Homeಕರ್ನಾಟಕಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

- Advertisement -
- Advertisement -

ಅಕ್ಟೋಬರ್ 18 ರಿಂದ ಅಕ್ಟೋಬರ್ 20 ರ ನಡುವೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಅ.21 ರಿಂದ ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ಬೆಂಗಳೂರು ಜೊತೆಗೆ ಮೈಸೂರು, ಹಾಸನ, ರಾಮನಗರ, ಚಾಮರಾಜನಗರದಲ್ಲಿಯೂ ಅಕ್ಟೋಬರ್ 21 ರಂದು ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

“ಬೆಂಗಳೂರಿನಲ್ಲಿ ಇನ್ನೆರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಡೀ ರಾಜ್ಯದಲ್ಲಿ ಅಕ್ಟೋಬರ್ 18, 19 ಮತ್ತು 20 ರಂದು ಮಳೆ ಸ್ವಲ್ಪ ಕಡಿಮೆಯಾಗಲಿದೆ. ಆದರೆ, ಅ. 21 ರಿಂದ ದಕ್ಷಿಣ ಜಿಲ್ಲೆಗಳಾದ ಮೈಸೂರು, ರಾಮನಗರ, ಚಾಮರಾಜನಗರ, ಹಾಸನಗಳಲ್ಲಿ ಭಾರೀ ಮಳೆಯಾಗಲಿದೆ” ಎಂದು ಬೆಂಗಳೂರಿನ ಐಎಂಡಿ ಮುಖ್ಯಸ್ಥೆ ಗೀತಾ ಅಗ್ನಿಹೋತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

ಜೊತೆಗೆ ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 17 ರಂದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 63 ಮಿಮೀ ಮಳೆಯಾಗಿದ್ದು, ಒಟ್ಟು ಅಕ್ಟೋಬರ್‌ನಲ್ಲಿ 348 ಮಿಮೀ ಮಳೆಯಾಗಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಈಗಾಗಲೇ ಹಲವು ಕಟ್ಟಡಗಳು ಕುಸಿಯುತ್ತಿದ್ದು, ಮಳೆ ಹೆಚ್ಚಾದರೇ ಮತ್ತಷ್ಟು ಕಟ್ಟಡಗಳು ಕುಸಿಯುವ ಭೀತಿ ಜನರಲ್ಲಿದೆ. ಬಿಬಿಎಂಪಿ ಈಗಾಗಲೇ 404 ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂಬುದನ್ನು ಸರ್ವೆಯಲ್ಲಿ ತಿಳಿಸಿದೆ.

ಈ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿದ್ದರು.

15 ರಿಂದ 20 ಕೆರೆಗಳ ನೀರು ಮೇಲ್ಮಟ್ಟದಿಂದ ಅಗರ ಕೆರೆಗೆ ಹರಿದು ಬರುತ್ತಿದೆ. ಇದರಿಂದ ಅಗರ ಪಕ್ಕದಲ್ಲಿರುವ ಬಡಾವಣೆಗಳಿಗೆ ನೀರು ಮನೆಗಳಿಗೆ ನುಗ್ಗಿ ಅನಾಹುತಗಳಾಗಿವೆ. ಇದನ್ನು ತಡೆಗಟ್ಟಿ ಸಾಮರ್ಥ್ಯವನ್ನು ಹೆಚ್ಚಿಸಲು ಮುಖ್ಯ ಚರಂಡಿ ದುರಸ್ಥಿ ಮಾಡಲು ಸೂಚನೆ ನೀಡಲಾಗಿದೆ. ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ಕೇರಳ: ಭಾರಿ ಮಳೆಗೆ 18 ಮಂದಿ ಸಾವು, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...