Homeಕರ್ನಾಟಕರಾಜ್ಯದ ಹಲವೆಡೆ ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬಗಳು-ನದಿ ನೀರಿನ ಮಟ್ಟದಲ್ಲಿ ಹೆಚ್ಚಳ

ರಾಜ್ಯದ ಹಲವೆಡೆ ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬಗಳು-ನದಿ ನೀರಿನ ಮಟ್ಟದಲ್ಲಿ ಹೆಚ್ಚಳ

- Advertisement -
- Advertisement -

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಉತ್ತಮ  ಮಳೆಯಾಗುತ್ತಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಕೂಡ ವರುಣನ ಆರ್ಭಟ ಮುಂದುವರೆದಿದ್ದು ಅನೇಕ ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗಿರುವ ಘಟನೆಗಳು ವರದಿಯಾಗಿವೆ. ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ನೀಡಿದೆ. ಮುಂದಿನ ಒಂದು ವಾರ ಕರಾವಳಿ, ಮಲೆನಾಡಿನಲ್ಲಿ ಜಡಿ ಮಳೆ ಮುಂದುವೆರೆಯುವ ನಿರೀಕ್ಷೆ ಇದೆ. ಜಿಲ್ಲಾಡಳಿತಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ಕಳೆದ 2 ದಿನಗಳಿಂದ ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿದೆ. ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿಯೂ ಕಳೆದೆರಡು ದಿನಗಳಿಂದ ಮಳೆ ಸುರಿಯು‌ತ್ತಿದ್ದು ಶೀತ ಹವಮಾನ ಇದೆ. ಮಳೆಯ ವಾತಾವರಣ ಮುಂದಿನ ಒಂದು ವಾರ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ: ಹವಾಮಾನ ಇಲಾಖೆ ಮಾಹಿತಿ

ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರ ತನಕ ಮಳೆ ಆರ್ಭಟ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಬಂಟ್ವಾಳದಲ್ಲಿ ತಡೆಗೋಡೆ ಉರುಳಿ ಬಿದ್ದು ಮಗು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಜಿಲ್ಲೆಯ ಬಂಟ್ವಾಳ, ಸುಳ್ಯ, ಮಂಗಳೂರಿನಲ್ಲಿ ಧಾರಾಕಾರ ಮಳೆಗೆ ವಿದ್ಯುತ್‌ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳ

ಉಡುಪಿ ಜಿಲ್ಲೆಯಲ್ಲೂ ಮಳೆ ಹೊಡೆತ ಮುಂದುವರೆದಿದ್ದು,ಕಾರ್ಕಳ, ಹೆಬ್ರಿ, ಕಾಪು ಮತ್ತು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಶೃಂಗೇರಿ, ಕೊಪ್ಪ ಮತ್ತು ಎನ್‌. ಆರ್. ಪುರದಲ್ಲಿ ಸಾಧಾರಣ ಮಳೆ ಸುರಿದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿಯ ಕೋಣಂದೂರು, ಸೊರಬ, ಶಿಕಾರಿಪುರದಲ್ಲಿ ಸಾಧಾರಣ ಮಳೆಯಾಗಿದ್ದರೆ, ಹೊಸನಗರಲ್ಲಿ ಹೆಚ್ಚಿನ ಮಳೆಯಾಗಿದೆ.

ಮಹಾರಾಷ್ಟ್ರ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಬೀದರ್‌ನಲ್ಲಿ ಮಾಂಜ್ರಾ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಸಂತಪುರ-ಠಾಣಾಕುಶನೂರ ನಡುವಿನ ರಸ್ತೆ ಕೊಚ್ಚಿ ಹೋಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ. ನದಿ ಪಾತ್ರದ ತಗ್ಗು ಪ್ರದೇಶದ ಜನರಿಗೆ ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂ, ಚಿಂಚೋಳಿ, ಕಮಲಾಪುರ, ಯಡ್ರಾಮಿಯಲ್ಲಿ ಭಾರಿ ಮಳೆಯಾಗಿದೆ. ಬೀದರ್‌ನಲ್ಲಿ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

ಕೃಷ್ಣಾ ನದಿ ಅಚ್ಚುಕಟ್ಟಿನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ವರುಣರಾಯ ಬಿಡುವು ನೀಡಿಲ್ಲ. ಮಹಾರಾಷ್ಟ್ರ, ಬೆಳಗಾವಿ ಸೇರಿದಂತೆ ನದಿ ಪಾತ್ರದಲ್ಲಿ ಸುರಿದ ಭಾರಿ ಮಳೆಯ ಕಾರಣಕ್ಕೆ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಿದ್ದು ಆಲಮಟ್ಟಿ ಭಾಗದ ರೈತರು ಸಂತೋಷಗೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...