Homeಮುಖಪುಟಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

ಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

- Advertisement -
- Advertisement -


ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆ ಆರ್ಭಟಕ್ಕೆ ರೈತ-ತೋಟಿಗರ ಬದುಕು ಹೈರಾಣಾಗಿ ಹೋಗಿದೆ. ಜೀವ ಒತ್ತೆಯಿಟ್ಟು ವರ್ಷವಿಡೀ ಬೆವರಿಳಿಸಿ ಬೆಳೆದ ಫಸಲನ್ನು ಮಳೆ ನೀರು ಆಪೋಷನ ಪಡೆದಿದೆ! ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಅನ್ನದಾತ ಕಂಗಾಲಾಗಿ ಕೂತಿದ್ದಾನೆ. ಜಿಲ್ಲೆಯಲ್ಲಿ ಸುಮಾರು 1866 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆಯೆಂದು ಅಂದಾಜಿಸಲಾಗಿದ್ದು, ಶೀಘ್ರ ಪರಿಹಾರಕ್ಕಾಗಿ ಅಳಲಿನ ದ್ವನಿ ಕೇಳಿ ಬರಲಾರಂಭಿಸಿದೆ.

ಉತ್ತರ ಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ಕಬ್ಬು, ಭತ್ತ, ಹತ್ತಿ, ಗೊವಿನ ಜೋಳ, ಅಡಿಕೆ ಬೆಳೆ ಮಳೆ ಹೊಡೆತ ತಾಳಲಾಗದೆ ನೆಲಕಚ್ಚಿದೆ. ಭತ್ತದ ಪೈರಂತೂ ಮಣ್ಣು ಪಾಲಾಗಿದ್ದು, ಅರ್ಧದಷ್ಟು ಉಳಿಸಿಕೊಳ್ಳಲಾಗದೆ ರೈತರು ಹೈರಾಣಾಗಿದ್ದಾರೆ. ಜಿಲ್ಲೆಯಲ್ಲಿ 1840 ಹೆಕ್ಟೇರ್ ಭತ್ತ, 21.4 ಹೆಕ್ಟೇರ್ ಹತ್ತಿ, 4 ಹೆಕ್ಟೇರ್ ಕಬ್ಬು ಬೆಳೆ ಮಳೆಗೆ ಬಲಿಯಾಗಿದೆ.


ಈ ಹಂಗಾಮು ರೈತ ಸಮುದಾಯದ ಭವಿಷ್ಯದ ಬದುಕನ್ನು ಅಯೋಮಯವಾಗಿಸಿದ್ದು, ಮುಂಡಗೋಡಿನಂತ ಪ್ರದೇಶದ ರೈತರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಮಳೆ ನಿಲ್ಲುವ ಅಂದಾಜಿನಲ್ಲಿ ಗೋವಿನ ಜೋಳದ ತೆನೆ ಕೊಯ್ದು ಒಣಗಿಸಲು ಅಣಿಯಾಗುತ್ತಿದ್ದಂತೆಯೆ ಸುರಿಯಲು ಶುರುವಾದ ಮಳೆಯಿಂದ ಗೋವಿನ ಜೋಳದ ಕಾಳುಗಳು ಮೋಳಕೆಯೋಡೆಯುತ್ತಿದ್ದರೆ, ಕಟಾವಿಗೆ ಬಂದ ಮತ್ತು ಕಟಾವಾದ ಭತ್ತ ನೀರು ಪಾಲಾಗಿದೆ. ದುಬಾರಿ ಕೃಷಿ ಕಾರ್ಮಿಕ ಮಜೂರಿ, ಔಷಧ-ಗೊಬ್ಬರ-ಬೀಜ ಸರಿಯಾಗಿ ಸಿಗದಿರುವುದು, ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಬೇಕಾದ ಅನಿವಾರ್ಯತೆಯಂಥ ಹಲವು ಅಡ್ಡಿ-ಆತಂಕದ ನಡುವೆ ಸಾಲ ಮಾಡಿ ಮನೆಯ ಸಣ್ಣ ಮಕ್ಕಳು, ಹೆಂಗಸರೆಲ್ಲ ಜಮೀನಿನಲ್ಲಿ ದುಡಿದು ಬೆಳೆದ ಬೆಳೆ ಕೊನೆಘಳಿಗೆಯಲ್ಲಿ ಕೈಗೆ ಸಿಗದ ಘೋರ ದುರಂತ ಆಗಿಹೋಗಿದೆ ಎಂದು ರೈತರು ಹೇಳುವುದು ಕರುಣಾಜನಕವಾಗಿದೆ.

ಬದುಕಿಗಾಧಾರವಾಗಿದ್ದ ಬೆಳೆ ಮಳೆಗೆ ನಾಶವಾದ ಹತಾಶೆಯಿಂದ ಶಿರಸಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನವಾಸಿ ಬಳಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ [58] ಬೆಳೆದ ಶುಂಠಿ, ಭತ್ತ ಮಳೆಗೆ ಹಾಳಾದ್ದರಿಂದ ನೊಂದು ನ.17ರಂದು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರು ನ.19ರಂದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.


ಫಕೀರಣ್ಣ ಶೇಷಣ್ಣನವರ್

ಭವಿಷ್ಯದ ಬದುಕಿನ ನಿರೀಕ್ಷೆಗಳೆಲ್ಲ ಮಳೆ ಪಾಲಾಗಿ ಹತಾಶವಾಗಿರುವ ರೈತ ಸುಮುದಾಯದ ನೆರವಿಗೆ ನಿಷ್ಟೆ-ಬದ್ದತೆಯಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸಬೇಕಾಗಿದೆ. ಈ ವರ್ಷ ಪೂರ್ಣ ಪ್ರಮಾಣದ ಬೆಳೆ ವಿಮೆಗೆ ತಾವು ಅರ್ಹರೆಂದು ರೈತರು ಹೇಳುತ್ತಿದ್ದಾರೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡು ನೆರವು ನೀಡಲು ಅಡ್ಡಿಯಾಗಿರುವ ವಿಮೆ ಕಂಪನಿಗಳ ಮಾನದಂಡಗಳಿಗೆ ಮೂಗುದಾರ ಹಾಕಬೇಕಿದೆ. ಕಾಟಾಚಾರದ ಪರಿಹಾರ ನೊಂದ ರೈತರಲ್ಲಿ ಆಕ್ರೋಶ ಮೂಡಿಸುವ ಸಾಧ್ಯತೆಯಿದ್ದು, ಗರಿಷ್ಟ ಪರಿಹಾರ ಸಿಗುವಂತೆ ಪ್ರಯತ್ನಿಸುವ ಇಚ್ಛಾ ಶಕ್ತಿಯನ್ನು ಜನಪ್ರತಿನಧಿಗಳು ಪ್ರದರ್ಶಿಸಬೇಕಿದೆ ಎಂದು ರೈತ ಮುಂಖಡರು ಹೇಳುತ್ತಿದ್ದಾರೆ. ಹುಸಿ ಆಸ್ವಾಸನೆಗಳಿಗೆ ಸೀಮಿತವಾಗದೆ ಆತಂಕಿತ ರೈತ ಸಮುದಾಯದಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ.


ಇದನ್ನೂ ಓದಿ: ಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...