Homeಮುಖಪುಟಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

ಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

- Advertisement -
- Advertisement -


ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆ ಆರ್ಭಟಕ್ಕೆ ರೈತ-ತೋಟಿಗರ ಬದುಕು ಹೈರಾಣಾಗಿ ಹೋಗಿದೆ. ಜೀವ ಒತ್ತೆಯಿಟ್ಟು ವರ್ಷವಿಡೀ ಬೆವರಿಳಿಸಿ ಬೆಳೆದ ಫಸಲನ್ನು ಮಳೆ ನೀರು ಆಪೋಷನ ಪಡೆದಿದೆ! ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಅನ್ನದಾತ ಕಂಗಾಲಾಗಿ ಕೂತಿದ್ದಾನೆ. ಜಿಲ್ಲೆಯಲ್ಲಿ ಸುಮಾರು 1866 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆಯೆಂದು ಅಂದಾಜಿಸಲಾಗಿದ್ದು, ಶೀಘ್ರ ಪರಿಹಾರಕ್ಕಾಗಿ ಅಳಲಿನ ದ್ವನಿ ಕೇಳಿ ಬರಲಾರಂಭಿಸಿದೆ.

ಉತ್ತರ ಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ಕಬ್ಬು, ಭತ್ತ, ಹತ್ತಿ, ಗೊವಿನ ಜೋಳ, ಅಡಿಕೆ ಬೆಳೆ ಮಳೆ ಹೊಡೆತ ತಾಳಲಾಗದೆ ನೆಲಕಚ್ಚಿದೆ. ಭತ್ತದ ಪೈರಂತೂ ಮಣ್ಣು ಪಾಲಾಗಿದ್ದು, ಅರ್ಧದಷ್ಟು ಉಳಿಸಿಕೊಳ್ಳಲಾಗದೆ ರೈತರು ಹೈರಾಣಾಗಿದ್ದಾರೆ. ಜಿಲ್ಲೆಯಲ್ಲಿ 1840 ಹೆಕ್ಟೇರ್ ಭತ್ತ, 21.4 ಹೆಕ್ಟೇರ್ ಹತ್ತಿ, 4 ಹೆಕ್ಟೇರ್ ಕಬ್ಬು ಬೆಳೆ ಮಳೆಗೆ ಬಲಿಯಾಗಿದೆ.


ಈ ಹಂಗಾಮು ರೈತ ಸಮುದಾಯದ ಭವಿಷ್ಯದ ಬದುಕನ್ನು ಅಯೋಮಯವಾಗಿಸಿದ್ದು, ಮುಂಡಗೋಡಿನಂತ ಪ್ರದೇಶದ ರೈತರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಮಳೆ ನಿಲ್ಲುವ ಅಂದಾಜಿನಲ್ಲಿ ಗೋವಿನ ಜೋಳದ ತೆನೆ ಕೊಯ್ದು ಒಣಗಿಸಲು ಅಣಿಯಾಗುತ್ತಿದ್ದಂತೆಯೆ ಸುರಿಯಲು ಶುರುವಾದ ಮಳೆಯಿಂದ ಗೋವಿನ ಜೋಳದ ಕಾಳುಗಳು ಮೋಳಕೆಯೋಡೆಯುತ್ತಿದ್ದರೆ, ಕಟಾವಿಗೆ ಬಂದ ಮತ್ತು ಕಟಾವಾದ ಭತ್ತ ನೀರು ಪಾಲಾಗಿದೆ. ದುಬಾರಿ ಕೃಷಿ ಕಾರ್ಮಿಕ ಮಜೂರಿ, ಔಷಧ-ಗೊಬ್ಬರ-ಬೀಜ ಸರಿಯಾಗಿ ಸಿಗದಿರುವುದು, ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಬೇಕಾದ ಅನಿವಾರ್ಯತೆಯಂಥ ಹಲವು ಅಡ್ಡಿ-ಆತಂಕದ ನಡುವೆ ಸಾಲ ಮಾಡಿ ಮನೆಯ ಸಣ್ಣ ಮಕ್ಕಳು, ಹೆಂಗಸರೆಲ್ಲ ಜಮೀನಿನಲ್ಲಿ ದುಡಿದು ಬೆಳೆದ ಬೆಳೆ ಕೊನೆಘಳಿಗೆಯಲ್ಲಿ ಕೈಗೆ ಸಿಗದ ಘೋರ ದುರಂತ ಆಗಿಹೋಗಿದೆ ಎಂದು ರೈತರು ಹೇಳುವುದು ಕರುಣಾಜನಕವಾಗಿದೆ.

ಬದುಕಿಗಾಧಾರವಾಗಿದ್ದ ಬೆಳೆ ಮಳೆಗೆ ನಾಶವಾದ ಹತಾಶೆಯಿಂದ ಶಿರಸಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನವಾಸಿ ಬಳಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ [58] ಬೆಳೆದ ಶುಂಠಿ, ಭತ್ತ ಮಳೆಗೆ ಹಾಳಾದ್ದರಿಂದ ನೊಂದು ನ.17ರಂದು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರು ನ.19ರಂದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.


ಫಕೀರಣ್ಣ ಶೇಷಣ್ಣನವರ್

ಭವಿಷ್ಯದ ಬದುಕಿನ ನಿರೀಕ್ಷೆಗಳೆಲ್ಲ ಮಳೆ ಪಾಲಾಗಿ ಹತಾಶವಾಗಿರುವ ರೈತ ಸುಮುದಾಯದ ನೆರವಿಗೆ ನಿಷ್ಟೆ-ಬದ್ದತೆಯಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸಬೇಕಾಗಿದೆ. ಈ ವರ್ಷ ಪೂರ್ಣ ಪ್ರಮಾಣದ ಬೆಳೆ ವಿಮೆಗೆ ತಾವು ಅರ್ಹರೆಂದು ರೈತರು ಹೇಳುತ್ತಿದ್ದಾರೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡು ನೆರವು ನೀಡಲು ಅಡ್ಡಿಯಾಗಿರುವ ವಿಮೆ ಕಂಪನಿಗಳ ಮಾನದಂಡಗಳಿಗೆ ಮೂಗುದಾರ ಹಾಕಬೇಕಿದೆ. ಕಾಟಾಚಾರದ ಪರಿಹಾರ ನೊಂದ ರೈತರಲ್ಲಿ ಆಕ್ರೋಶ ಮೂಡಿಸುವ ಸಾಧ್ಯತೆಯಿದ್ದು, ಗರಿಷ್ಟ ಪರಿಹಾರ ಸಿಗುವಂತೆ ಪ್ರಯತ್ನಿಸುವ ಇಚ್ಛಾ ಶಕ್ತಿಯನ್ನು ಜನಪ್ರತಿನಧಿಗಳು ಪ್ರದರ್ಶಿಸಬೇಕಿದೆ ಎಂದು ರೈತ ಮುಂಖಡರು ಹೇಳುತ್ತಿದ್ದಾರೆ. ಹುಸಿ ಆಸ್ವಾಸನೆಗಳಿಗೆ ಸೀಮಿತವಾಗದೆ ಆತಂಕಿತ ರೈತ ಸಮುದಾಯದಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ.


ಇದನ್ನೂ ಓದಿ: ಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...