HomeUncategorizedಪ್ರವಾಹ ಭೀತಿ: ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ- ಸಿಎಂ ಯಡಿಯೂರಪ್ಪ

ಪ್ರವಾಹ ಭೀತಿ: ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ- ಸಿಎಂ ಯಡಿಯೂರಪ್ಪ

ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದೇನೆ. ಅಗತ್ಯ ಬಿದ್ದರೆ ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಪರಿಹಾರ ಸಿಗುವ ಭರವಸೆ ಇದೆ - ಸಿಎಂ

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣ, ಆಂಧ್ರಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಮಹಾರಾಷ್ಟ್ರದಲ್ಲಿ ನದಿಗಳು ತುಂಬಿದ್ದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಜಲಾಶಯಗಳಿಂದ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ರಾಜ್ಯದ ನದಿ ಪಾತ್ರದ ಜನರು ತೀರ ಸಂಕಷ್ಟಕ್ಕೆ ಈಡಾಗಿದ್ದಾರೆ. ಪ್ರಮುಖ ಸೇತುವೆಗಳು ಜಲಾವೃತವಾಗಿವೆ. ಇಲ್ಲಿಯವರೆಗೆ ರಾಜ್ಯದಲ್ಲಿ ಮಹಾಮಳೆಗೆ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಯಾದಗಿರಿ, ರಾಯಚೂರು, ಬಳ್ಳಾರಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ್, ಕೊಪ್ಪಳ್, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳು ಪ್ರವಾಹದಿಂದಾಗಿ ಹೆಚ್ಚು ಹಾನಿಗೊಳಗಾಗಿವೆ. ಎಲ್ಲಾ ಪ್ರಮುಖ ಅಣೆಕಟ್ಟುಗಳಿಂದ ನೀರು ಹೊರ ಬೀಡಲಾಗುತ್ತಿರವ ಕಾರಣ ಹಳ್ಳಿಗಳಲ್ಲಿ ನೀರು ತುಂಬಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಇದನ್ನೂ ಓದಿ: ಭಾರೀ ಮಳೆ: ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ 83 ಜನರು ಬಲಿ!

ರಾಜ್ಯದಲ್ಲಿ ಮಳೆಯಿಂದ ಕಷ್ಟಕ್ಕೆ ಈಡಾಗಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು  ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರದ ವತಿಯಿಂದ ಕಲಬುರಗಿಯಲ್ಲಿ-2, ಯಾದಗಿರಿಯಲ್ಲಿ-2 ಮತ್ತು ರಾಯಚೂರಿನಲ್ಲಿ-1 NDRF ತಂಡಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್​ ಮೂಲಕ ಚರ್ಚೆ ನಡೆಸಿದರು.

ವಿಡಿಯೋ ಕಾನ್ಫರೆನ್ಸ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, ’ಮಳೆ ಹಾನಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಮಳೆಯಿಂದ ಹಾನಿಗೊಳಗಾದ ಪ್ರದೇಶದಲ್ಲಿ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ. ರೈತ ಸಮುದಾಯದ ರಕ್ಷಣೆಗೆ ಸರ್ಕಾರ ಯಾವಾಗಲೂ ಬದ್ಧವಾಗಿದೆ’ ಅಂತಾ ಹೇಳಿದರು.

‘ರಾಜ್ಯದ ರೈತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು  ಭರವಸೆ ನೀಡುತ್ತೇನೆ.  ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಆರ್​.ಅಶೋಕ್ ಭೇಟಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದೇನೆ. ಅಗತ್ಯ ಬಿದ್ದರೆ ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಪರಿಹಾರ ಸಿಗುವ ಭರವಸೆ ಇದೆ’ ಎಂದಿದ್ದಾರೆ.

ಬಾಗಲಕೋಟೆಯಲ್ಲಿ ಕಳೆದ 5 ದಿನಗಳಲ್ಲಿ ಸುರಿದ ಮಳೆಗೆ 2,576 ಮನೆಗಳು ಹಾನಿಗೊಳಗಾಗಿವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾಹಿತಿ ನೀಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸಭೆ ನಡೆಸಿ, ಮಳೆಹಾನಿ ಪರಿಶೀಲನೆ ನಡೆಸಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ 1,350 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.


ಇದನ್ನೂ ಓದಿ: ತೆಲಂಗಾಣ, ಆಂಧ್ರದಲ್ಲಿ ಭಾರಿ ಮಳೆ: ಕಾಂಪೌಂಡ್ ಕುಸಿದು 2 ತಿಂಗಳ ಮಗು ಸೇರಿ 9 ಮಂದಿ ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...