Homeಮುಖಪುಟಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಅಸ್ವಸ್ಥರಾಗಿರುವ 505 ಜನರಲ್ಲಿ 370 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಮತ್ತು ಇನ್ನೂ 120 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
- Advertisement -

ಕಳೆದ ನಾಲ್ಕು ದಿನಗಳಿಂದ ಆಂಧ್ರಪ್ರದೇಶದ ಏಲೂರು ನಗರದಲ್ಲಿ ಕಾಣಿಸಿಕೊಂಡಿರುವ ನಿಗೂಢ ಖಾಯಿಲೆಗೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಈ ನಿಗೂಢ ಕಾಯಿಲೆ ಇದುವರೆಗೆ ಒಂದು ಜೀವವನ್ನು ಬಲಿ ತೆಗೆದುಕೊಂಡಿದ್ದು, 500 ಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಏಮ್ಸ್ ಮತ್ತು ರಾಜ್ಯ ಮತ್ತು ಕೇಂದ್ರ ಸಂಸ್ಥೆಗಳ ತಜ್ಞರ ತಂಡಗಳ ಪ್ರಾಥಮಿಕ ಸಂಶೋಧನೆಗಳ ಆಧಾರದ ಮೇಲೆ ಆರೋಗ್ಯ ಅಧಿಕಾರಿಗಳು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರಿಗೆ ವರದಿ ಸಲ್ಲಿಸಿದರು.

ಏಮ್ಸ್ ತಜ್ಞರು ಸಿದ್ಧಪಡಿಸಿದ ವರದಿಯನ್ನು ಉಲ್ಲೇಖಿಸಿ ಸೀಸ ಮತ್ತು ನಿಕ್ಕಲ್ ಅಂಶವೇ ನಿಗೂಢ ಕಾಯಿಲೆಗೆ ಕಾರಣವಾಗಿರುವ ಅಂಶಗಳಾಗಿವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

 

ಕಳೆದ ಶನಿವಾರ ರಾತ್ರಿಯಿಂದ ಫಿಟ್ಸ್ ಮತ್ತು ವಾಕರಿಕೆಗಳಿಂದ ಬಳಲುತ್ತಿದ್ದ ಜನರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬೀಳುತ್ತಿದ್ದರು. 3-5 ನಿಮಿಷಗಳ ಕಾಲ ವಾಂತಿ, ಕೆಲವು ನಿಮಿಷಗಳವರೆಗೆ ಮರೆವು, ಆತಂಕ, ವಾಂತಿ, ತಲೆನೋವು ಮತ್ತು ಬೆನ್ನು ನೋವಿನಿಂದ ಜನರು ಪರದಾಡುತ್ತಿದ್ದರು ಎಂದು ಜಿಜಿಹೆಚ್ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿ: ದೇಶಾದ್ಯಂತದ ಹೋರಾಟದ ಚಿತ್ರಗಳು

“ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಮತ್ತು ಇತರ ಸಂಸ್ಥೆಗಳು ಹೆಚ್ಚಿನ ಪರೀಕ್ಷೆಗಳನ್ನು ನಡೆಸುತ್ತಿವೆ ಮತ್ತು ಶೀಘ್ರದಲ್ಲೇ ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ. ರೋಗಿಗಳ ದೇಹದಲ್ಲಿ ಸೀಸ ಮತ್ತು ನಿಕ್ಕಲ್ ಲೋಹದ ಅಂಶ ಹೆಚ್ಚಿದ್ದು, ಸಮಗ್ರ ತನಿಖೆ ನಡೆಸಲು ಮತ್ತು ರೋಗಿಗಳ ಚಿಕಿತ್ಸೆ ಮೇಲೆ ನಿರಂತರವಾಗಿ ನಿಗಾವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಸ್ವಸ್ಥರಾಗಿರುವ 505 ಜನರಲ್ಲಿ 370 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಮತ್ತು ಇನ್ನೂ 120 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯವಾಡ ಮತ್ತು ಗುಂಟೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಇನ್ನೂ 19 ಜನರನ್ನು ಉತ್ತಮ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಏಲೂರಿನ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ನಿಯೋಜಿಸಿರುವ ತಜ್ಞರ ಹೊರತಾಗಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಚಿಸಿದ ಮೂವರು ಸದಸ್ಯರ ತಂಡವು ಮಂಗಳವಾರ ಎಲೂರಿಗೆ ಆಗಮಿಸಿ, ಮಾದರಿಗಳನ್ನು ಸಂಗ್ರಹಿಸಲು ನಿಗೂಢ ಕಾಯಿಲೆ ಹರಡಿರುವ ಪ್ರದೇಶಗಳನ್ನು ಸುತ್ತುವರೆದಿದೆ.

ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಏಲೂರಿಗೆ ಭೇಟಿ ನೀಡಿದ್ದು, ರೋಗಿಗಳ ಯೋಗಕ್ಷೇಮ ವಿಚಾರಿಸಿದ್ದಾರೆ.  ಸಂತ್ರಸ್ತರು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ಅಲ್ಲಾ ಕಾಳಿ ಕೃಷ್ಣ ಶ್ರೀನಿವಾಸ್ ಹೇಳಿದ್ದರು.

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ತಂಡವು ನಡೆಸಿದ ತನಿಖೆಯಲ್ಲಿ ರೋಗಿಗಳ ರಕ್ತದ ಮಾದರಿಗಳಲ್ಲಿ ಸೀಸ ಮತ್ತು ನಿಕ್ಕಲ್ ಕಣಗಳು ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸಹ ಪರೀಕ್ಷೆಗಳನ್ನು ನಡೆಸುತ್ತಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.

ಸೀಸ ಮತ್ತು ನಿಕ್ಕಲ್ ಕಣಗಳು ವಿಷಕಾರಿ ಕೈಗಾರಿಕಾ ತ್ಯಾಜ್ಯ ವಿಸರ್ಜನೆಯಾಗಿರಬಹುದು, ಅದು ಕುಡಿಯುವ ನೀರಿನೊಂದಿಗೆ ಬೆರೆತುಹೋಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ: ಭಾರತದಲ್ಲಿ ಕೊರೊನಾ ಲಸಿಕೆ ಬಳಕೆಗೆ ಅನುಮತಿ ಕೋರಿದ ಫೈಝರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...