Homeಮುಖಪುಟಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

ಉತ್ತರ ಕನ್ನಡ; ಅಕಾಲಿಕ ಮಳೆ ಹಾವಳಿಗೆ ಅನ್ನದಾತನ ಬೆಳೆ-ಬದುಕು ಮೂರಾಬಟ್ಟೆ

- Advertisement -
- Advertisement -


ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆ ಆರ್ಭಟಕ್ಕೆ ರೈತ-ತೋಟಿಗರ ಬದುಕು ಹೈರಾಣಾಗಿ ಹೋಗಿದೆ. ಜೀವ ಒತ್ತೆಯಿಟ್ಟು ವರ್ಷವಿಡೀ ಬೆವರಿಳಿಸಿ ಬೆಳೆದ ಫಸಲನ್ನು ಮಳೆ ನೀರು ಆಪೋಷನ ಪಡೆದಿದೆ! ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಅನ್ನದಾತ ಕಂಗಾಲಾಗಿ ಕೂತಿದ್ದಾನೆ. ಜಿಲ್ಲೆಯಲ್ಲಿ ಸುಮಾರು 1866 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆಯೆಂದು ಅಂದಾಜಿಸಲಾಗಿದ್ದು, ಶೀಘ್ರ ಪರಿಹಾರಕ್ಕಾಗಿ ಅಳಲಿನ ದ್ವನಿ ಕೇಳಿ ಬರಲಾರಂಭಿಸಿದೆ.

ಉತ್ತರ ಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ಕಬ್ಬು, ಭತ್ತ, ಹತ್ತಿ, ಗೊವಿನ ಜೋಳ, ಅಡಿಕೆ ಬೆಳೆ ಮಳೆ ಹೊಡೆತ ತಾಳಲಾಗದೆ ನೆಲಕಚ್ಚಿದೆ. ಭತ್ತದ ಪೈರಂತೂ ಮಣ್ಣು ಪಾಲಾಗಿದ್ದು, ಅರ್ಧದಷ್ಟು ಉಳಿಸಿಕೊಳ್ಳಲಾಗದೆ ರೈತರು ಹೈರಾಣಾಗಿದ್ದಾರೆ. ಜಿಲ್ಲೆಯಲ್ಲಿ 1840 ಹೆಕ್ಟೇರ್ ಭತ್ತ, 21.4 ಹೆಕ್ಟೇರ್ ಹತ್ತಿ, 4 ಹೆಕ್ಟೇರ್ ಕಬ್ಬು ಬೆಳೆ ಮಳೆಗೆ ಬಲಿಯಾಗಿದೆ.


ಈ ಹಂಗಾಮು ರೈತ ಸಮುದಾಯದ ಭವಿಷ್ಯದ ಬದುಕನ್ನು ಅಯೋಮಯವಾಗಿಸಿದ್ದು, ಮುಂಡಗೋಡಿನಂತ ಪ್ರದೇಶದ ರೈತರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಮಳೆ ನಿಲ್ಲುವ ಅಂದಾಜಿನಲ್ಲಿ ಗೋವಿನ ಜೋಳದ ತೆನೆ ಕೊಯ್ದು ಒಣಗಿಸಲು ಅಣಿಯಾಗುತ್ತಿದ್ದಂತೆಯೆ ಸುರಿಯಲು ಶುರುವಾದ ಮಳೆಯಿಂದ ಗೋವಿನ ಜೋಳದ ಕಾಳುಗಳು ಮೋಳಕೆಯೋಡೆಯುತ್ತಿದ್ದರೆ, ಕಟಾವಿಗೆ ಬಂದ ಮತ್ತು ಕಟಾವಾದ ಭತ್ತ ನೀರು ಪಾಲಾಗಿದೆ. ದುಬಾರಿ ಕೃಷಿ ಕಾರ್ಮಿಕ ಮಜೂರಿ, ಔಷಧ-ಗೊಬ್ಬರ-ಬೀಜ ಸರಿಯಾಗಿ ಸಿಗದಿರುವುದು, ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಬೇಕಾದ ಅನಿವಾರ್ಯತೆಯಂಥ ಹಲವು ಅಡ್ಡಿ-ಆತಂಕದ ನಡುವೆ ಸಾಲ ಮಾಡಿ ಮನೆಯ ಸಣ್ಣ ಮಕ್ಕಳು, ಹೆಂಗಸರೆಲ್ಲ ಜಮೀನಿನಲ್ಲಿ ದುಡಿದು ಬೆಳೆದ ಬೆಳೆ ಕೊನೆಘಳಿಗೆಯಲ್ಲಿ ಕೈಗೆ ಸಿಗದ ಘೋರ ದುರಂತ ಆಗಿಹೋಗಿದೆ ಎಂದು ರೈತರು ಹೇಳುವುದು ಕರುಣಾಜನಕವಾಗಿದೆ.

ಬದುಕಿಗಾಧಾರವಾಗಿದ್ದ ಬೆಳೆ ಮಳೆಗೆ ನಾಶವಾದ ಹತಾಶೆಯಿಂದ ಶಿರಸಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನವಾಸಿ ಬಳಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ [58] ಬೆಳೆದ ಶುಂಠಿ, ಭತ್ತ ಮಳೆಗೆ ಹಾಳಾದ್ದರಿಂದ ನೊಂದು ನ.17ರಂದು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರು ನ.19ರಂದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.


ಫಕೀರಣ್ಣ ಶೇಷಣ್ಣನವರ್

ಭವಿಷ್ಯದ ಬದುಕಿನ ನಿರೀಕ್ಷೆಗಳೆಲ್ಲ ಮಳೆ ಪಾಲಾಗಿ ಹತಾಶವಾಗಿರುವ ರೈತ ಸುಮುದಾಯದ ನೆರವಿಗೆ ನಿಷ್ಟೆ-ಬದ್ದತೆಯಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸಬೇಕಾಗಿದೆ. ಈ ವರ್ಷ ಪೂರ್ಣ ಪ್ರಮಾಣದ ಬೆಳೆ ವಿಮೆಗೆ ತಾವು ಅರ್ಹರೆಂದು ರೈತರು ಹೇಳುತ್ತಿದ್ದಾರೆ. ಇದನ್ನು ಜನಪ್ರತಿನಿಧಿಗಳು ಅರ್ಥಮಾಡಿಕೊಂಡು ನೆರವು ನೀಡಲು ಅಡ್ಡಿಯಾಗಿರುವ ವಿಮೆ ಕಂಪನಿಗಳ ಮಾನದಂಡಗಳಿಗೆ ಮೂಗುದಾರ ಹಾಕಬೇಕಿದೆ. ಕಾಟಾಚಾರದ ಪರಿಹಾರ ನೊಂದ ರೈತರಲ್ಲಿ ಆಕ್ರೋಶ ಮೂಡಿಸುವ ಸಾಧ್ಯತೆಯಿದ್ದು, ಗರಿಷ್ಟ ಪರಿಹಾರ ಸಿಗುವಂತೆ ಪ್ರಯತ್ನಿಸುವ ಇಚ್ಛಾ ಶಕ್ತಿಯನ್ನು ಜನಪ್ರತಿನಧಿಗಳು ಪ್ರದರ್ಶಿಸಬೇಕಿದೆ ಎಂದು ರೈತ ಮುಂಖಡರು ಹೇಳುತ್ತಿದ್ದಾರೆ. ಹುಸಿ ಆಸ್ವಾಸನೆಗಳಿಗೆ ಸೀಮಿತವಾಗದೆ ಆತಂಕಿತ ರೈತ ಸಮುದಾಯದಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ.


ಇದನ್ನೂ ಓದಿ: ಆಂಧ್ರಪ್ರದೇಶ: ಮಹಾಮಳೆಗೆ 29 ಮಂದಿ ಸಾವು, 50 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...