಧರ್ಮಶಾಲಾದಲ್ಲಿ ಮೋಡ ಸ್ಫೋಟಕ್ಕೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -
- Advertisement -

ಕರ್ನಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಜೂನ್ 11 ರಿಂದ ಬಾರಿ ಮಳೆಯಾಗುತ್ತಿದ್ದು ಗುಡುಗು ಸಿಡಿಲಿನ ಆರ್ಭಟಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಭಾನುವಾರ ರಾತ್ರಿ ಬಾರಿ ಮಿಂಚು ಮತ್ತು ಸಿಡಿಲಿನ ಆಘಾತಕ್ಕೆ ಜನರು ಮೃತಪಟ್ಟಿರುವ ಘಟನೆ ವರದಿಯಾಗಿತ್ತು. ಮಂಗಳವಾರದ ಹೊತ್ತಿಗೆ ಸಿಡಿಲಿನ ಹೊಡೆತಕ್ಕೆ ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬಿಡುವು ನೀಡಿದ್ದ ಮಳೆ ಮಂಗಳವಾರ ಮುಂಜಾನೆಯಿಂದಲೇ ಮತ್ತೆ ಚುರುಕುಗೊಂಡಿದೆ. ನಗರದ ಹನುಮಂತ ನಗರ, ಬಸವನಗುಡಿ, ಕೆ.ಆರ್‌. ಮಾರ್ಕೆಟ್ ಸೇರಿದಂತೆ ಇಂದು ಮುಂಜಾನೆಯಿಂದಲೇ ಮಳೆ ಹೊಡೆಯುತ್ತಿದ್ದು ಕೆಲಸ ಕಾರ್ಯಗಳಿಗೆ ಹೊರಟಿದ್ದ ಜನರ ಓಡಾಟಕ್ಕೆ ಅಡಚಣೆಯಾಗಿರುವುದು ಕಂಡು ಬಂತು.

ಭಾರತದ ಬಹುತೇಕ ಕಡೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ರಾತ್ರಿಯಿಂದ ಬಾರಿ ಮಳೆಯಾಗುತ್ತಿದೆ. ಹದಿನೈದು ದಿನ ತಡವಾಗಿ ಆಗಮಿಸದ ಮುಂಗಾರು ದೆಹಲಿ ಮತ್ತು ಸುತ್ತ ಮುತ್ತಲಿನ ಗುರುಗ್ರಾಮ, ಫರಿದಾಬಾದ್ ಪ್ರದೇಶಗಳಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅನೇಕರು ಮನೆ ಬಿಟ್ಟು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರಾಖಂಡ, ಜಮ್ಮು, ಪಂಜಾಬ್, ರಾಜಸ್ಥಾನದಂತಹ ಅನೇಕ ರಾಜ್ಯಗಳಲ್ಲಿ ನೈಸರ್ಗಿಕ ವಿಕೋಪಕ್ಕೆ ಇದುವರೆಗೆ 75 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಾರಿ ಮಳೆ ಮತ್ತು ಗುಡುಗಿನ ಆರ್ಭಟಕ್ಕೆ ಉತ್ತರ ಭಾರತದ ಅನೇಕ ನಗರಗಳಲ್ಲಿ ಜನಜೀವನ ಅಸ್ಥವ್ಯಸ್ಥವಾಗಿದ್ದು ಮನೆಗಳು ನೀರಿನಲ್ಲಿ ಮುಳುಗಡೆಯಾಗಿವೆ . ಹಿಮಾಚಲ ಮತ್ತು ಉತ್ತರಾಖಂಡದ ಹಲವಾರು ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಉತ್ತರಪ್ರದೇಶದಲ್ಲಿ ಮಿಂಚಿನಿಂದ ಸುಮಾರು 40 ಜನರು ಸಾವನ್ನಪ್ಪಿದ್ದಾರೆ, ಮಧ್ಯಪ್ರದೇಶದಲ್ಲಿ ಸುಮಾರು 20 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಹಿಮಾಚಲದ ಕಾಂಗ್ರಾ ಮತ್ತು ಡಾಲ್‌ಹೌಸಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಸೋಮವಾರದಿಂದ ನಿರಂತರ ಮಳೆ ಸುರಿಯುತ್ತಿದೆ.  ಧರ್ಮಶಾಲಾ ನಗರವು ಸಂಪೂರ್ಣ ಜಲಾವೃತವಾಗಿದೆ. ಬೃಹತ್ ಮೋಡಗಳು ಸ್ಫೋಟಗೊಂಡು ಇದ್ದಕ್ಕಿದ್ದಂತೆ ಪ್ರವಾಹೋಪಾದಿಯಲ್ಲಿ ಮಳೆ ಸುರಿಯಲು ಆರಂಭಿಸಿದ ಕಾರಣ ಅನೇಕ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಪ್ರವಾಹದಲ್ಲಿ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿರುವುದು  ವರದಿಯಾಗಿದೆ.   

ಇದನ್ನೂ ಓದಿ: ರಾಜ್ಯದ ಹಲವೆಡೆ ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬಗಳು-ನದಿ ನೀರಿನ ಮಟ್ಟದಲ್ಲಿ ಹೆಚ್ಚಳ

ನೈಸರ್ಗಿಕ ವಿಪತ್ತನ್ನು ಅರಿತುಕೊಂಡು ಕೇಂದ್ರ ಗೃಹ ಸಚಿವಾಲಯವು ಹಿಮಾಚಲ ಪ್ರದೇಶ  ರಾಜ್ಯ ಸರ್ಕಾರಕ್ಕೆ ಎಲ್ಲಾ ಸಹಾಯವನ್ನು ನೀಡಲು ಮುಂದಾಗಿರುವುದಾಗಿ ಹೇಳಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಎನ್‌ಡಿಆರ್‌ಎಫ್‌ ತಂಡಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಕಳುಹಿಸಿಕೊಟ್ಟಿರುವುದಾಗಿ ಕೇಂದ್ರ  ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

 ರಾಜಸ್ಥಾನದ ಕೆಲವು ಭಾಗಗಳಲ್ಲಿಮಿಂಚಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ  ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಮೋದಿ    ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. 

   

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...