Homeಮುಖಪುಟಭಾರೀ ಮಳೆ: ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ 83 ಜನರು ಬಲಿ!

ಭಾರೀ ಮಳೆ: ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ 83 ಜನರು ಬಲಿ!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸಭೆ ನಡೆಸಿ, ಹಾನಿ ಪರಿಶೀಲನೆ ನಡೆಸಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ 1,350 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಇದುವರೆಗೂ ಸುಮಾರು 83 ಜನ ಬಲಿಯಾಗಿದ್ದಾರೆ.

ಕಳೆದ ಎರಡು ದಿನಗಳಿಂದ ನಿರಂತರ ಮಳೆಯಿಂದಾಗಿ ಮಹಾರಾಷ್ಟ್ರದ ಮೂರು ಜಿಲ್ಲೆಗಳಲ್ಲಿ 20,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 27 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿಯೂ ಪರಿಸ್ಥಿತಿ ಹದಗೆಟ್ಟಿದ್ದು, ಮಹಾರಾಷ್ಟ್ರದ ನದಿಗಳು ತುಂಬಿದ್ದರಿಂದ ರಾಜ್ಯಕ್ಕೆ ನೀರು ಹೆಚ್ಚಾಗಿ ಹಲವಾರು ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದವು. ಭಾನುವಾರದಿಂದ ಇಲ್ಲಿಯವರಗೆ 6 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಕ್ರಾಲ್‌.ಇನ್ ವರದಿ ಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಅಬ್ಬರ, ಭರ್ತಿಯಾದ ಡ್ಯಾಂಗಳು: ನದಿಪಾತ್ರದ ಜನರಲ್ಲಿ ಪ್ರವಾಹ ಭೀತಿ

ಅತಿಯಾದ ಮಳೆಯಿಂದಾಗಿ ತೆಲಂಗಾಣದಲ್ಲಿ ಕನಿಷ್ಠ 50 ಜನರು ಪ್ರಾಣ ಕಳೆದುಕೊಂಡಿದ್ದು, ಸರ್ಕಾರವು ಪರಿಹಾರ ಕ್ರಮಗಳನ್ನು ಹೆಚ್ಚಿಸುವುದರೊಂದಿಗೆ ರಾಜ್ಯವು ಸಹಜ ಸ್ಥಿತಿಗೆ ಮರಳುತ್ತಿದೆ.

ಕರ್ನಾಟಕ;
ಯಾದಗಿರಿ, ರಾಯಚೂರು, ಬಳ್ಳಾರಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ್, ಕೊಪ್ಪಳ್, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳು ಪ್ರವಾಹದಿಂದಾಗಿ ಹೆಚ್ಚು ಹಾನಿಗೊಳಗಾಗಿವೆ. ಎಲ್ಲಾ ಪ್ರಮುಖ ಅಣೆಕಟ್ಟುಗಳ ಫ್ಲಡ್ ಗೇಟ್‌ಗಳನ್ನು ತೆರೆಯಲಾಗಿದ್ದು, ಇದರ ಪರಿಣಾಮವಾಗಿ ವಿವಿಧ ಹಳ್ಳಿಗಳಲ್ಲಿ ನೀರು ತುಂಬಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಕಳೆದ ಮೂರು ತಿಂಗಳಲ್ಲಿ ಇದು ರಾಜ್ಯದಲ್ಲಿ ಸಂಭವಿಸಿದ ಮೂರನೇ ವಿಕೋಪವಾಗಿದೆ. 515 ಪ್ರಾಣಿಗಳು ಪ್ರಾಣ ಕಳೆದುಕೊಂಡಿದ್ದು, 4,782 ಜನರನ್ನು 36 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ನಿರಂತರ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಗಳ ಆಡಳಿತ ಮಂಡಳಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಪರಿಹಾರ ಕಾರ್ಯಗಳಿಗಾಗಿ ಅಗತ್ಯ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಮಹಾರಾಷ್ಟ್ರ;
ಮುಂದಿನ ಎರಡು ದಿನಗಳಲ್ಲಿ ಮಹಾರಾಷ್ಟ್ರ, ಕೊಂಕಣ ಮತ್ತು ದಕ್ಷಿಣ ಗುಜರಾತ್‌ನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸುವ ಸಭೆ ನಡೆಸಿ, ಪಶ್ಚಿಮ ಮಹಾರಾಷ್ಟ್ರ ಮತ್ತು ಮರಾಠವಾಡದ ಕೆಲವು ಭಾಗಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ರಾಜ್ಯ ಆಡಳಿತ, ನೌಕಾಪಡೆ ಮತ್ತು ವಾಯುಪಡೆಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ತೆಲಂಗಾಣ;
ಹೈದರಾಬಾದ್ ಮತ್ತು ತೆಲಂಗಾಣದ ಇತರ ಭಾಗಗಳು ಗುರುವಾರ ಸಹಜ ಸ್ಥಿತಿಗೆ ಮರಳಿದವು. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಮಿತಿಯ ಹೆಚ್ಚಿನ ಭಾಗಗಳಲ್ಲಿ ನೀರು ಕಡಿಮೆಯಾಗುತ್ತಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ.

ರಾಜ್ಯದಲ್ಲಿ ಸುಮಾರು 44,000 ಜನರನ್ನು 64 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿಗಿದ್ದು, 45,000 ಆಹಾರ ಪ್ಯಾಕೆಟ್‌ಗಳನ್ನು ರಾಜ್ಯದಲ್ಲಿ ನೀಡಲಾಯಿತು. ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿ ಸುಮಾರು 6,000 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಹೈದರಾಬಾದ್ ಅಧಿಕಾರಿಗಳು ಗುರುವಾರ ರಜಾದಿನವನ್ನು ಘೋಷಿಸಿ, ನಿವಾಸಿಗಳನ್ನು ಒಳಾಂಗಣದಲ್ಲಿರಲು ಹೇಳಿದರು. ಪ್ರವಾಹದಲ್ಲಿ ನಗರದ ಅನೇಕ ಭಾಗಗಳು ವಿದ್ಯುತ್ ಕಳೆದುಕೊಂಡಿದ್ದರಿಂದ ದೈನಂದಿನ ಜೀವನವೂ ಅಸ್ತವ್ಯಸ್ತಗೊಂಡಿತು.

ಇದರ ನಡುವೆ, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸಭೆ ನಡೆಸಿ, ಹಾನಿ ಪರಿಶೀಲನೆ ನಡೆಸಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ 1,350 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.


ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿಲುಕಿಕೊಂಡಿರುವ ಬಿಹಾರದ ಪ್ರವಾಹ ಪೀಡಿತರು!  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...