Homeಮುಖಪುಟಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

ಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

- Advertisement -
- Advertisement -


ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆ ಆರ್ಭಟಕ್ಕೆ ರೈತ-ತೋಟಿಗರ ಬದುಕು ಹೈರಾಣಾಗಿ ಹೋಗಿದೆ. ಜೀವ ಒತ್ತೆಯಿಟ್ಟು ವರ್ಷವಿಡೀ ಬೆವರಿಳಿಸಿ ಬೆಳೆದ ಫಸಲನ್ನು ಮಳೆ ನೀರು ಆಪೋಷನ ಪಡೆದಿದೆ! ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಅನ್ನದಾತ ಕಂಗಾಲಾಗಿ ಕೂತಿದ್ದಾನೆ. ಜಿಲ್ಲೆಯಲ್ಲಿ ಸುಮಾರು 1866 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆಯೆಂದು ಅಂದಾಜಿಸಲಾಗಿದ್ದು, ಶೀಘ್ರ ಪರಿಹಾರಕ್ಕಾಗಿ ಅಳಲಿನ ದ್ವನಿ ಕೇಳಿ ಬರಲಾರಂಭಿಸಿದೆ.

ಉತ್ತರ ಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ಕಬ್ಬು, ಭತ್ತ, ಹತ್ತಿ, ಗೊವಿನ ಜೋಳ, ಅಡಿಕೆ ಬೆಳೆ ಮಳೆ ಹೊಡೆತ ತಾಳಲಾಗದೆ ನೆಲಕಚ್ಚಿದೆ. ಭತ್ತದ ಪೈರಂತೂ ಮಣ್ಣು ಪಾಲಾಗಿದ್ದು, ಅರ್ಧದಷ್ಟು ಉಳಿಸಿಕೊಳ್ಳಲಾಗದೆ ರೈತರು ಹೈರಾಣಾಗಿದ್ದಾರೆ. ಜಿಲ್ಲೆಯಲ್ಲಿ 1840 ಹೆಕ್ಟೇರ್ ಭತ್ತ, 21.4 ಹೆಕ್ಟೇರ್ ಹತ್ತಿ, 4 ಹೆಕ್ಟೇರ್ ಕಬ್ಬು ಬೆಳೆ ಮಳೆಗೆ ಬಲಿಯಾಗಿದೆ.


ಈ ಹಂಗಾಮು ರೈತ ಸಮುದಾಯದ ಭವಿಷ್ಯದ ಬದುಕನ್ನು ಅಯೋಮಯವಾಗಿಸಿದ್ದು, ಮುಂಡಗೋಡಿನಂತ ಪ್ರದೇಶದ ರೈತರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಮಳೆ ನಿಲ್ಲುವ ಅಂದಾಜಿನಲ್ಲಿ ಗೋವಿನ ಜೋಳದ ತೆನೆ ಕೊಯ್ದು ಒಣಗಿಸಲು ಅಣಿಯಾಗುತ್ತಿದ್ದಂತೆಯೆ ಸುರಿಯಲು ಶುರುವಾದ ಮಳೆಯಿಂದ ಗೋವಿನ ಜೋಳದ ಕಾಳುಗಳು ಮೋಳಕೆಯೋಡೆಯುತ್ತಿದ್ದರೆ, ಕಟಾವಿಗೆ ಬಂದ ಮತ್ತು ಕಟಾವಾದ ಭತ್ತ ನೀರು ಪಾಲಾಗಿದೆ. ದುಬಾರಿ ಕೃಷಿ ಕಾರ್ಮಿಕ ಮಜೂರಿ, ಔಷಧ-ಗೊಬ್ಬರ-ಬೀಜ ಸರಿಯಾಗಿ ಸಿಗದಿರುವುದು, ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಬೇಕಾದ ಅನಿವಾರ್ಯತೆಯಂಥ ಹಲವು ಅಡ್ಡಿ-ಆತಂಕದ ನಡುವೆ ಸಾಲ ಮಾಡಿ ಮನೆಯ ಸಣ್ಣ ಮಕ್ಕಳು, ಹೆಂಗಸರೆಲ್ಲ ಜಮೀನಿನಲ್ಲಿ ದುಡಿದು ಬೆಳೆದ ಬೆಳೆ ಕೊನೆಘಳಿಗೆಯಲ್ಲಿ ಕೈಗೆ ಸಿಗದ ಘೋರ ದುರಂತ ಆಗಿಹೋಗಿದೆ ಎಂದು ರೈತರು ಹೇಳುವುದು ಕರುಣಾಜನಕವಾಗಿದೆ.

ಬದುಕಿಗಾಧಾರವಾಗಿದ್ದ ಬೆಳೆ ಮಳೆಗೆ ನಾಶವಾದ ಹತಾಶೆಯಿಂದ ಶಿರಸಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನವಾಸಿ ಬಳಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ [58] ಬೆಳೆದ ಶುಂಠಿ, ಭತ್ತ ಮಳೆಗೆ ಹಾಳಾದ್ದರಿಂದ ನೊಂದು ನ.17ರಂದು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರು ನ.19ರಂದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.


ಫಕೀರಣ್ಣ ಶೇಷಣ್ಣನವರ್

ಭವಿಷ್ಯದ ಬದುಕಿನ ನಿರೀಕ್ಷೆಗಳೆಲ್ಲ ಮಳೆ ಪಾಲಾಗಿ ಹತಾಶವಾಗಿರುವ ರೈತ ಸುಮುದಾಯದ ನೆರವಿಗೆ ನಿಷ್ಟೆ-ಬದ್ದತೆಯಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸಬೇಕಾಗಿದೆ. ಈ ವರ್ಷ ಪೂರ್ಣ ಪ್ರಮಾಣದ ಬೆಳೆ ವಿಮೆಗೆ ತಾವು ಅರ್ಹರೆಂದು ರೈತರು ಹೇಳುತ್ತಿದ್ದಾರೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡು ನೆರವು ನೀಡಲು ಅಡ್ಡಿಯಾಗಿರುವ ವಿಮೆ ಕಂಪನಿಗಳ ಮಾನದಂಡಗಳಿಗೆ ಮೂಗುದಾರ ಹಾಕಬೇಕಿದೆ. ಕಾಟಾಚಾರದ ಪರಿಹಾರ ನೊಂದ ರೈತರಲ್ಲಿ ಆಕ್ರೋಶ ಮೂಡಿಸುವ ಸಾಧ್ಯತೆಯಿದ್ದು, ಗರಿಷ್ಟ ಪರಿಹಾರ ಸಿಗುವಂತೆ ಪ್ರಯತ್ನಿಸುವ ಇಚ್ಛಾ ಶಕ್ತಿಯನ್ನು ಜನಪ್ರತಿನಧಿಗಳು ಪ್ರದರ್ಶಿಸಬೇಕಿದೆ ಎಂದು ರೈತ ಮುಂಖಡರು ಹೇಳುತ್ತಿದ್ದಾರೆ. ಹುಸಿ ಆಸ್ವಾಸನೆಗಳಿಗೆ ಸೀಮಿತವಾಗದೆ ಆತಂಕಿತ ರೈತ ಸಮುದಾಯದಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ.


ಇದನ್ನೂ ಓದಿ: ಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...