Homeಮುಖಪುಟಭಾರೀ ಮಳೆ: ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ 83 ಜನರು ಬಲಿ!

ಭಾರೀ ಮಳೆ: ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ 83 ಜನರು ಬಲಿ!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸಭೆ ನಡೆಸಿ, ಹಾನಿ ಪರಿಶೀಲನೆ ನಡೆಸಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ 1,350 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಇದುವರೆಗೂ ಸುಮಾರು 83 ಜನ ಬಲಿಯಾಗಿದ್ದಾರೆ.

ಕಳೆದ ಎರಡು ದಿನಗಳಿಂದ ನಿರಂತರ ಮಳೆಯಿಂದಾಗಿ ಮಹಾರಾಷ್ಟ್ರದ ಮೂರು ಜಿಲ್ಲೆಗಳಲ್ಲಿ 20,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 27 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿಯೂ ಪರಿಸ್ಥಿತಿ ಹದಗೆಟ್ಟಿದ್ದು, ಮಹಾರಾಷ್ಟ್ರದ ನದಿಗಳು ತುಂಬಿದ್ದರಿಂದ ರಾಜ್ಯಕ್ಕೆ ನೀರು ಹೆಚ್ಚಾಗಿ ಹಲವಾರು ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದವು. ಭಾನುವಾರದಿಂದ ಇಲ್ಲಿಯವರಗೆ 6 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಕ್ರಾಲ್‌.ಇನ್ ವರದಿ ಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಅಬ್ಬರ, ಭರ್ತಿಯಾದ ಡ್ಯಾಂಗಳು: ನದಿಪಾತ್ರದ ಜನರಲ್ಲಿ ಪ್ರವಾಹ ಭೀತಿ

ಅತಿಯಾದ ಮಳೆಯಿಂದಾಗಿ ತೆಲಂಗಾಣದಲ್ಲಿ ಕನಿಷ್ಠ 50 ಜನರು ಪ್ರಾಣ ಕಳೆದುಕೊಂಡಿದ್ದು, ಸರ್ಕಾರವು ಪರಿಹಾರ ಕ್ರಮಗಳನ್ನು ಹೆಚ್ಚಿಸುವುದರೊಂದಿಗೆ ರಾಜ್ಯವು ಸಹಜ ಸ್ಥಿತಿಗೆ ಮರಳುತ್ತಿದೆ.

ಕರ್ನಾಟಕ;
ಯಾದಗಿರಿ, ರಾಯಚೂರು, ಬಳ್ಳಾರಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ್, ಕೊಪ್ಪಳ್, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳು ಪ್ರವಾಹದಿಂದಾಗಿ ಹೆಚ್ಚು ಹಾನಿಗೊಳಗಾಗಿವೆ. ಎಲ್ಲಾ ಪ್ರಮುಖ ಅಣೆಕಟ್ಟುಗಳ ಫ್ಲಡ್ ಗೇಟ್‌ಗಳನ್ನು ತೆರೆಯಲಾಗಿದ್ದು, ಇದರ ಪರಿಣಾಮವಾಗಿ ವಿವಿಧ ಹಳ್ಳಿಗಳಲ್ಲಿ ನೀರು ತುಂಬಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಕಳೆದ ಮೂರು ತಿಂಗಳಲ್ಲಿ ಇದು ರಾಜ್ಯದಲ್ಲಿ ಸಂಭವಿಸಿದ ಮೂರನೇ ವಿಕೋಪವಾಗಿದೆ. 515 ಪ್ರಾಣಿಗಳು ಪ್ರಾಣ ಕಳೆದುಕೊಂಡಿದ್ದು, 4,782 ಜನರನ್ನು 36 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ನಿರಂತರ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಗಳ ಆಡಳಿತ ಮಂಡಳಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಪರಿಹಾರ ಕಾರ್ಯಗಳಿಗಾಗಿ ಅಗತ್ಯ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಮಹಾರಾಷ್ಟ್ರ;
ಮುಂದಿನ ಎರಡು ದಿನಗಳಲ್ಲಿ ಮಹಾರಾಷ್ಟ್ರ, ಕೊಂಕಣ ಮತ್ತು ದಕ್ಷಿಣ ಗುಜರಾತ್‌ನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸುವ ಸಭೆ ನಡೆಸಿ, ಪಶ್ಚಿಮ ಮಹಾರಾಷ್ಟ್ರ ಮತ್ತು ಮರಾಠವಾಡದ ಕೆಲವು ಭಾಗಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ರಾಜ್ಯ ಆಡಳಿತ, ನೌಕಾಪಡೆ ಮತ್ತು ವಾಯುಪಡೆಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ತೆಲಂಗಾಣ;
ಹೈದರಾಬಾದ್ ಮತ್ತು ತೆಲಂಗಾಣದ ಇತರ ಭಾಗಗಳು ಗುರುವಾರ ಸಹಜ ಸ್ಥಿತಿಗೆ ಮರಳಿದವು. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಮಿತಿಯ ಹೆಚ್ಚಿನ ಭಾಗಗಳಲ್ಲಿ ನೀರು ಕಡಿಮೆಯಾಗುತ್ತಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ.

ರಾಜ್ಯದಲ್ಲಿ ಸುಮಾರು 44,000 ಜನರನ್ನು 64 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿಗಿದ್ದು, 45,000 ಆಹಾರ ಪ್ಯಾಕೆಟ್‌ಗಳನ್ನು ರಾಜ್ಯದಲ್ಲಿ ನೀಡಲಾಯಿತು. ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿ ಸುಮಾರು 6,000 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಹೈದರಾಬಾದ್ ಅಧಿಕಾರಿಗಳು ಗುರುವಾರ ರಜಾದಿನವನ್ನು ಘೋಷಿಸಿ, ನಿವಾಸಿಗಳನ್ನು ಒಳಾಂಗಣದಲ್ಲಿರಲು ಹೇಳಿದರು. ಪ್ರವಾಹದಲ್ಲಿ ನಗರದ ಅನೇಕ ಭಾಗಗಳು ವಿದ್ಯುತ್ ಕಳೆದುಕೊಂಡಿದ್ದರಿಂದ ದೈನಂದಿನ ಜೀವನವೂ ಅಸ್ತವ್ಯಸ್ತಗೊಂಡಿತು.

ಇದರ ನಡುವೆ, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸಭೆ ನಡೆಸಿ, ಹಾನಿ ಪರಿಶೀಲನೆ ನಡೆಸಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ 1,350 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.


ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಲುಕಿಕೊಂಡಿರುವ ಬಿಹಾರದ ಪ್ರವಾಹ ಪೀಡಿತರು!  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...