Homeಮುಖಪುಟಒಡಿಶಾದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಒಡಿಶಾದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಜೂನ್ ಹತ್ತರಿಂದ ಮುಂದಿನ ಸೂಚನೆಯವರೆಗೂ ಮೀನುಗಾರಿಕೆಗೆ ತೆರಳದಂತೆ ಸೂಚನೆ.

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುತ್ತಿರುವುದರಿಂದ ಒಡಿಶಾದಲ್ಲಿ ಸುದೀರ್ಘ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂದಿನ ಮೂರು ದಿನಗಳಲ್ಲಿ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ.

ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿರುವ ಚಂಡಮಾರುತದ ಪ್ರಭಾವದಿಂದ, ಮುಂದಿನ 48 ಗಂಟೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸುತ್ತಿದೆ ಆದ್ದರಿಂದ ನಂತರದ 24 ಗಂಟೆಗಳಲ್ಲಿ ಹೆಚ್ಚು ಗಮನಾರ್ಹವಾಗಿದೆ ಎಂದು ಅಲ್ಲಿನ ಹವಾಮಾನ ಕೇಂದ್ರ ತಿಳಿಸಿದೆ.

ಇಂತಹ ಹವಾಮಾನ ಪರಿಸ್ಥಿತಿಯು ಒಡಿಶಾದಲ್ಲಿ ಮಳೆ ಹೆಚ್ಚಿಸುವ ಸಾಧ್ಯತೆಯಿದೆ, ಜೂನ್ 9 ರಿಂದ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯ ತೀವ್ರತೆಯು ಕ್ರಮೇಣ ಹೆಚ್ಚಾಗುವ ನಿರೀಕ್ಷೆಯಿದೆ.


ಓದಿ: ಒಡಿಶಾದ ಶಿಕ್ಷಣ ಇಲಾಖೆ ಪುಸ್ತಕಗಳಲ್ಲಿ “ಮಹಾತ್ಮಾ ಗಾಂಧಿ ಸಾವು ಆಕಸ್ಮಿಕ” ಎಂದು ಉಲ್ಲೇಖ.


ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಹವಮಾನ ಇಲಾಖೆ ಕೇಂದ್ರವು ಸೋಮವಾರದಿಂದ ಜೂನ್ 10 ರವರೆಗೆ ಅನೇಕ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಮತ್ತು ಜೂನ್ 11 ರಂದು ಉಳಿದ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ನೀಡಿದೆ.

ಇಂದು ಗುಡುಗು-ಮಿಂಚು ಸಹಿತ, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತದೆ ಎಂದು ಹಲವಾರು ಸ್ಥಳಗಳನ್ನು ಗುರುತಿಸಿದೆ.

ಅಂತೆಯೇ, ಜೂನ್ 9 ರಂದು ಕರಾವಳಿ ಒಡಿಶಾ, ಕಿಯೋಜಾರ್, ಮಯೂರ್ಭಂಜ್, ಧೆಂಕನಲ್, ದಿಯೋಗರ್‌, ರಾಯಗಡ, ಕೊರಪುತ್ ಮತ್ತು ಮಲ್ಕಂಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗಲಿದೆ. ಗಂಜಾಂ ಮತ್ತು ಗಜಪತಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಜೂನ್ 10 ರಂದು ನಬರಂಗ್‌ಪುರ, ಕೊರಪುತ್, ಮಲ್ಕಂಗಿರಿ, ಗಂಜಾಂ, ಗಜಪತಿ, ಪುರಿ, ಖುರ್ದಾ ಮತ್ತು ಜಗತ್ಸಿಂಗ್‌ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕೋರಪುತ್, ಮಲ್ಕಂಗಿರಿ, ನಬರಂಗ್‌ಪುರ, ಕಲಹಂಡಿ, ನುವಾಪಾಡಾ, ಬೋಲಂಗೀರ್, ಕಂಧಮಾಲ್, ಗಂಜಾಂ, ಪುರಿ ಮತ್ತು ಬೌಧ್ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಜೂನ್ 11 ಕ್ಕೆ ಆರೆಂಜ್ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯೂ ಜೂನ್ 10 ಮತ್ತು 11 ರಂದು ಉತ್ತರ ಹಾಗೂ ಪಶ್ಚಿಮ ಮಧ್ಯದ ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಿಂದ  40-50 ಕಿ.ಮೀ ವೇಗದ ಮಾರುತವನ್ನು ಸೂಚಿಸಿದೆ. ಇದರಿಂದಾಗಿ ಒಡಿಶಾ ಕರಾವಳಿ, ಉತ್ತರ ಮತ್ತು ಮಧ್ಯ ಬಂಗಾಳ ಕೊಲ್ಲಿಯ  ಮೀನುಗಾರರಿಗೆ ಜೂನ್ 10 ರಿಂದ ಮುಂದಿನ ಸೂಚನೆ ಬರುವವರೆಗೆ ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...