Homeಮುಖಪುಟಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ -ಸಿಡಿಲಿನ ಹೊಡೆತಕ್ಕೆ 75 ಸಾವು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ -ಸಿಡಿಲಿನ ಹೊಡೆತಕ್ಕೆ 75 ಸಾವು

ಹಿಮಾಚಲ ಪ್ರದೇಶದಲ್ಲಿ, ಕಾಂಗ್ರಾ ಮತ್ತು ಡಾಲ್‌ಹೌಸಿ ಸೇರಿದಂತೆ ಹಲವಾರು ಜಿಲ್ಲೆಗಳು ಜಲಾವೃತವಾಗಿವೆ. ಧರ್ಮಶಾಲಾದಲ್ಲಿ ಮೋಡ ಸ್ಫೋಟಕ್ಕೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -
- Advertisement -

ಕರ್ನಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಜೂನ್ 11 ರಿಂದ ಬಾರಿ ಮಳೆಯಾಗುತ್ತಿದ್ದು ಗುಡುಗು ಸಿಡಿಲಿನ ಆರ್ಭಟಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಭಾನುವಾರ ರಾತ್ರಿ ಬಾರಿ ಮಿಂಚು ಮತ್ತು ಸಿಡಿಲಿನ ಆಘಾತಕ್ಕೆ ಜನರು ಮೃತಪಟ್ಟಿರುವ ಘಟನೆ ವರದಿಯಾಗಿತ್ತು. ಮಂಗಳವಾರದ ಹೊತ್ತಿಗೆ ಸಿಡಿಲಿನ ಹೊಡೆತಕ್ಕೆ ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬಿಡುವು ನೀಡಿದ್ದ ಮಳೆ ಮಂಗಳವಾರ ಮುಂಜಾನೆಯಿಂದಲೇ ಮತ್ತೆ ಚುರುಕುಗೊಂಡಿದೆ. ನಗರದ ಹನುಮಂತ ನಗರ, ಬಸವನಗುಡಿ, ಕೆ.ಆರ್‌. ಮಾರ್ಕೆಟ್ ಸೇರಿದಂತೆ ಇಂದು ಮುಂಜಾನೆಯಿಂದಲೇ ಮಳೆ ಹೊಡೆಯುತ್ತಿದ್ದು ಕೆಲಸ ಕಾರ್ಯಗಳಿಗೆ ಹೊರಟಿದ್ದ ಜನರ ಓಡಾಟಕ್ಕೆ ಅಡಚಣೆಯಾಗಿರುವುದು ಕಂಡು ಬಂತು.

ಭಾರತದ ಬಹುತೇಕ ಕಡೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ರಾತ್ರಿಯಿಂದ ಬಾರಿ ಮಳೆಯಾಗುತ್ತಿದೆ. ಹದಿನೈದು ದಿನ ತಡವಾಗಿ ಆಗಮಿಸದ ಮುಂಗಾರು ದೆಹಲಿ ಮತ್ತು ಸುತ್ತ ಮುತ್ತಲಿನ ಗುರುಗ್ರಾಮ, ಫರಿದಾಬಾದ್ ಪ್ರದೇಶಗಳಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅನೇಕರು ಮನೆ ಬಿಟ್ಟು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರಾಖಂಡ, ಜಮ್ಮು, ಪಂಜಾಬ್, ರಾಜಸ್ಥಾನದಂತಹ ಅನೇಕ ರಾಜ್ಯಗಳಲ್ಲಿ ನೈಸರ್ಗಿಕ ವಿಕೋಪಕ್ಕೆ ಇದುವರೆಗೆ 75 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಾರಿ ಮಳೆ ಮತ್ತು ಗುಡುಗಿನ ಆರ್ಭಟಕ್ಕೆ ಉತ್ತರ ಭಾರತದ ಅನೇಕ ನಗರಗಳಲ್ಲಿ ಜನಜೀವನ ಅಸ್ಥವ್ಯಸ್ಥವಾಗಿದ್ದು ಮನೆಗಳು ನೀರಿನಲ್ಲಿ ಮುಳುಗಡೆಯಾಗಿವೆ . ಹಿಮಾಚಲ ಮತ್ತು ಉತ್ತರಾಖಂಡದ ಹಲವಾರು ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಉತ್ತರಪ್ರದೇಶದಲ್ಲಿ ಮಿಂಚಿನಿಂದ ಸುಮಾರು 40 ಜನರು ಸಾವನ್ನಪ್ಪಿದ್ದಾರೆ, ಮಧ್ಯಪ್ರದೇಶದಲ್ಲಿ ಸುಮಾರು 20 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಹಿಮಾಚಲದ ಕಾಂಗ್ರಾ ಮತ್ತು ಡಾಲ್‌ಹೌಸಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಸೋಮವಾರದಿಂದ ನಿರಂತರ ಮಳೆ ಸುರಿಯುತ್ತಿದೆ.  ಧರ್ಮಶಾಲಾ ನಗರವು ಸಂಪೂರ್ಣ ಜಲಾವೃತವಾಗಿದೆ. ಬೃಹತ್ ಮೋಡಗಳು ಸ್ಫೋಟಗೊಂಡು ಇದ್ದಕ್ಕಿದ್ದಂತೆ ಪ್ರವಾಹೋಪಾದಿಯಲ್ಲಿ ಮಳೆ ಸುರಿಯಲು ಆರಂಭಿಸಿದ ಕಾರಣ ಅನೇಕ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಪ್ರವಾಹದಲ್ಲಿ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿರುವುದು  ವರದಿಯಾಗಿದೆ.   

ಇದನ್ನೂ ಓದಿ: ರಾಜ್ಯದ ಹಲವೆಡೆ ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬಗಳು-ನದಿ ನೀರಿನ ಮಟ್ಟದಲ್ಲಿ ಹೆಚ್ಚಳ

ನೈಸರ್ಗಿಕ ವಿಪತ್ತನ್ನು ಅರಿತುಕೊಂಡು ಕೇಂದ್ರ ಗೃಹ ಸಚಿವಾಲಯವು ಹಿಮಾಚಲ ಪ್ರದೇಶ  ರಾಜ್ಯ ಸರ್ಕಾರಕ್ಕೆ ಎಲ್ಲಾ ಸಹಾಯವನ್ನು ನೀಡಲು ಮುಂದಾಗಿರುವುದಾಗಿ ಹೇಳಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಎನ್‌ಡಿಆರ್‌ಎಫ್‌ ತಂಡಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಕಳುಹಿಸಿಕೊಟ್ಟಿರುವುದಾಗಿ ಕೇಂದ್ರ  ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

 ರಾಜಸ್ಥಾನದ ಕೆಲವು ಭಾಗಗಳಲ್ಲಿಮಿಂಚಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ  ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಮೋದಿ    ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. 

   

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...