Homeಮುಖಪುಟಒಡಿಶಾದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಒಡಿಶಾದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಜೂನ್ ಹತ್ತರಿಂದ ಮುಂದಿನ ಸೂಚನೆಯವರೆಗೂ ಮೀನುಗಾರಿಕೆಗೆ ತೆರಳದಂತೆ ಸೂಚನೆ.

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುತ್ತಿರುವುದರಿಂದ ಒಡಿಶಾದಲ್ಲಿ ಸುದೀರ್ಘ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂದಿನ ಮೂರು ದಿನಗಳಲ್ಲಿ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ.

ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿರುವ ಚಂಡಮಾರುತದ ಪ್ರಭಾವದಿಂದ, ಮುಂದಿನ 48 ಗಂಟೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸುತ್ತಿದೆ ಆದ್ದರಿಂದ ನಂತರದ 24 ಗಂಟೆಗಳಲ್ಲಿ ಹೆಚ್ಚು ಗಮನಾರ್ಹವಾಗಿದೆ ಎಂದು ಅಲ್ಲಿನ ಹವಾಮಾನ ಕೇಂದ್ರ ತಿಳಿಸಿದೆ.

ಇಂತಹ ಹವಾಮಾನ ಪರಿಸ್ಥಿತಿಯು ಒಡಿಶಾದಲ್ಲಿ ಮಳೆ ಹೆಚ್ಚಿಸುವ ಸಾಧ್ಯತೆಯಿದೆ, ಜೂನ್ 9 ರಿಂದ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯ ತೀವ್ರತೆಯು ಕ್ರಮೇಣ ಹೆಚ್ಚಾಗುವ ನಿರೀಕ್ಷೆಯಿದೆ.


ಓದಿ: ಒಡಿಶಾದ ಶಿಕ್ಷಣ ಇಲಾಖೆ ಪುಸ್ತಕಗಳಲ್ಲಿ “ಮಹಾತ್ಮಾ ಗಾಂಧಿ ಸಾವು ಆಕಸ್ಮಿಕ” ಎಂದು ಉಲ್ಲೇಖ.


ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಹವಮಾನ ಇಲಾಖೆ ಕೇಂದ್ರವು ಸೋಮವಾರದಿಂದ ಜೂನ್ 10 ರವರೆಗೆ ಅನೇಕ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಮತ್ತು ಜೂನ್ 11 ರಂದು ಉಳಿದ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ನೀಡಿದೆ.

ಇಂದು ಗುಡುಗು-ಮಿಂಚು ಸಹಿತ, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತದೆ ಎಂದು ಹಲವಾರು ಸ್ಥಳಗಳನ್ನು ಗುರುತಿಸಿದೆ.

ಅಂತೆಯೇ, ಜೂನ್ 9 ರಂದು ಕರಾವಳಿ ಒಡಿಶಾ, ಕಿಯೋಜಾರ್, ಮಯೂರ್ಭಂಜ್, ಧೆಂಕನಲ್, ದಿಯೋಗರ್‌, ರಾಯಗಡ, ಕೊರಪುತ್ ಮತ್ತು ಮಲ್ಕಂಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗಲಿದೆ. ಗಂಜಾಂ ಮತ್ತು ಗಜಪತಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಜೂನ್ 10 ರಂದು ನಬರಂಗ್‌ಪುರ, ಕೊರಪುತ್, ಮಲ್ಕಂಗಿರಿ, ಗಂಜಾಂ, ಗಜಪತಿ, ಪುರಿ, ಖುರ್ದಾ ಮತ್ತು ಜಗತ್ಸಿಂಗ್‌ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕೋರಪುತ್, ಮಲ್ಕಂಗಿರಿ, ನಬರಂಗ್‌ಪುರ, ಕಲಹಂಡಿ, ನುವಾಪಾಡಾ, ಬೋಲಂಗೀರ್, ಕಂಧಮಾಲ್, ಗಂಜಾಂ, ಪುರಿ ಮತ್ತು ಬೌಧ್ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಜೂನ್ 11 ಕ್ಕೆ ಆರೆಂಜ್ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯೂ ಜೂನ್ 10 ಮತ್ತು 11 ರಂದು ಉತ್ತರ ಹಾಗೂ ಪಶ್ಚಿಮ ಮಧ್ಯದ ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಿಂದ  40-50 ಕಿ.ಮೀ ವೇಗದ ಮಾರುತವನ್ನು ಸೂಚಿಸಿದೆ. ಇದರಿಂದಾಗಿ ಒಡಿಶಾ ಕರಾವಳಿ, ಉತ್ತರ ಮತ್ತು ಮಧ್ಯ ಬಂಗಾಳ ಕೊಲ್ಲಿಯ  ಮೀನುಗಾರರಿಗೆ ಜೂನ್ 10 ರಿಂದ ಮುಂದಿನ ಸೂಚನೆ ಬರುವವರೆಗೆ ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...