Homeಮುಖಪುಟಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಅಸ್ವಸ್ಥರಾಗಿರುವ 505 ಜನರಲ್ಲಿ 370 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಮತ್ತು ಇನ್ನೂ 120 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
- Advertisement -

ಕಳೆದ ನಾಲ್ಕು ದಿನಗಳಿಂದ ಆಂಧ್ರಪ್ರದೇಶದ ಏಲೂರು ನಗರದಲ್ಲಿ ಕಾಣಿಸಿಕೊಂಡಿರುವ ನಿಗೂಢ ಖಾಯಿಲೆಗೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಈ ನಿಗೂಢ ಕಾಯಿಲೆ ಇದುವರೆಗೆ ಒಂದು ಜೀವವನ್ನು ಬಲಿ ತೆಗೆದುಕೊಂಡಿದ್ದು, 500 ಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಏಮ್ಸ್ ಮತ್ತು ರಾಜ್ಯ ಮತ್ತು ಕೇಂದ್ರ ಸಂಸ್ಥೆಗಳ ತಜ್ಞರ ತಂಡಗಳ ಪ್ರಾಥಮಿಕ ಸಂಶೋಧನೆಗಳ ಆಧಾರದ ಮೇಲೆ ಆರೋಗ್ಯ ಅಧಿಕಾರಿಗಳು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರಿಗೆ ವರದಿ ಸಲ್ಲಿಸಿದರು.

ಏಮ್ಸ್ ತಜ್ಞರು ಸಿದ್ಧಪಡಿಸಿದ ವರದಿಯನ್ನು ಉಲ್ಲೇಖಿಸಿ ಸೀಸ ಮತ್ತು ನಿಕ್ಕಲ್ ಅಂಶವೇ ನಿಗೂಢ ಕಾಯಿಲೆಗೆ ಕಾರಣವಾಗಿರುವ ಅಂಶಗಳಾಗಿವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

 

ಕಳೆದ ಶನಿವಾರ ರಾತ್ರಿಯಿಂದ ಫಿಟ್ಸ್ ಮತ್ತು ವಾಕರಿಕೆಗಳಿಂದ ಬಳಲುತ್ತಿದ್ದ ಜನರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬೀಳುತ್ತಿದ್ದರು. 3-5 ನಿಮಿಷಗಳ ಕಾಲ ವಾಂತಿ, ಕೆಲವು ನಿಮಿಷಗಳವರೆಗೆ ಮರೆವು, ಆತಂಕ, ವಾಂತಿ, ತಲೆನೋವು ಮತ್ತು ಬೆನ್ನು ನೋವಿನಿಂದ ಜನರು ಪರದಾಡುತ್ತಿದ್ದರು ಎಂದು ಜಿಜಿಹೆಚ್ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿ: ದೇಶಾದ್ಯಂತದ ಹೋರಾಟದ ಚಿತ್ರಗಳು

“ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಮತ್ತು ಇತರ ಸಂಸ್ಥೆಗಳು ಹೆಚ್ಚಿನ ಪರೀಕ್ಷೆಗಳನ್ನು ನಡೆಸುತ್ತಿವೆ ಮತ್ತು ಶೀಘ್ರದಲ್ಲೇ ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ. ರೋಗಿಗಳ ದೇಹದಲ್ಲಿ ಸೀಸ ಮತ್ತು ನಿಕ್ಕಲ್ ಲೋಹದ ಅಂಶ ಹೆಚ್ಚಿದ್ದು, ಸಮಗ್ರ ತನಿಖೆ ನಡೆಸಲು ಮತ್ತು ರೋಗಿಗಳ ಚಿಕಿತ್ಸೆ ಮೇಲೆ ನಿರಂತರವಾಗಿ ನಿಗಾವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಸ್ವಸ್ಥರಾಗಿರುವ 505 ಜನರಲ್ಲಿ 370 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಮತ್ತು ಇನ್ನೂ 120 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯವಾಡ ಮತ್ತು ಗುಂಟೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಇನ್ನೂ 19 ಜನರನ್ನು ಉತ್ತಮ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಏಲೂರಿನ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ನಿಯೋಜಿಸಿರುವ ತಜ್ಞರ ಹೊರತಾಗಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಚಿಸಿದ ಮೂವರು ಸದಸ್ಯರ ತಂಡವು ಮಂಗಳವಾರ ಎಲೂರಿಗೆ ಆಗಮಿಸಿ, ಮಾದರಿಗಳನ್ನು ಸಂಗ್ರಹಿಸಲು ನಿಗೂಢ ಕಾಯಿಲೆ ಹರಡಿರುವ ಪ್ರದೇಶಗಳನ್ನು ಸುತ್ತುವರೆದಿದೆ.

ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಏಲೂರಿಗೆ ಭೇಟಿ ನೀಡಿದ್ದು, ರೋಗಿಗಳ ಯೋಗಕ್ಷೇಮ ವಿಚಾರಿಸಿದ್ದಾರೆ.  ಸಂತ್ರಸ್ತರು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ಅಲ್ಲಾ ಕಾಳಿ ಕೃಷ್ಣ ಶ್ರೀನಿವಾಸ್ ಹೇಳಿದ್ದರು.

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ತಂಡವು ನಡೆಸಿದ ತನಿಖೆಯಲ್ಲಿ ರೋಗಿಗಳ ರಕ್ತದ ಮಾದರಿಗಳಲ್ಲಿ ಸೀಸ ಮತ್ತು ನಿಕ್ಕಲ್ ಕಣಗಳು ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸಹ ಪರೀಕ್ಷೆಗಳನ್ನು ನಡೆಸುತ್ತಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.

ಸೀಸ ಮತ್ತು ನಿಕ್ಕಲ್ ಕಣಗಳು ವಿಷಕಾರಿ ಕೈಗಾರಿಕಾ ತ್ಯಾಜ್ಯ ವಿಸರ್ಜನೆಯಾಗಿರಬಹುದು, ಅದು ಕುಡಿಯುವ ನೀರಿನೊಂದಿಗೆ ಬೆರೆತುಹೋಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ: ಭಾರತದಲ್ಲಿ ಕೊರೊನಾ ಲಸಿಕೆ ಬಳಕೆಗೆ ಅನುಮತಿ ಕೋರಿದ ಫೈಝರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...