Homeಮುಖಪುಟಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ -ಸಿಡಿಲಿನ ಹೊಡೆತಕ್ಕೆ 75 ಸಾವು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ -ಸಿಡಿಲಿನ ಹೊಡೆತಕ್ಕೆ 75 ಸಾವು

ಹಿಮಾಚಲ ಪ್ರದೇಶದಲ್ಲಿ, ಕಾಂಗ್ರಾ ಮತ್ತು ಡಾಲ್‌ಹೌಸಿ ಸೇರಿದಂತೆ ಹಲವಾರು ಜಿಲ್ಲೆಗಳು ಜಲಾವೃತವಾಗಿವೆ. ಧರ್ಮಶಾಲಾದಲ್ಲಿ ಮೋಡ ಸ್ಫೋಟಕ್ಕೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -
- Advertisement -

ಕರ್ನಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಜೂನ್ 11 ರಿಂದ ಬಾರಿ ಮಳೆಯಾಗುತ್ತಿದ್ದು ಗುಡುಗು ಸಿಡಿಲಿನ ಆರ್ಭಟಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಭಾನುವಾರ ರಾತ್ರಿ ಬಾರಿ ಮಿಂಚು ಮತ್ತು ಸಿಡಿಲಿನ ಆಘಾತಕ್ಕೆ ಜನರು ಮೃತಪಟ್ಟಿರುವ ಘಟನೆ ವರದಿಯಾಗಿತ್ತು. ಮಂಗಳವಾರದ ಹೊತ್ತಿಗೆ ಸಿಡಿಲಿನ ಹೊಡೆತಕ್ಕೆ ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬಿಡುವು ನೀಡಿದ್ದ ಮಳೆ ಮಂಗಳವಾರ ಮುಂಜಾನೆಯಿಂದಲೇ ಮತ್ತೆ ಚುರುಕುಗೊಂಡಿದೆ. ನಗರದ ಹನುಮಂತ ನಗರ, ಬಸವನಗುಡಿ, ಕೆ.ಆರ್‌. ಮಾರ್ಕೆಟ್ ಸೇರಿದಂತೆ ಇಂದು ಮುಂಜಾನೆಯಿಂದಲೇ ಮಳೆ ಹೊಡೆಯುತ್ತಿದ್ದು ಕೆಲಸ ಕಾರ್ಯಗಳಿಗೆ ಹೊರಟಿದ್ದ ಜನರ ಓಡಾಟಕ್ಕೆ ಅಡಚಣೆಯಾಗಿರುವುದು ಕಂಡು ಬಂತು.

ಭಾರತದ ಬಹುತೇಕ ಕಡೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ರಾತ್ರಿಯಿಂದ ಬಾರಿ ಮಳೆಯಾಗುತ್ತಿದೆ. ಹದಿನೈದು ದಿನ ತಡವಾಗಿ ಆಗಮಿಸದ ಮುಂಗಾರು ದೆಹಲಿ ಮತ್ತು ಸುತ್ತ ಮುತ್ತಲಿನ ಗುರುಗ್ರಾಮ, ಫರಿದಾಬಾದ್ ಪ್ರದೇಶಗಳಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅನೇಕರು ಮನೆ ಬಿಟ್ಟು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರಾಖಂಡ, ಜಮ್ಮು, ಪಂಜಾಬ್, ರಾಜಸ್ಥಾನದಂತಹ ಅನೇಕ ರಾಜ್ಯಗಳಲ್ಲಿ ನೈಸರ್ಗಿಕ ವಿಕೋಪಕ್ಕೆ ಇದುವರೆಗೆ 75 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಾರಿ ಮಳೆ ಮತ್ತು ಗುಡುಗಿನ ಆರ್ಭಟಕ್ಕೆ ಉತ್ತರ ಭಾರತದ ಅನೇಕ ನಗರಗಳಲ್ಲಿ ಜನಜೀವನ ಅಸ್ಥವ್ಯಸ್ಥವಾಗಿದ್ದು ಮನೆಗಳು ನೀರಿನಲ್ಲಿ ಮುಳುಗಡೆಯಾಗಿವೆ . ಹಿಮಾಚಲ ಮತ್ತು ಉತ್ತರಾಖಂಡದ ಹಲವಾರು ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಉತ್ತರಪ್ರದೇಶದಲ್ಲಿ ಮಿಂಚಿನಿಂದ ಸುಮಾರು 40 ಜನರು ಸಾವನ್ನಪ್ಪಿದ್ದಾರೆ, ಮಧ್ಯಪ್ರದೇಶದಲ್ಲಿ ಸುಮಾರು 20 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಹಿಮಾಚಲದ ಕಾಂಗ್ರಾ ಮತ್ತು ಡಾಲ್‌ಹೌಸಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಸೋಮವಾರದಿಂದ ನಿರಂತರ ಮಳೆ ಸುರಿಯುತ್ತಿದೆ.  ಧರ್ಮಶಾಲಾ ನಗರವು ಸಂಪೂರ್ಣ ಜಲಾವೃತವಾಗಿದೆ. ಬೃಹತ್ ಮೋಡಗಳು ಸ್ಫೋಟಗೊಂಡು ಇದ್ದಕ್ಕಿದ್ದಂತೆ ಪ್ರವಾಹೋಪಾದಿಯಲ್ಲಿ ಮಳೆ ಸುರಿಯಲು ಆರಂಭಿಸಿದ ಕಾರಣ ಅನೇಕ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಪ್ರವಾಹದಲ್ಲಿ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿರುವುದು  ವರದಿಯಾಗಿದೆ.   

ಇದನ್ನೂ ಓದಿ: ರಾಜ್ಯದ ಹಲವೆಡೆ ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬಗಳು-ನದಿ ನೀರಿನ ಮಟ್ಟದಲ್ಲಿ ಹೆಚ್ಚಳ

ನೈಸರ್ಗಿಕ ವಿಪತ್ತನ್ನು ಅರಿತುಕೊಂಡು ಕೇಂದ್ರ ಗೃಹ ಸಚಿವಾಲಯವು ಹಿಮಾಚಲ ಪ್ರದೇಶ  ರಾಜ್ಯ ಸರ್ಕಾರಕ್ಕೆ ಎಲ್ಲಾ ಸಹಾಯವನ್ನು ನೀಡಲು ಮುಂದಾಗಿರುವುದಾಗಿ ಹೇಳಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಎನ್‌ಡಿಆರ್‌ಎಫ್‌ ತಂಡಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಕಳುಹಿಸಿಕೊಟ್ಟಿರುವುದಾಗಿ ಕೇಂದ್ರ  ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

 ರಾಜಸ್ಥಾನದ ಕೆಲವು ಭಾಗಗಳಲ್ಲಿಮಿಂಚಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ  ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಮೋದಿ    ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. 

   

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...