Homeಮುಖಪುಟಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

ಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

- Advertisement -
- Advertisement -


ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆ ಆರ್ಭಟಕ್ಕೆ ರೈತ-ತೋಟಿಗರ ಬದುಕು ಹೈರಾಣಾಗಿ ಹೋಗಿದೆ. ಜೀವ ಒತ್ತೆಯಿಟ್ಟು ವರ್ಷವಿಡೀ ಬೆವರಿಳಿಸಿ ಬೆಳೆದ ಫಸಲನ್ನು ಮಳೆ ನೀರು ಆಪೋಷನ ಪಡೆದಿದೆ! ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಅನ್ನದಾತ ಕಂಗಾಲಾಗಿ ಕೂತಿದ್ದಾನೆ. ಜಿಲ್ಲೆಯಲ್ಲಿ ಸುಮಾರು 1866 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆಯೆಂದು ಅಂದಾಜಿಸಲಾಗಿದ್ದು, ಶೀಘ್ರ ಪರಿಹಾರಕ್ಕಾಗಿ ಅಳಲಿನ ದ್ವನಿ ಕೇಳಿ ಬರಲಾರಂಭಿಸಿದೆ.

ಉತ್ತರ ಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ಕಬ್ಬು, ಭತ್ತ, ಹತ್ತಿ, ಗೊವಿನ ಜೋಳ, ಅಡಿಕೆ ಬೆಳೆ ಮಳೆ ಹೊಡೆತ ತಾಳಲಾಗದೆ ನೆಲಕಚ್ಚಿದೆ. ಭತ್ತದ ಪೈರಂತೂ ಮಣ್ಣು ಪಾಲಾಗಿದ್ದು, ಅರ್ಧದಷ್ಟು ಉಳಿಸಿಕೊಳ್ಳಲಾಗದೆ ರೈತರು ಹೈರಾಣಾಗಿದ್ದಾರೆ. ಜಿಲ್ಲೆಯಲ್ಲಿ 1840 ಹೆಕ್ಟೇರ್ ಭತ್ತ, 21.4 ಹೆಕ್ಟೇರ್ ಹತ್ತಿ, 4 ಹೆಕ್ಟೇರ್ ಕಬ್ಬು ಬೆಳೆ ಮಳೆಗೆ ಬಲಿಯಾಗಿದೆ.


ಈ ಹಂಗಾಮು ರೈತ ಸಮುದಾಯದ ಭವಿಷ್ಯದ ಬದುಕನ್ನು ಅಯೋಮಯವಾಗಿಸಿದ್ದು, ಮುಂಡಗೋಡಿನಂತ ಪ್ರದೇಶದ ರೈತರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಮಳೆ ನಿಲ್ಲುವ ಅಂದಾಜಿನಲ್ಲಿ ಗೋವಿನ ಜೋಳದ ತೆನೆ ಕೊಯ್ದು ಒಣಗಿಸಲು ಅಣಿಯಾಗುತ್ತಿದ್ದಂತೆಯೆ ಸುರಿಯಲು ಶುರುವಾದ ಮಳೆಯಿಂದ ಗೋವಿನ ಜೋಳದ ಕಾಳುಗಳು ಮೋಳಕೆಯೋಡೆಯುತ್ತಿದ್ದರೆ, ಕಟಾವಿಗೆ ಬಂದ ಮತ್ತು ಕಟಾವಾದ ಭತ್ತ ನೀರು ಪಾಲಾಗಿದೆ. ದುಬಾರಿ ಕೃಷಿ ಕಾರ್ಮಿಕ ಮಜೂರಿ, ಔಷಧ-ಗೊಬ್ಬರ-ಬೀಜ ಸರಿಯಾಗಿ ಸಿಗದಿರುವುದು, ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಬೇಕಾದ ಅನಿವಾರ್ಯತೆಯಂಥ ಹಲವು ಅಡ್ಡಿ-ಆತಂಕದ ನಡುವೆ ಸಾಲ ಮಾಡಿ ಮನೆಯ ಸಣ್ಣ ಮಕ್ಕಳು, ಹೆಂಗಸರೆಲ್ಲ ಜಮೀನಿನಲ್ಲಿ ದುಡಿದು ಬೆಳೆದ ಬೆಳೆ ಕೊನೆಘಳಿಗೆಯಲ್ಲಿ ಕೈಗೆ ಸಿಗದ ಘೋರ ದುರಂತ ಆಗಿಹೋಗಿದೆ ಎಂದು ರೈತರು ಹೇಳುವುದು ಕರುಣಾಜನಕವಾಗಿದೆ.

ಬದುಕಿಗಾಧಾರವಾಗಿದ್ದ ಬೆಳೆ ಮಳೆಗೆ ನಾಶವಾದ ಹತಾಶೆಯಿಂದ ಶಿರಸಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನವಾಸಿ ಬಳಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ [58] ಬೆಳೆದ ಶುಂಠಿ, ಭತ್ತ ಮಳೆಗೆ ಹಾಳಾದ್ದರಿಂದ ನೊಂದು ನ.17ರಂದು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರು ನ.19ರಂದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.


ಫಕೀರಣ್ಣ ಶೇಷಣ್ಣನವರ್

ಭವಿಷ್ಯದ ಬದುಕಿನ ನಿರೀಕ್ಷೆಗಳೆಲ್ಲ ಮಳೆ ಪಾಲಾಗಿ ಹತಾಶವಾಗಿರುವ ರೈತ ಸುಮುದಾಯದ ನೆರವಿಗೆ ನಿಷ್ಟೆ-ಬದ್ದತೆಯಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸಬೇಕಾಗಿದೆ. ಈ ವರ್ಷ ಪೂರ್ಣ ಪ್ರಮಾಣದ ಬೆಳೆ ವಿಮೆಗೆ ತಾವು ಅರ್ಹರೆಂದು ರೈತರು ಹೇಳುತ್ತಿದ್ದಾರೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡು ನೆರವು ನೀಡಲು ಅಡ್ಡಿಯಾಗಿರುವ ವಿಮೆ ಕಂಪನಿಗಳ ಮಾನದಂಡಗಳಿಗೆ ಮೂಗುದಾರ ಹಾಕಬೇಕಿದೆ. ಕಾಟಾಚಾರದ ಪರಿಹಾರ ನೊಂದ ರೈತರಲ್ಲಿ ಆಕ್ರೋಶ ಮೂಡಿಸುವ ಸಾಧ್ಯತೆಯಿದ್ದು, ಗರಿಷ್ಟ ಪರಿಹಾರ ಸಿಗುವಂತೆ ಪ್ರಯತ್ನಿಸುವ ಇಚ್ಛಾ ಶಕ್ತಿಯನ್ನು ಜನಪ್ರತಿನಧಿಗಳು ಪ್ರದರ್ಶಿಸಬೇಕಿದೆ ಎಂದು ರೈತ ಮುಂಖಡರು ಹೇಳುತ್ತಿದ್ದಾರೆ. ಹುಸಿ ಆಸ್ವಾಸನೆಗಳಿಗೆ ಸೀಮಿತವಾಗದೆ ಆತಂಕಿತ ರೈತ ಸಮುದಾಯದಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ.


ಇದನ್ನೂ ಓದಿ: ಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...