Homeಮುಖಪುಟಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

ಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

- Advertisement -
- Advertisement -


ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆ ಆರ್ಭಟಕ್ಕೆ ರೈತ-ತೋಟಿಗರ ಬದುಕು ಹೈರಾಣಾಗಿ ಹೋಗಿದೆ. ಜೀವ ಒತ್ತೆಯಿಟ್ಟು ವರ್ಷವಿಡೀ ಬೆವರಿಳಿಸಿ ಬೆಳೆದ ಫಸಲನ್ನು ಮಳೆ ನೀರು ಆಪೋಷನ ಪಡೆದಿದೆ! ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಅನ್ನದಾತ ಕಂಗಾಲಾಗಿ ಕೂತಿದ್ದಾನೆ. ಜಿಲ್ಲೆಯಲ್ಲಿ ಸುಮಾರು 1866 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆಯೆಂದು ಅಂದಾಜಿಸಲಾಗಿದ್ದು, ಶೀಘ್ರ ಪರಿಹಾರಕ್ಕಾಗಿ ಅಳಲಿನ ದ್ವನಿ ಕೇಳಿ ಬರಲಾರಂಭಿಸಿದೆ.

ಉತ್ತರ ಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ಕಬ್ಬು, ಭತ್ತ, ಹತ್ತಿ, ಗೊವಿನ ಜೋಳ, ಅಡಿಕೆ ಬೆಳೆ ಮಳೆ ಹೊಡೆತ ತಾಳಲಾಗದೆ ನೆಲಕಚ್ಚಿದೆ. ಭತ್ತದ ಪೈರಂತೂ ಮಣ್ಣು ಪಾಲಾಗಿದ್ದು, ಅರ್ಧದಷ್ಟು ಉಳಿಸಿಕೊಳ್ಳಲಾಗದೆ ರೈತರು ಹೈರಾಣಾಗಿದ್ದಾರೆ. ಜಿಲ್ಲೆಯಲ್ಲಿ 1840 ಹೆಕ್ಟೇರ್ ಭತ್ತ, 21.4 ಹೆಕ್ಟೇರ್ ಹತ್ತಿ, 4 ಹೆಕ್ಟೇರ್ ಕಬ್ಬು ಬೆಳೆ ಮಳೆಗೆ ಬಲಿಯಾಗಿದೆ.


ಈ ಹಂಗಾಮು ರೈತ ಸಮುದಾಯದ ಭವಿಷ್ಯದ ಬದುಕನ್ನು ಅಯೋಮಯವಾಗಿಸಿದ್ದು, ಮುಂಡಗೋಡಿನಂತ ಪ್ರದೇಶದ ರೈತರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಮಳೆ ನಿಲ್ಲುವ ಅಂದಾಜಿನಲ್ಲಿ ಗೋವಿನ ಜೋಳದ ತೆನೆ ಕೊಯ್ದು ಒಣಗಿಸಲು ಅಣಿಯಾಗುತ್ತಿದ್ದಂತೆಯೆ ಸುರಿಯಲು ಶುರುವಾದ ಮಳೆಯಿಂದ ಗೋವಿನ ಜೋಳದ ಕಾಳುಗಳು ಮೋಳಕೆಯೋಡೆಯುತ್ತಿದ್ದರೆ, ಕಟಾವಿಗೆ ಬಂದ ಮತ್ತು ಕಟಾವಾದ ಭತ್ತ ನೀರು ಪಾಲಾಗಿದೆ. ದುಬಾರಿ ಕೃಷಿ ಕಾರ್ಮಿಕ ಮಜೂರಿ, ಔಷಧ-ಗೊಬ್ಬರ-ಬೀಜ ಸರಿಯಾಗಿ ಸಿಗದಿರುವುದು, ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಬೇಕಾದ ಅನಿವಾರ್ಯತೆಯಂಥ ಹಲವು ಅಡ್ಡಿ-ಆತಂಕದ ನಡುವೆ ಸಾಲ ಮಾಡಿ ಮನೆಯ ಸಣ್ಣ ಮಕ್ಕಳು, ಹೆಂಗಸರೆಲ್ಲ ಜಮೀನಿನಲ್ಲಿ ದುಡಿದು ಬೆಳೆದ ಬೆಳೆ ಕೊನೆಘಳಿಗೆಯಲ್ಲಿ ಕೈಗೆ ಸಿಗದ ಘೋರ ದುರಂತ ಆಗಿಹೋಗಿದೆ ಎಂದು ರೈತರು ಹೇಳುವುದು ಕರುಣಾಜನಕವಾಗಿದೆ.

ಬದುಕಿಗಾಧಾರವಾಗಿದ್ದ ಬೆಳೆ ಮಳೆಗೆ ನಾಶವಾದ ಹತಾಶೆಯಿಂದ ಶಿರಸಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನವಾಸಿ ಬಳಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ [58] ಬೆಳೆದ ಶುಂಠಿ, ಭತ್ತ ಮಳೆಗೆ ಹಾಳಾದ್ದರಿಂದ ನೊಂದು ನ.17ರಂದು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರು ನ.19ರಂದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.


ಫಕೀರಣ್ಣ ಶೇಷಣ್ಣನವರ್

ಭವಿಷ್ಯದ ಬದುಕಿನ ನಿರೀಕ್ಷೆಗಳೆಲ್ಲ ಮಳೆ ಪಾಲಾಗಿ ಹತಾಶವಾಗಿರುವ ರೈತ ಸುಮುದಾಯದ ನೆರವಿಗೆ ನಿಷ್ಟೆ-ಬದ್ದತೆಯಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸಬೇಕಾಗಿದೆ. ಈ ವರ್ಷ ಪೂರ್ಣ ಪ್ರಮಾಣದ ಬೆಳೆ ವಿಮೆಗೆ ತಾವು ಅರ್ಹರೆಂದು ರೈತರು ಹೇಳುತ್ತಿದ್ದಾರೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡು ನೆರವು ನೀಡಲು ಅಡ್ಡಿಯಾಗಿರುವ ವಿಮೆ ಕಂಪನಿಗಳ ಮಾನದಂಡಗಳಿಗೆ ಮೂಗುದಾರ ಹಾಕಬೇಕಿದೆ. ಕಾಟಾಚಾರದ ಪರಿಹಾರ ನೊಂದ ರೈತರಲ್ಲಿ ಆಕ್ರೋಶ ಮೂಡಿಸುವ ಸಾಧ್ಯತೆಯಿದ್ದು, ಗರಿಷ್ಟ ಪರಿಹಾರ ಸಿಗುವಂತೆ ಪ್ರಯತ್ನಿಸುವ ಇಚ್ಛಾ ಶಕ್ತಿಯನ್ನು ಜನಪ್ರತಿನಧಿಗಳು ಪ್ರದರ್ಶಿಸಬೇಕಿದೆ ಎಂದು ರೈತ ಮುಂಖಡರು ಹೇಳುತ್ತಿದ್ದಾರೆ. ಹುಸಿ ಆಸ್ವಾಸನೆಗಳಿಗೆ ಸೀಮಿತವಾಗದೆ ಆತಂಕಿತ ರೈತ ಸಮುದಾಯದಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ.


ಇದನ್ನೂ ಓದಿ: ಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...