Homeಕರ್ನಾಟಕರಾಜ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ನವೆಂಬರ್‌ 18 ವರೆಗೆ ‘ಭಾರಿ ಮಳೆ’: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ನವೆಂಬರ್‌ 18 ವರೆಗೆ ‘ಭಾರಿ ಮಳೆ’: ಹವಾಮಾನ ಇಲಾಖೆ ಎಚ್ಚರಿಕೆ

- Advertisement -
- Advertisement -

ಕೇರಳ, ಕರ್ನಾಟಕದ ಕೆಲವು ಭಾಗಗಳು, ಅಂಡಮಾನ್ ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳ ಕರಾವಳಿ ನವೆಂಬರ್ 18 ರವರೆಗೆ ಭಾರೀ ಮಳೆಗೆ ಸಾಕ್ಷಿಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಎಚ್ಚರಿಸಿದೆ.

ನವೆಂಬರ್ 17 ರ ಸುಮಾರಿಗೆ ದಕ್ಷಿಣ ಮಹಾರಾಷ್ಟ್ರ-ಗೋವಾ ಕರಾವಳಿಯ ಅರೇಬಿಯನ್ ಸಮುದ್ರದ ಮೇಲೆ ಹೊಸತಾಗಿ ವಾಯುಭಾರ ಕುಸಿತ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಇತ್ತೀಚಿನ ಬುಲೆಟಿನ್ ಹೇಳಿದೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ಕೇರಳ, ದಕ್ಷಿಣ ಕರಾವಳಿ ಕರ್ನಾಟಕ ಮತ್ತು ಅಂಡಮಾನ್ ನಿಕೋಬಾರ್ ದ್ವೀಪಗಳು ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ನವೆಂಬರ್ 15 ರಿಂದ 18 ರವರೆಗೆ ‘ಧಾರಾಕಾರ ಮಳೆ’ ಬೀಳುವ ಸಾಧ್ಯತೆಯಿದೆ.

ಮಳೆ ಎಚ್ಚರಿಕೆಯ ಹಿನ್ನಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ತಿರುವನಂತಪುರದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ರಾಜ್ಯದ ಪತ್ತನಂತಿಟ್ಟ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.

ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಕಿ ಮತ್ತು ಇಡುಕ್ಕಿ ಅಣೆಕಟ್ಟುಗಳನ್ನು ತೆರೆಯಲಾಗಿದ್ದು, ವಿದ್ಯುತ್ ಮತ್ತು ಜಲ ಇಲಾಖೆಯಿಂದ ನಿರ್ವಹಿಸಲ್ಪಡುವ ವಿವಿಧ ಅಣೆಕಟ್ಟುಗಳಲ್ಲಿ ನಿಗಾವನ್ನು ತೀವ್ರಗೊಳಿಸಲಾಗಿದೆ.

ಇದನ್ನೂ ಓದಿ: ಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಕೇರಳದಲ್ಲಿ ಪ್ರಸ್ತುತ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಮೂರು ತಂಡಗಳಿದ್ದು, ನಾಲ್ಕನೇ ತಂಡ ನಾಳೆ ಬೆಳಗ್ಗೆ ಕೇರಳ ತಲುಪಲಿದೆ. ಅಗತ್ಯ ಬಿದ್ದರೆ ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಿಗೆ ತೆರಳಲು ರಕ್ಷಣಾ ಸುರಕ್ಷಾ ದಳದ ಎರಡು ತಂಡಗಳು ಸಿದ್ಧವಾಗಿವೆ.

ಈ ಮಧ್ಯೆ, ತಮಿಳುನಾಡು,ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಹಾಗೂ ಕೇರಳದಲ್ಲಿ ನವೆಂಬರ್ 15 ರಿಂದ 17 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 15-16 ರಂದು ಗೋವಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ನವೆಂಬರ್ 16 ಮತ್ತು 17 ರಂದು ಒಡಿಶಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ನವೆಂಬರ್ 14 ಮತ್ತು 15 ರಂದು ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿ, ನವೆಂಬರ್ 16-18 ರ ಅವಧಿಯಲ್ಲಿ ಪಶ್ಚಿಮ-ಮಧ್ಯ ಮತ್ತು ಪಕ್ಕದ ಪೂರ್ವ-ಮಧ್ಯ ಬಂಗಾಳ ಕೊಲ್ಲಿ, ನವೆಂಬರ್ 17 ಮತ್ತು 18 ರಂದು ಆಂಧ್ರ ಪ್ರದೇಶ ಮತ್ತು ದಕ್ಷಿಣ ಒಡಿಶಾ ಮತ್ತು ಉತ್ತರ ತಮಿಳುನಾಡು ಕರಾವಳಿಯಲ್ಲಿ ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಿದೆ.

ಜೊತೆಗೆ, ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರಗಳಲ್ಲಿ ಮೀನುಗಾರಿಕೆಗೆ ತರಳಿರುವ ಮೀನುಗಾರರಿಗೆ ನವೆಂಬರ್ 15 ರೊಳಗೆ ಕರಾವಳಿಗೆ ಮರಳಲು ಇಲಾಖೆ ಸೂಚಿಸಿದೆ.

ಇದನ್ನೂ ಓದಿ: ಗುಜರಾತ್: ರೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ, ಅತ್ಯಾಚಾರದ ಸಂಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...