Homeಕರ್ನಾಟಕಬೆಂಗಳೂರಿನಲ್ಲಿ ಭಾರೀ ಮಳೆ: ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸಿಲುಕಿ ಯುವತಿ ಸಾವು

ಬೆಂಗಳೂರಿನಲ್ಲಿ ಭಾರೀ ಮಳೆ: ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸಿಲುಕಿ ಯುವತಿ ಸಾವು

- Advertisement -
- Advertisement -

ಬೆಂಗಳೂರಿನಲ್ಲಿ ಇಂದು (ಭಾನುವಾರ) ಮಧಾಹ್ನ ಸುರಿದ ಭಾರೀ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ನಗರದಲ್ಲಿ ಮಧಾಹ್ನ 3 ಗಂಟೆ ಸುಮಾರಿಗೆ ಸುರಿದ ಆಲಿಕಲ್ಲು ಮಳೆಯಿಂದ ರಸ್ತೆ ತುಂಬೆಲ್ಲಾ ನೀರು ತುಂಬಿಕೊಂಡಿತ್ತು. ಕೆಆರ್‌ ವೃತ್ತದ ಬಳಿ ಇರುವ ಅಂಡರ್‌ಪಾಸ್‌ (ಕೆಳಸೇತುವೆ) ಸಂಪೂರ್ಣ ನೀರು ತುಂಬಿತ್ತು. ಆ ಮೂಲಕ ತೆರಳಿದ ಕಾರು ಮಳೆಗೆ ಮುಳುಗಡೆಯಾಗಿದ್ದು, ಆ ಕಾರಿನಲ್ಲಿದ್ದ ಕುಟುಂಬಸ್ಥರು ಸಿಲುಕಿಕೊಂಡಿರು. ಕೂಡಲೇ ಅಲ್ಲಿದ್ದ ಆಟೋ ಚಾಲಕರು ಗಮನಿಸಿ ರಕ್ಷಣೆಗೆ ಮುಂದಾಗಿದ್ದು, ಆ ಕಾರಿನಲ್ಲಿದ್ದ ಆರು ಜನರ ಪೈಕಿ ಒಬ್ಬಳು ಯುವತಿ ಸಾವಿಗೀಡಾಗಿದ್ದಾಳೆ.

ಮೃತ ಯುವತಿ ಭಾನುರೇಖಾ (22) ಎಂದು ಗುರುತಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ 6 ಜನರ ಕುಟುಂಬ ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ಯುವತಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಕೆಯನ್ನು ಸಮೀಪದ ಸೆಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ತ್ವರಿತವಾಗಿ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಿಲ್ಲ ಎಂಬ ಆರೋಪವನ್ನು ಪೋಷಕರು ಹಾಗೂ ಸ್ಥಳೀಯ ಪ್ರತ್ಯಕ್ಷದರ್ಶಿಗಳು ಮಾಡಿದ್ದಾರೆ. ಈ ಬಗ್ಗೆ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ”ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ” ಎಂದು ತಿಳಿಸಿದ್ದಾರೆ.

”ನಾವು ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇವೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ ಕೆಲಸ ಮಾಡುತ್ತೇವೆ. ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ರೋಗಿ ಆಸ್ಪತ್ರೆಗೆ ಬರುವಷ್ಟೊತ್ತಿಗೆ ಮೃತಪಟ್ಟಿದ್ದರು ಅಂತ ವೈದ್ಯರು ಹೇಳುತ್ತಿದ್ದಾರೆ. ಏನೇ ಆಗಿದ್ದರೂ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಕೆಆರ್‌ ವೃತ್ತದ ಅಂಡರ್‌ ಪಾಸ್‌ನಲ್ಲಿ ಸಾಕಷ್ಟು ನೀರು ತುಂಬಿ ಸಿಲಿಕಿದ್ದ ವಾಹನಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಹೊರತೆಗಿದಿದ್ದಾರೆ. ಸದ್ಯ ನೀರನ್ನು ಸಹ ಮೋಟರ್‌ ಪಂಪ್‌ ಬಳಸಿ ಹೊರ ಹಾಕಲಾಗುತ್ತಿದೆ. ಸದ್ಯ ಅಂಡರ್‌ಪಾಸ್‌ ಬಳಸದಂತೆ ಸಂಚಾರಿ ಪೊಲೀಸರ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ  ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಬಿಬಿ ಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ”ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?” ಎಂದು ಪ್ರಶ್ನಿಸಿದ್ದಾರೆ.

”ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು” ಎಂದಿದ್ದಾರೆ.

”ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು” ಎಚ್ಚರಿಸಿದ್ದಾರೆ.

ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ” ಎಂದು ಟ್ವೀಟ್ ಎಚ್‌ಡಿಕೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...