Homeಕರ್ನಾಟಕಬೆಂಗಳೂರಿನಲ್ಲಿ ಭಾರೀ ಮಳೆ: ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸಿಲುಕಿ ಯುವತಿ ಸಾವು

ಬೆಂಗಳೂರಿನಲ್ಲಿ ಭಾರೀ ಮಳೆ: ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸಿಲುಕಿ ಯುವತಿ ಸಾವು

- Advertisement -
- Advertisement -

ಬೆಂಗಳೂರಿನಲ್ಲಿ ಇಂದು (ಭಾನುವಾರ) ಮಧಾಹ್ನ ಸುರಿದ ಭಾರೀ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ನಗರದಲ್ಲಿ ಮಧಾಹ್ನ 3 ಗಂಟೆ ಸುಮಾರಿಗೆ ಸುರಿದ ಆಲಿಕಲ್ಲು ಮಳೆಯಿಂದ ರಸ್ತೆ ತುಂಬೆಲ್ಲಾ ನೀರು ತುಂಬಿಕೊಂಡಿತ್ತು. ಕೆಆರ್‌ ವೃತ್ತದ ಬಳಿ ಇರುವ ಅಂಡರ್‌ಪಾಸ್‌ (ಕೆಳಸೇತುವೆ) ಸಂಪೂರ್ಣ ನೀರು ತುಂಬಿತ್ತು. ಆ ಮೂಲಕ ತೆರಳಿದ ಕಾರು ಮಳೆಗೆ ಮುಳುಗಡೆಯಾಗಿದ್ದು, ಆ ಕಾರಿನಲ್ಲಿದ್ದ ಕುಟುಂಬಸ್ಥರು ಸಿಲುಕಿಕೊಂಡಿರು. ಕೂಡಲೇ ಅಲ್ಲಿದ್ದ ಆಟೋ ಚಾಲಕರು ಗಮನಿಸಿ ರಕ್ಷಣೆಗೆ ಮುಂದಾಗಿದ್ದು, ಆ ಕಾರಿನಲ್ಲಿದ್ದ ಆರು ಜನರ ಪೈಕಿ ಒಬ್ಬಳು ಯುವತಿ ಸಾವಿಗೀಡಾಗಿದ್ದಾಳೆ.

ಮೃತ ಯುವತಿ ಭಾನುರೇಖಾ (22) ಎಂದು ಗುರುತಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ 6 ಜನರ ಕುಟುಂಬ ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ಯುವತಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಕೆಯನ್ನು ಸಮೀಪದ ಸೆಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ತ್ವರಿತವಾಗಿ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಿಲ್ಲ ಎಂಬ ಆರೋಪವನ್ನು ಪೋಷಕರು ಹಾಗೂ ಸ್ಥಳೀಯ ಪ್ರತ್ಯಕ್ಷದರ್ಶಿಗಳು ಮಾಡಿದ್ದಾರೆ. ಈ ಬಗ್ಗೆ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ”ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ” ಎಂದು ತಿಳಿಸಿದ್ದಾರೆ.

”ನಾವು ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇವೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ ಕೆಲಸ ಮಾಡುತ್ತೇವೆ. ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ರೋಗಿ ಆಸ್ಪತ್ರೆಗೆ ಬರುವಷ್ಟೊತ್ತಿಗೆ ಮೃತಪಟ್ಟಿದ್ದರು ಅಂತ ವೈದ್ಯರು ಹೇಳುತ್ತಿದ್ದಾರೆ. ಏನೇ ಆಗಿದ್ದರೂ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಕೆಆರ್‌ ವೃತ್ತದ ಅಂಡರ್‌ ಪಾಸ್‌ನಲ್ಲಿ ಸಾಕಷ್ಟು ನೀರು ತುಂಬಿ ಸಿಲಿಕಿದ್ದ ವಾಹನಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಹೊರತೆಗಿದಿದ್ದಾರೆ. ಸದ್ಯ ನೀರನ್ನು ಸಹ ಮೋಟರ್‌ ಪಂಪ್‌ ಬಳಸಿ ಹೊರ ಹಾಕಲಾಗುತ್ತಿದೆ. ಸದ್ಯ ಅಂಡರ್‌ಪಾಸ್‌ ಬಳಸದಂತೆ ಸಂಚಾರಿ ಪೊಲೀಸರ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ  ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಬಿಬಿ ಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ”ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?” ಎಂದು ಪ್ರಶ್ನಿಸಿದ್ದಾರೆ.

”ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು” ಎಂದಿದ್ದಾರೆ.

”ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು” ಎಚ್ಚರಿಸಿದ್ದಾರೆ.

ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ” ಎಂದು ಟ್ವೀಟ್ ಎಚ್‌ಡಿಕೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...