Homeಮುಖಪುಟಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಅಸ್ವಸ್ಥರಾಗಿರುವ 505 ಜನರಲ್ಲಿ 370 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಮತ್ತು ಇನ್ನೂ 120 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
- Advertisement -

ಕಳೆದ ನಾಲ್ಕು ದಿನಗಳಿಂದ ಆಂಧ್ರಪ್ರದೇಶದ ಏಲೂರು ನಗರದಲ್ಲಿ ಕಾಣಿಸಿಕೊಂಡಿರುವ ನಿಗೂಢ ಖಾಯಿಲೆಗೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಈ ನಿಗೂಢ ಕಾಯಿಲೆ ಇದುವರೆಗೆ ಒಂದು ಜೀವವನ್ನು ಬಲಿ ತೆಗೆದುಕೊಂಡಿದ್ದು, 500 ಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಏಮ್ಸ್ ಮತ್ತು ರಾಜ್ಯ ಮತ್ತು ಕೇಂದ್ರ ಸಂಸ್ಥೆಗಳ ತಜ್ಞರ ತಂಡಗಳ ಪ್ರಾಥಮಿಕ ಸಂಶೋಧನೆಗಳ ಆಧಾರದ ಮೇಲೆ ಆರೋಗ್ಯ ಅಧಿಕಾರಿಗಳು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರಿಗೆ ವರದಿ ಸಲ್ಲಿಸಿದರು.

ಏಮ್ಸ್ ತಜ್ಞರು ಸಿದ್ಧಪಡಿಸಿದ ವರದಿಯನ್ನು ಉಲ್ಲೇಖಿಸಿ ಸೀಸ ಮತ್ತು ನಿಕ್ಕಲ್ ಅಂಶವೇ ನಿಗೂಢ ಕಾಯಿಲೆಗೆ ಕಾರಣವಾಗಿರುವ ಅಂಶಗಳಾಗಿವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

 

ಕಳೆದ ಶನಿವಾರ ರಾತ್ರಿಯಿಂದ ಫಿಟ್ಸ್ ಮತ್ತು ವಾಕರಿಕೆಗಳಿಂದ ಬಳಲುತ್ತಿದ್ದ ಜನರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬೀಳುತ್ತಿದ್ದರು. 3-5 ನಿಮಿಷಗಳ ಕಾಲ ವಾಂತಿ, ಕೆಲವು ನಿಮಿಷಗಳವರೆಗೆ ಮರೆವು, ಆತಂಕ, ವಾಂತಿ, ತಲೆನೋವು ಮತ್ತು ಬೆನ್ನು ನೋವಿನಿಂದ ಜನರು ಪರದಾಡುತ್ತಿದ್ದರು ಎಂದು ಜಿಜಿಹೆಚ್ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿ: ದೇಶಾದ್ಯಂತದ ಹೋರಾಟದ ಚಿತ್ರಗಳು

“ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಮತ್ತು ಇತರ ಸಂಸ್ಥೆಗಳು ಹೆಚ್ಚಿನ ಪರೀಕ್ಷೆಗಳನ್ನು ನಡೆಸುತ್ತಿವೆ ಮತ್ತು ಶೀಘ್ರದಲ್ಲೇ ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ. ರೋಗಿಗಳ ದೇಹದಲ್ಲಿ ಸೀಸ ಮತ್ತು ನಿಕ್ಕಲ್ ಲೋಹದ ಅಂಶ ಹೆಚ್ಚಿದ್ದು, ಸಮಗ್ರ ತನಿಖೆ ನಡೆಸಲು ಮತ್ತು ರೋಗಿಗಳ ಚಿಕಿತ್ಸೆ ಮೇಲೆ ನಿರಂತರವಾಗಿ ನಿಗಾವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಸ್ವಸ್ಥರಾಗಿರುವ 505 ಜನರಲ್ಲಿ 370 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಮತ್ತು ಇನ್ನೂ 120 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯವಾಡ ಮತ್ತು ಗುಂಟೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಇನ್ನೂ 19 ಜನರನ್ನು ಉತ್ತಮ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಏಲೂರಿನ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ನಿಯೋಜಿಸಿರುವ ತಜ್ಞರ ಹೊರತಾಗಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಚಿಸಿದ ಮೂವರು ಸದಸ್ಯರ ತಂಡವು ಮಂಗಳವಾರ ಎಲೂರಿಗೆ ಆಗಮಿಸಿ, ಮಾದರಿಗಳನ್ನು ಸಂಗ್ರಹಿಸಲು ನಿಗೂಢ ಕಾಯಿಲೆ ಹರಡಿರುವ ಪ್ರದೇಶಗಳನ್ನು ಸುತ್ತುವರೆದಿದೆ.

ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಏಲೂರಿಗೆ ಭೇಟಿ ನೀಡಿದ್ದು, ರೋಗಿಗಳ ಯೋಗಕ್ಷೇಮ ವಿಚಾರಿಸಿದ್ದಾರೆ.  ಸಂತ್ರಸ್ತರು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ಅಲ್ಲಾ ಕಾಳಿ ಕೃಷ್ಣ ಶ್ರೀನಿವಾಸ್ ಹೇಳಿದ್ದರು.

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ತಂಡವು ನಡೆಸಿದ ತನಿಖೆಯಲ್ಲಿ ರೋಗಿಗಳ ರಕ್ತದ ಮಾದರಿಗಳಲ್ಲಿ ಸೀಸ ಮತ್ತು ನಿಕ್ಕಲ್ ಕಣಗಳು ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸಹ ಪರೀಕ್ಷೆಗಳನ್ನು ನಡೆಸುತ್ತಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.

ಸೀಸ ಮತ್ತು ನಿಕ್ಕಲ್ ಕಣಗಳು ವಿಷಕಾರಿ ಕೈಗಾರಿಕಾ ತ್ಯಾಜ್ಯ ವಿಸರ್ಜನೆಯಾಗಿರಬಹುದು, ಅದು ಕುಡಿಯುವ ನೀರಿನೊಂದಿಗೆ ಬೆರೆತುಹೋಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ: ಭಾರತದಲ್ಲಿ ಕೊರೊನಾ ಲಸಿಕೆ ಬಳಕೆಗೆ ಅನುಮತಿ ಕೋರಿದ ಫೈಝರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...