Homeಮುಖಪುಟಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

ಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

- Advertisement -
- Advertisement -


ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆ ಆರ್ಭಟಕ್ಕೆ ರೈತ-ತೋಟಿಗರ ಬದುಕು ಹೈರಾಣಾಗಿ ಹೋಗಿದೆ. ಜೀವ ಒತ್ತೆಯಿಟ್ಟು ವರ್ಷವಿಡೀ ಬೆವರಿಳಿಸಿ ಬೆಳೆದ ಫಸಲನ್ನು ಮಳೆ ನೀರು ಆಪೋಷನ ಪಡೆದಿದೆ! ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಅನ್ನದಾತ ಕಂಗಾಲಾಗಿ ಕೂತಿದ್ದಾನೆ. ಜಿಲ್ಲೆಯಲ್ಲಿ ಸುಮಾರು 1866 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆಯೆಂದು ಅಂದಾಜಿಸಲಾಗಿದ್ದು, ಶೀಘ್ರ ಪರಿಹಾರಕ್ಕಾಗಿ ಅಳಲಿನ ದ್ವನಿ ಕೇಳಿ ಬರಲಾರಂಭಿಸಿದೆ.

ಉತ್ತರ ಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ಕಬ್ಬು, ಭತ್ತ, ಹತ್ತಿ, ಗೊವಿನ ಜೋಳ, ಅಡಿಕೆ ಬೆಳೆ ಮಳೆ ಹೊಡೆತ ತಾಳಲಾಗದೆ ನೆಲಕಚ್ಚಿದೆ. ಭತ್ತದ ಪೈರಂತೂ ಮಣ್ಣು ಪಾಲಾಗಿದ್ದು, ಅರ್ಧದಷ್ಟು ಉಳಿಸಿಕೊಳ್ಳಲಾಗದೆ ರೈತರು ಹೈರಾಣಾಗಿದ್ದಾರೆ. ಜಿಲ್ಲೆಯಲ್ಲಿ 1840 ಹೆಕ್ಟೇರ್ ಭತ್ತ, 21.4 ಹೆಕ್ಟೇರ್ ಹತ್ತಿ, 4 ಹೆಕ್ಟೇರ್ ಕಬ್ಬು ಬೆಳೆ ಮಳೆಗೆ ಬಲಿಯಾಗಿದೆ.


ಈ ಹಂಗಾಮು ರೈತ ಸಮುದಾಯದ ಭವಿಷ್ಯದ ಬದುಕನ್ನು ಅಯೋಮಯವಾಗಿಸಿದ್ದು, ಮುಂಡಗೋಡಿನಂತ ಪ್ರದೇಶದ ರೈತರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಮಳೆ ನಿಲ್ಲುವ ಅಂದಾಜಿನಲ್ಲಿ ಗೋವಿನ ಜೋಳದ ತೆನೆ ಕೊಯ್ದು ಒಣಗಿಸಲು ಅಣಿಯಾಗುತ್ತಿದ್ದಂತೆಯೆ ಸುರಿಯಲು ಶುರುವಾದ ಮಳೆಯಿಂದ ಗೋವಿನ ಜೋಳದ ಕಾಳುಗಳು ಮೋಳಕೆಯೋಡೆಯುತ್ತಿದ್ದರೆ, ಕಟಾವಿಗೆ ಬಂದ ಮತ್ತು ಕಟಾವಾದ ಭತ್ತ ನೀರು ಪಾಲಾಗಿದೆ. ದುಬಾರಿ ಕೃಷಿ ಕಾರ್ಮಿಕ ಮಜೂರಿ, ಔಷಧ-ಗೊಬ್ಬರ-ಬೀಜ ಸರಿಯಾಗಿ ಸಿಗದಿರುವುದು, ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಬೇಕಾದ ಅನಿವಾರ್ಯತೆಯಂಥ ಹಲವು ಅಡ್ಡಿ-ಆತಂಕದ ನಡುವೆ ಸಾಲ ಮಾಡಿ ಮನೆಯ ಸಣ್ಣ ಮಕ್ಕಳು, ಹೆಂಗಸರೆಲ್ಲ ಜಮೀನಿನಲ್ಲಿ ದುಡಿದು ಬೆಳೆದ ಬೆಳೆ ಕೊನೆಘಳಿಗೆಯಲ್ಲಿ ಕೈಗೆ ಸಿಗದ ಘೋರ ದುರಂತ ಆಗಿಹೋಗಿದೆ ಎಂದು ರೈತರು ಹೇಳುವುದು ಕರುಣಾಜನಕವಾಗಿದೆ.

ಬದುಕಿಗಾಧಾರವಾಗಿದ್ದ ಬೆಳೆ ಮಳೆಗೆ ನಾಶವಾದ ಹತಾಶೆಯಿಂದ ಶಿರಸಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನವಾಸಿ ಬಳಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ [58] ಬೆಳೆದ ಶುಂಠಿ, ಭತ್ತ ಮಳೆಗೆ ಹಾಳಾದ್ದರಿಂದ ನೊಂದು ನ.17ರಂದು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರು ನ.19ರಂದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.


ಫಕೀರಣ್ಣ ಶೇಷಣ್ಣನವರ್

ಭವಿಷ್ಯದ ಬದುಕಿನ ನಿರೀಕ್ಷೆಗಳೆಲ್ಲ ಮಳೆ ಪಾಲಾಗಿ ಹತಾಶವಾಗಿರುವ ರೈತ ಸುಮುದಾಯದ ನೆರವಿಗೆ ನಿಷ್ಟೆ-ಬದ್ದತೆಯಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸಬೇಕಾಗಿದೆ. ಈ ವರ್ಷ ಪೂರ್ಣ ಪ್ರಮಾಣದ ಬೆಳೆ ವಿಮೆಗೆ ತಾವು ಅರ್ಹರೆಂದು ರೈತರು ಹೇಳುತ್ತಿದ್ದಾರೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡು ನೆರವು ನೀಡಲು ಅಡ್ಡಿಯಾಗಿರುವ ವಿಮೆ ಕಂಪನಿಗಳ ಮಾನದಂಡಗಳಿಗೆ ಮೂಗುದಾರ ಹಾಕಬೇಕಿದೆ. ಕಾಟಾಚಾರದ ಪರಿಹಾರ ನೊಂದ ರೈತರಲ್ಲಿ ಆಕ್ರೋಶ ಮೂಡಿಸುವ ಸಾಧ್ಯತೆಯಿದ್ದು, ಗರಿಷ್ಟ ಪರಿಹಾರ ಸಿಗುವಂತೆ ಪ್ರಯತ್ನಿಸುವ ಇಚ್ಛಾ ಶಕ್ತಿಯನ್ನು ಜನಪ್ರತಿನಧಿಗಳು ಪ್ರದರ್ಶಿಸಬೇಕಿದೆ ಎಂದು ರೈತ ಮುಂಖಡರು ಹೇಳುತ್ತಿದ್ದಾರೆ. ಹುಸಿ ಆಸ್ವಾಸನೆಗಳಿಗೆ ಸೀಮಿತವಾಗದೆ ಆತಂಕಿತ ರೈತ ಸಮುದಾಯದಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ.


ಇದನ್ನೂ ಓದಿ: ಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...