Homeಕರ್ನಾಟಕಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ: ಹವಮಾನ ಇಲಾಖೆ ಮುನ್ಸೂಚನೆ

ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ: ಹವಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ‘ಯಲ್ಲೊ ಅಲರ್ಟ್‌’ ಘೋಷಿಸಿದೆ.

ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬುಧವಾರ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ‘ಯಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ಈ ವರ್ಷ, ಬೆಂಗಳೂರಿನಲ್ಲಿ 1,706 ಮಿಮೀ ದಾಖಲೆಯ ಮಳೆ ಸುರಿದಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2017 ರಲ್ಲಿ ರಾಜ್ಯ ರಾಜಧಾನಿಯಲ್ಲಿ 1,696 ಮಿಮೀ ಮಳೆ ಸುರಿದಿದ್ದ ದಾಖಲಾಗಿತ್ತು.

ಏನಿವು ಗ್ರೀನ್‌, ಆರೆಂಜ್‌, ಯಲ್ಲೊ ಮತ್ತು ರೆಡ್‌ ಅಲರ್ಟ್‌ಗಳು?

ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಹಸಿರು, ಕಿತ್ತಳೆ, ಕೆಂಪು ಮತ್ತು ಹಳದಿ ಅಲರ್ಟ್‌ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ ಎಂಬುದನ್ನು ಕೆಳಗೆ ಸಂಕ್ಷಿಪ್ತವಾಗಿ ನೀಡಲಾಗಿದೆ.

ನಮ್ಮ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (IMD)ಯು ಈ ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ವಿಭಿನ್ನ ಸಂದೇಶಗಳನ್ನು ವಿವರಿಸಲು 4 ವಿಭಿನ್ನ ಬಣ್ಣದ ಕೋಡ್‌ಗಳನ್ನು ಬಳಸುತ್ತದೆ. ಹಸಿರು, ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣದ ಎಚ್ಚರಿಕೆಗಳನ್ನು ನೀಡುತ್ತದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

1. ಹಸಿರು ಎಚ್ಚರಿಕೆ (ಗ್ರೀನ್ ಅಲರ್ಟ್)

ಗ್ರೀನ್ ಅಲರ್ಟ್ ಎಂದರೆ ಸಾಮಾನ್ಯವಾಗಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿವೆ ಎಂದರ್ಥ. ಬಹುತೇಕ ಸಮಯದಲ್ಲಿ ಈ ಅಲರ್ಟ್ ಜಾರಿಯಲ್ಲಿರುತ್ತದೆ. ಅಲ್ಲದೆ ಈ ಎಚ್ಚರಿಕೆಯ ಸಮಯದಲ್ಲಿ ಭಾರತೀಯ ಹವಾಮಾನ ಇಲಾಖೆಯು ನಾಗರೀಕರಿಗೆ ಯಾವುದೇ ಸಲಹೆಯನ್ನು ನೀಡುವುದಿಲ್ಲ.

2. ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್)

ಹವಾಮಾನ ಇಲಾಖೆಯು ಜನರಿಗೆ ಎಚ್ಚರಿಕೆ ನೀಡಲು ಹಳದಿ ಅಲರ್ಟ್ ಅನ್ನು ನೀಡುತ್ತದೆ. 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗಲಿದ್ದು, ಇದು ಮುಂದಿನ 1 ಅಥವಾ 2 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದಾಗ ಇದನ್ನು ಹೊರಡಿಸುತ್ತದೆ. ಅಂದರೆ ಇದು ಕೇವಲ ಮುಂದೊದಗಬಹುದಾದ ಅಪಾಯದ ಬಗ್ಗೆ ಎಚ್ಚರವಿರಲಿ ಎಂದರ್ಥ. ಹಳದಿ ಎಚ್ಚರಿಕೆಯ ಸಮಯದಲ್ಲಿ ಹವಾಮಾನವನ್ನು ನಿರಂತರವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

3. ಕಿತ್ತಳೆ ಎಚ್ಚರಿಕೆ (ಆರೆಂಜ್ ಅಲರ್ಟ್)

ಹವಾಮಾನವು ಹದಗೆಟ್ಟಾಗ, ಹಳದಿ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಆಗಿ ಬದಲಾಯಿಸಲಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆ. “ಈ ಚಂಡಮಾರುತವು ಹವಾಮಾನ ಪರಿಸ್ಥಿತಿಗಳು ಹದಗೆಡಲು ಕಾರಣವಾಗಬಹುದು. ಇದು ರಸ್ತೆ ಮತ್ತು ವಾಯು ಸಾರಿಗೆಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀವ ಮತ್ತು ಆಸ್ತಿ ನಷ್ಟವನ್ನು ಉಂಟುಮಾಡಬಹುದು” ಎಂಬುದನ್ನು ಆರೆಂಜ್ ಅಲರ್ಟ್ ವಿವರಿಸುತ್ತದೆ.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗುತ್ತದೆ. ಅಂತಹ ಪರಿಸ್ಥಿತಿಗಳಲ್ಲಿ ಗಾಳಿಯ ವೇಗ ಗಂಟೆಗೆ 65 ರಿಂದ 75 ಕಿಮೀ ಮತ್ತು 15 ರಿಂದ 33 ಮಿಮೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದಾಗ ಮಳೆ ಪೀಡಿತ ಪ್ರದೇಶದಲ್ಲಿ ಅಪಾಯಕಾರಿ ಪ್ರವಾಹದ ಸಾಧ್ಯತೆಯಿರುವುದರಿಂದ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಲಾಗುತ್ತದೆ.

4. ಕೆಂಪು ಎಚ್ಚರಿಕೆ (ರೆಡ್ ಅಲರ್ಟ್)

ರೆಡ್ ಅಲರ್ಟ್ ಎಂದರೆ ಅಪಾಯಕಾರಿ ಪರಿಸ್ಥಿತಿ ಎಂದರ್ಥ. ಇದು ಅಂತಿಮ ಎಚ್ಚರಿಕೆಯಾಗಿದೆ. ಈ ಸಮಯದಲ್ಲಿ ಜನರು ಹೊರಗಡೆ ಹೋಗದಂತೆ ಸೂಚಿಸಲಾಗುತ್ತದೆ. ಚಂಡಮಾರುತವು ಗಂಟೆಗೆ 130 ಕಿಮೀ ಗಾಳಿಯ ವೇಗದ ತೀವ್ರತೆಯೊಂದಿಗೆ ಬೀಸಿದಾಗ ಮತ್ತು ತೀವ್ರ ಮಳೆ ಬಂದಾಗ ಭಾರತೀಯ ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ ನೀಡುತ್ತದೆ. ಆ ಪ್ರದೇಶದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ.

ಹವಾಮಾನವು ಅಪಾಯಕಾರಿ ಮಟ್ಟಕ್ಕೆ ತಲುಪಿದಾಗ ಮತ್ತು ಭಾರೀ ಹಾನಿಯ ಅಪಾಯವಿದ್ದರೆ, ಆಗ ರೆಡ್ ಅಲರ್ಟ್ ನೀಡಲಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. 30 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಮತ್ತು ಕನಿಷ್ಠ 2 ಗಂಟೆಗಳ ಕಾಲ ಇದು ಮುಂದುವರಿಯುವ ಸಾಧ್ಯತೆ ಇದ್ದಾಗ ಮಾತ್ರ ಈ ರೀತಿಯ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಅಪಾಯವು ಹಲವಾರು ಪಟ್ಟು ಹೆಚ್ಚಾಗುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಸಾಧ್ಯವಿಲ್ಲ: ಬೊಮ್ಮಾಯಿ

ಈ ಎಚ್ಚರಿಕೆಗಳನ್ನು ಟಿವಿ, ರೆಡಿಯೋ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಹವಾಮಾನ ಇಲಾಖೆ ಹೊರಡಿಸುತ್ತದೆ. ಇವುಗಳನ್ನು ಜನರು ಪಾಲಿಸುವುದು ಸುರಕ್ಷತೆಯ ದೃಷ್ಟಿಯಿಂದ ಒಳ್ಳೆಯದು. ಅಲ್ಲದೆ ಇದರಿಂದ ತೀವ್ರ ಮಳೆ ಸಂದರ್ಭದಲ್ಲಿ ಹೆಚ್ಚಿನ ಜೀವ ಹಾನಿಯಾಗದಂತೆ ತಡೆಯಲು ಸ್ಥಳೀಯ ಆಡಳಿತಗಳಿಗೆ ಸಹಕಾರಿಯಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...