Homeಚಳವಳಿಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು - ಮರೀಚಿಕೆಯಾದ ಶಾಶ್ವತ ಪರಿಹಾರ

ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ

ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಎಷ್ಟು ವರ್ಷ ನಾವು ಹೀಗೆ ಪರದಾಡಬೇಕು ಎಂದು ಅಳಲು ತೋಡಿಕೊಳ್ಳುತ್ತಾರೆ ಸ್ಥಳೀಯರು

- Advertisement -
- Advertisement -

ಮುಂಗಾರು ಆರಂಭವಾಗಿ ರಭಸದಿಂದ ಸುರಿಯುತ್ತಿದೆ. ಆಗಲೆ ಮಲೆನಾಡಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತದ ವರದಿಗಳು ಬರುತ್ತಿವೆ. ಮುನ್ನೆಚ್ಚರಿಸಿ ವಹಿಸಿ, ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಜನರಿಗೆ ನೋಟಿಸ್ ನೀಡುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಪ್ರತಿ ದಿನ ದೊಡ್ಡ ಮಳೆ  ಸುರಿಯುತ್ತಿದ್ದು, ಅಲ್ಲಿನ ಬಡಜನರು ಭಯಭೀತರಾಗಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಸರಣಿ ವರದಿ ಮಾಡಲು ಮುಂದಾಗಿದೆ. ಅದರ ಮೊದಲ ಕಂತು ಇಲ್ಲಿದೆ.

ಈ ಮೇಲಿನ ಚಿತ್ರ ನೋಡಿ. ಇದು ಕಳೆದ ವರ್ಷ ಸುರಿದ ಮಳೆಗೆ ಮನೆ ಪಕ್ಕದಲ್ಲಿಯೇ ಭೂಕುಸಿತ ಸಂಭವಿಸಿರುವುದು. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲ್ಲೂಕಿನ, ಮೇಗುಂದ ಹೋಬಳಿ ಬಳಿಯ ಗುಡ್ಡೇತೋಟ ಗ್ರಾಮದಲ್ಲಿ ವಾಸವಾಗಿರುವ ನಾರಾಯಣ್ ಮತ್ತು ಸುಮತಿ ಎಂಬ ದಂಪತಿಗಳಿಗೆ ಸೇರಿದ ಮನೆ ಇದಾಗಿದೆ. ಈ ಘಟನೆ ನಡೆದ ವರ್ಷವಾದರೂ ಅವರಿಗೆ ಯಾವುದೇ ಪುನರ್ವಸತಿ ಕಲ್ಪಿಸಲಾಗಿಲ್ಲ. ಈಗ ಆ ಭಾಗದಲ್ಲಿ ಪುನರಸ ಮಳೆ ಆರಂಭವಾಗಿದೆ. ಈ ಬಾರಿ ಮಳೆಗೆ ಮನೆಯೆ ಕುಸಿಯಬಹುದು ಎಂಬುದು ಅವರ ಆತಂಕ. ಸದ್ಯಕ್ಕೆ ಅವರೀಗ ಗ್ರಾಮದ ಅಂಗನವಾಡಿಯಲ್ಲಿ ಆಶ್ರಯ ಪಡೆದಿದ್ದಾರೆ. ಎಷ್ಟು ದಿನ ಎಂದು ಹೀಗೆಯೇ ಬದುಕುವುದು? ನಮಗೆ ನೆಮ್ಮದಿಯಿಂದ ಬದುಕುವ ಹಕ್ಕಿಲ್ಲವೇ? ಸರ್ಕಾರ, ಅಧಿಕಾರಿಗಳಿಗೆ ನಮ್ಮ ಕಷ್ಟ ತಿಳಿಯುವುದಿಲ್ಲವೇ ಎಂಬುದು ಅವರ ಪ್ರಶ್ನೆಯಾಗಿದೆ.

ಇದು ಅವರೊಬ್ಬರ ಪ್ರಶ್ನೆ ಮಾತ್ರ ಅಲ್ಲ. ಬದಲಿಗೆ ಗುಡ್ಡೆ ತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 16 ಕುಟುಂಬಗಳು ಇದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬಹುತೇಕ ಕೂಲಿ ಕೆಲಸ ಮಾಡುವ ಇವರಿಗೆ ಮನೆ ಬಿಟ್ಟರೆ ಬೇರೆ ಯಾವುದೇ ಜಮೀನು ಇಲ್ಲ. ಪ್ರತಿ ವರ್ಷ ಮಳೆಗಾಲ ಬಂತೆದ್ದರೆ ಸಾಕು ಸಾವಿನ ದವಡೆಗೆ ಹೋದ ಅನುಭವ ಅವರದು. ಹೇಗಾದರೂ ಮಾಡಿ ನಮ್ಮನ್ನು ಇಲ್ಲಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ. ಬದುಕಲು ಒಂದು ಚಿಕ್ಕ ಸೂರು ಕಟ್ಟಿಸಿಕೊಡಿ ಎಂಬುದು ಅವರ 5 ವರ್ಷದ ಬೇಡಿಕೆ. ಅದಕ್ಕಾಗಿ ಕಂಡ ಕಂಡವರ ಕಾಲು ಹಿಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅವರ ನೋವು ಕೇಳಬೇಕಾದವರು ಕಂಡು ಕಾಣದಂತಿದ್ದಾರೆ.

“ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ ಕಳೆದ ಒಂದು ವಾರದ ಮಳೆಯಿಂದ ಗುಡ್ಡೇತೋಟದ ಸೈಟ್ ಮನೆಯ ಹಿಂದಿನ ಮತ್ತು ಮುಂದಿನ ಧರೆಗಳು ಜರಿದು ಮನೆಗಳಿಗೆ ಅನಾಹುತವಾಗಿರುವುದರಿಂದ, ಹಾಗೂ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದ್ದು, ತಮ್ಮಗಳ ಮನೆಗಳಿಗೆ ಸಮಸ್ಯೆ ಉಂಟಾಗುವ ಸಾಧ್ಯತೆಗಳಿದ್ದು, ನೀವು ಗ್ರಾಮ ಪಂಚಾಯಿತಿಯಿಂದ ಸೂಚಿಸುವವರೆಗೂ ತಮ್ಮ ವಾಸದ ಮನೆಯಿಂದ ಪಂಚಾಯ್ತಿಯಿಂದ ಸೂಚಿಸಿದ ಸ್ಥಳಗಳಿಗೆ ಸ್ಥಳಾಂತರವಾಗಬೇಕಾಗಿ ಹಾಗೂ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ತಮ್ಮ ವಾಸದ ಮನೆಗಳಲ್ಲಿ ವಾಸ ಇರಬಾರದಾಗಿ ಈ ಮೂಲಕ ಸೂಚಿಸಿದೆ”

ಇದು ಪ್ರತಿ ವರ್ಷ ಮಳೆಗಾಲ ಬಂದಾಗ ಅಧಿಕಾರಿಗಳು ಗ್ರಾಮಪಂಚಾಯತ್ ಮೂಲಕ ಮನೆ ಮನೆಗಳಿಗೆ ಅಂಟಿಸುವ ಎಚ್ಚರಿಕೆಯ ನೋಟಿಸ್. ಈ ನೋಟೀಸ್ ಅಂಟಿಸಿ ಅವರು ತಮ್ಮ ಜವಾಬ್ದಾರಿಗಳಿಂದ ಕೈ ತೊಳೆದುಕೊಂಡಿದ್ದಾರೆ. ಅಂಗನವಾಡಿ, ಶಾಲೆಗಳಲ್ಲಿ ಉಳಿದುಕೊಳ್ಳಿ ಎಂದು ತಿಳಿಸಿದ್ದು ಬಿಟ್ಟರೆ, ಅವರಿಗೆ ಯಾವುದೇ ಸರಿಯಾದ ಸೌಕರ್ಯಗಳನ್ನು ಒದಗಿಸುವುದಿಲ್ಲ ಎಂಬುದು ನಿವಾಸಿಗಳ ಅಳಲು.

ನಮ್ಮ ಈ 16 ಕುಟುಂಬಗಳಿಗೆ ಒಂದು ಬಸ್‌ ಸ್ಟ್ಯಾಂಡ್ ಇಲ್ಲ. ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಕೆಲವರ ಮನೆ ಕುಸಿದ ಸಂದರ್ಭದಲ್ಲಿ ಎರಡು ವರ್ಷದ ಹಿಂದೆ ಪಂಚಾಯ್ತಿಯಲ್ಲಿ, ಶಾಲೆಯಲ್ಲಿ ನೆಲೆ ಪಡೆದಿದ್ದಾರೆ. ಆದರೆ ಇಂದಿಗೂ ಅವರು ಅಲ್ಲಿಯೇ ವಾಸವಿದ್ದಾರೆ ಹೊರತು ಅವರಿಗೆ ಮನೆ ಕಟ್ಟಿಸಿಕೊಟ್ಟಿಲ್ಲ. ಈಗ ಅವರಿಗೆ ಬಾಡಿಗೆ ಕಟ್ಟಿ ಎಂದು ಕೇಳುತ್ತಿದ್ದಾರೆ. ಇದು ನಮ್ಮ ದುಸ್ಥಿತಿ ಎನ್ನುತ್ತಾರೆ ಸಂತ್ರಸ್ತರಾದ ನಾರಾಯಣ್.

ಕಳೆದ 5 ವರ್ಷದಿಂದ ಒಂದು ಗೋಮಾಳದ ಜಾಗ ತೋರಿಸಿ, ಅಳತೆ ಮಾಡಿ ಅಲ್ಲಿ ನಿಮಗೆ ಮನೆ ಕಟ್ಟಿಕೊಡುತ್ತೇವೆ ಎಂದು ಎಲ್ಲರೂ ಭರವಸೆ ಕೊಡುತ್ತಿದ್ದಾರೆ. ಅಲ್ಲಿಂದ ನಾವು ಹಲವಾರು ಬಾರಿ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೆ ಅರಣ್ಯ ಇಲಾಖೆಯವರು ಕೊಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಮತ್ತು ಅರಣ್ಯ ಇಲಾಖೆಯ ನಡುವಿನ ಗಲಾಟೆಯಲ್ಲಿ ನಾವು ಮಧ್ಯ ಸಿಕ್ಕಿಕೊಂಡಿದ್ದೇವೆ ಎಂದು ದೂರಿದರು.

ಆ ಭಾಗದಲ್ಲಿ ಜನರೊಟ್ಟಿಗೆ ಕೆಲಸ ಮಾಡುತ್ತಿರುವ ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಆನಂದ್‌ರವರು ಮಾತನಾಡಿ, “ಇಲ್ಲಿನ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ದಿನದೂಡುತ್ತಿದ್ದಾರೆ. ಮಳೆ ಜೋರಾಗುತ್ತಿರುವುದರಿಂದ ಶಾಸಕರು, ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಬೇಕು. ಈ ಕೂಡಲೇ ಗೋಮಾಳದಲ್ಲಿ ಜಾಗ ನೀಡಬೇಕು ಇಲ್ಲವೇ ಬೇರೆ ಕಡೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು. ಯಾವುದೇ ಜೀವ ಹಾನಿಯಾಗಲು ಬಿಡಬಾರದು” ಎಂದು ಒತ್ತಾಯಿಸಿದರು.

ಶೃಂಗೇರಿ ಕ್ಷೇತ್ರದ ಶಾಸಕರಾದ ರಾಜೇಗೌಡರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ದೊರಕಿಲ್ಲ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...