Homeಚಳವಳಿಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು - ಮರೀಚಿಕೆಯಾದ ಶಾಶ್ವತ ಪರಿಹಾರ

ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ

ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಎಷ್ಟು ವರ್ಷ ನಾವು ಹೀಗೆ ಪರದಾಡಬೇಕು ಎಂದು ಅಳಲು ತೋಡಿಕೊಳ್ಳುತ್ತಾರೆ ಸ್ಥಳೀಯರು

- Advertisement -
- Advertisement -

ಮುಂಗಾರು ಆರಂಭವಾಗಿ ರಭಸದಿಂದ ಸುರಿಯುತ್ತಿದೆ. ಆಗಲೆ ಮಲೆನಾಡಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತದ ವರದಿಗಳು ಬರುತ್ತಿವೆ. ಮುನ್ನೆಚ್ಚರಿಸಿ ವಹಿಸಿ, ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಜನರಿಗೆ ನೋಟಿಸ್ ನೀಡುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಪ್ರತಿ ದಿನ ದೊಡ್ಡ ಮಳೆ  ಸುರಿಯುತ್ತಿದ್ದು, ಅಲ್ಲಿನ ಬಡಜನರು ಭಯಭೀತರಾಗಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಸರಣಿ ವರದಿ ಮಾಡಲು ಮುಂದಾಗಿದೆ. ಅದರ ಮೊದಲ ಕಂತು ಇಲ್ಲಿದೆ.

ಈ ಮೇಲಿನ ಚಿತ್ರ ನೋಡಿ. ಇದು ಕಳೆದ ವರ್ಷ ಸುರಿದ ಮಳೆಗೆ ಮನೆ ಪಕ್ಕದಲ್ಲಿಯೇ ಭೂಕುಸಿತ ಸಂಭವಿಸಿರುವುದು. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲ್ಲೂಕಿನ, ಮೇಗುಂದ ಹೋಬಳಿ ಬಳಿಯ ಗುಡ್ಡೇತೋಟ ಗ್ರಾಮದಲ್ಲಿ ವಾಸವಾಗಿರುವ ನಾರಾಯಣ್ ಮತ್ತು ಸುಮತಿ ಎಂಬ ದಂಪತಿಗಳಿಗೆ ಸೇರಿದ ಮನೆ ಇದಾಗಿದೆ. ಈ ಘಟನೆ ನಡೆದ ವರ್ಷವಾದರೂ ಅವರಿಗೆ ಯಾವುದೇ ಪುನರ್ವಸತಿ ಕಲ್ಪಿಸಲಾಗಿಲ್ಲ. ಈಗ ಆ ಭಾಗದಲ್ಲಿ ಪುನರಸ ಮಳೆ ಆರಂಭವಾಗಿದೆ. ಈ ಬಾರಿ ಮಳೆಗೆ ಮನೆಯೆ ಕುಸಿಯಬಹುದು ಎಂಬುದು ಅವರ ಆತಂಕ. ಸದ್ಯಕ್ಕೆ ಅವರೀಗ ಗ್ರಾಮದ ಅಂಗನವಾಡಿಯಲ್ಲಿ ಆಶ್ರಯ ಪಡೆದಿದ್ದಾರೆ. ಎಷ್ಟು ದಿನ ಎಂದು ಹೀಗೆಯೇ ಬದುಕುವುದು? ನಮಗೆ ನೆಮ್ಮದಿಯಿಂದ ಬದುಕುವ ಹಕ್ಕಿಲ್ಲವೇ? ಸರ್ಕಾರ, ಅಧಿಕಾರಿಗಳಿಗೆ ನಮ್ಮ ಕಷ್ಟ ತಿಳಿಯುವುದಿಲ್ಲವೇ ಎಂಬುದು ಅವರ ಪ್ರಶ್ನೆಯಾಗಿದೆ.

ಇದು ಅವರೊಬ್ಬರ ಪ್ರಶ್ನೆ ಮಾತ್ರ ಅಲ್ಲ. ಬದಲಿಗೆ ಗುಡ್ಡೆ ತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 16 ಕುಟುಂಬಗಳು ಇದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬಹುತೇಕ ಕೂಲಿ ಕೆಲಸ ಮಾಡುವ ಇವರಿಗೆ ಮನೆ ಬಿಟ್ಟರೆ ಬೇರೆ ಯಾವುದೇ ಜಮೀನು ಇಲ್ಲ. ಪ್ರತಿ ವರ್ಷ ಮಳೆಗಾಲ ಬಂತೆದ್ದರೆ ಸಾಕು ಸಾವಿನ ದವಡೆಗೆ ಹೋದ ಅನುಭವ ಅವರದು. ಹೇಗಾದರೂ ಮಾಡಿ ನಮ್ಮನ್ನು ಇಲ್ಲಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ. ಬದುಕಲು ಒಂದು ಚಿಕ್ಕ ಸೂರು ಕಟ್ಟಿಸಿಕೊಡಿ ಎಂಬುದು ಅವರ 5 ವರ್ಷದ ಬೇಡಿಕೆ. ಅದಕ್ಕಾಗಿ ಕಂಡ ಕಂಡವರ ಕಾಲು ಹಿಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅವರ ನೋವು ಕೇಳಬೇಕಾದವರು ಕಂಡು ಕಾಣದಂತಿದ್ದಾರೆ.

“ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ ಕಳೆದ ಒಂದು ವಾರದ ಮಳೆಯಿಂದ ಗುಡ್ಡೇತೋಟದ ಸೈಟ್ ಮನೆಯ ಹಿಂದಿನ ಮತ್ತು ಮುಂದಿನ ಧರೆಗಳು ಜರಿದು ಮನೆಗಳಿಗೆ ಅನಾಹುತವಾಗಿರುವುದರಿಂದ, ಹಾಗೂ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದ್ದು, ತಮ್ಮಗಳ ಮನೆಗಳಿಗೆ ಸಮಸ್ಯೆ ಉಂಟಾಗುವ ಸಾಧ್ಯತೆಗಳಿದ್ದು, ನೀವು ಗ್ರಾಮ ಪಂಚಾಯಿತಿಯಿಂದ ಸೂಚಿಸುವವರೆಗೂ ತಮ್ಮ ವಾಸದ ಮನೆಯಿಂದ ಪಂಚಾಯ್ತಿಯಿಂದ ಸೂಚಿಸಿದ ಸ್ಥಳಗಳಿಗೆ ಸ್ಥಳಾಂತರವಾಗಬೇಕಾಗಿ ಹಾಗೂ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ತಮ್ಮ ವಾಸದ ಮನೆಗಳಲ್ಲಿ ವಾಸ ಇರಬಾರದಾಗಿ ಈ ಮೂಲಕ ಸೂಚಿಸಿದೆ”

ಇದು ಪ್ರತಿ ವರ್ಷ ಮಳೆಗಾಲ ಬಂದಾಗ ಅಧಿಕಾರಿಗಳು ಗ್ರಾಮಪಂಚಾಯತ್ ಮೂಲಕ ಮನೆ ಮನೆಗಳಿಗೆ ಅಂಟಿಸುವ ಎಚ್ಚರಿಕೆಯ ನೋಟಿಸ್. ಈ ನೋಟೀಸ್ ಅಂಟಿಸಿ ಅವರು ತಮ್ಮ ಜವಾಬ್ದಾರಿಗಳಿಂದ ಕೈ ತೊಳೆದುಕೊಂಡಿದ್ದಾರೆ. ಅಂಗನವಾಡಿ, ಶಾಲೆಗಳಲ್ಲಿ ಉಳಿದುಕೊಳ್ಳಿ ಎಂದು ತಿಳಿಸಿದ್ದು ಬಿಟ್ಟರೆ, ಅವರಿಗೆ ಯಾವುದೇ ಸರಿಯಾದ ಸೌಕರ್ಯಗಳನ್ನು ಒದಗಿಸುವುದಿಲ್ಲ ಎಂಬುದು ನಿವಾಸಿಗಳ ಅಳಲು.

ನಮ್ಮ ಈ 16 ಕುಟುಂಬಗಳಿಗೆ ಒಂದು ಬಸ್‌ ಸ್ಟ್ಯಾಂಡ್ ಇಲ್ಲ. ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಕೆಲವರ ಮನೆ ಕುಸಿದ ಸಂದರ್ಭದಲ್ಲಿ ಎರಡು ವರ್ಷದ ಹಿಂದೆ ಪಂಚಾಯ್ತಿಯಲ್ಲಿ, ಶಾಲೆಯಲ್ಲಿ ನೆಲೆ ಪಡೆದಿದ್ದಾರೆ. ಆದರೆ ಇಂದಿಗೂ ಅವರು ಅಲ್ಲಿಯೇ ವಾಸವಿದ್ದಾರೆ ಹೊರತು ಅವರಿಗೆ ಮನೆ ಕಟ್ಟಿಸಿಕೊಟ್ಟಿಲ್ಲ. ಈಗ ಅವರಿಗೆ ಬಾಡಿಗೆ ಕಟ್ಟಿ ಎಂದು ಕೇಳುತ್ತಿದ್ದಾರೆ. ಇದು ನಮ್ಮ ದುಸ್ಥಿತಿ ಎನ್ನುತ್ತಾರೆ ಸಂತ್ರಸ್ತರಾದ ನಾರಾಯಣ್.

ಕಳೆದ 5 ವರ್ಷದಿಂದ ಒಂದು ಗೋಮಾಳದ ಜಾಗ ತೋರಿಸಿ, ಅಳತೆ ಮಾಡಿ ಅಲ್ಲಿ ನಿಮಗೆ ಮನೆ ಕಟ್ಟಿಕೊಡುತ್ತೇವೆ ಎಂದು ಎಲ್ಲರೂ ಭರವಸೆ ಕೊಡುತ್ತಿದ್ದಾರೆ. ಅಲ್ಲಿಂದ ನಾವು ಹಲವಾರು ಬಾರಿ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೆ ಅರಣ್ಯ ಇಲಾಖೆಯವರು ಕೊಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಮತ್ತು ಅರಣ್ಯ ಇಲಾಖೆಯ ನಡುವಿನ ಗಲಾಟೆಯಲ್ಲಿ ನಾವು ಮಧ್ಯ ಸಿಕ್ಕಿಕೊಂಡಿದ್ದೇವೆ ಎಂದು ದೂರಿದರು.

ಆ ಭಾಗದಲ್ಲಿ ಜನರೊಟ್ಟಿಗೆ ಕೆಲಸ ಮಾಡುತ್ತಿರುವ ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಆನಂದ್‌ರವರು ಮಾತನಾಡಿ, “ಇಲ್ಲಿನ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ದಿನದೂಡುತ್ತಿದ್ದಾರೆ. ಮಳೆ ಜೋರಾಗುತ್ತಿರುವುದರಿಂದ ಶಾಸಕರು, ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಬೇಕು. ಈ ಕೂಡಲೇ ಗೋಮಾಳದಲ್ಲಿ ಜಾಗ ನೀಡಬೇಕು ಇಲ್ಲವೇ ಬೇರೆ ಕಡೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು. ಯಾವುದೇ ಜೀವ ಹಾನಿಯಾಗಲು ಬಿಡಬಾರದು” ಎಂದು ಒತ್ತಾಯಿಸಿದರು.

ಶೃಂಗೇರಿ ಕ್ಷೇತ್ರದ ಶಾಸಕರಾದ ರಾಜೇಗೌಡರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ದೊರಕಿಲ್ಲ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...