Homeಕರ್ನಾಟಕಭಾರಿ ಮಳೆ: ಬೆಂಗಳೂರು ಸೇರಿದಂತೆ ಸುತ್ತಮುತ್ತ ಜನಜೀವನ ಅಸ್ತವ್ಯಸ್ತ

ಭಾರಿ ಮಳೆ: ಬೆಂಗಳೂರು ಸೇರಿದಂತೆ ಸುತ್ತಮುತ್ತ ಜನಜೀವನ ಅಸ್ತವ್ಯಸ್ತ

ಹೆದ್ದಾರಿ ಜಲಾವೃತಗೊಂಡಿರುವುದರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ

- Advertisement -
- Advertisement -

ಶನಿವಾರದಿಂದ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತಗೊಂಡಿದೆ. ಸೋಮವಾರ ಬೆಳಿಗ್ಗೆ ಕೂಡಾ ಮಳೆ ಸುರಿದ್ದು, ಇದರಿಂದಾಗಿ ಹೆದ್ದಾರಿಯ ಕೆಂಗೇರಿ-ವಂಡರ್‌ ಲಾ ನಡುವಿನ ಸಂಚಾರಕ್ಕೆ ತೊಂದರೆಯಾಗಿದೆ. ರಾಮನಗರದಲ್ಲೂ ಭಾರಿ ಮಳೆಯಾಗಿದ್ದು, ಸುಮಾರು 20 ವರ್ಷಗಳ ನಂತರ ಕಣ್ವ ಅಣೆಕಟ್ಟು ತುಂಬಿದೆ ಎಂದು ವರದಿಯಾಗಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತಿರುವ ನೀರಿನಿಂದಾಗಿ ಸಂಚಾರ ಅಸ್ತವ್ಯಸ್ಥವಾಗಿದ್ದು ಬಿಡದಿ ರೈಲ್ವೇ ನಿಲ್ದಾಣದ ರೈಲ್ವೇ ಹಳಿಗಳು ನೀರಿನಿಂದ ಆವೃತವಾಗಿದೆ. ನಿರ್ಮಾಣ ಹಂತದಲ್ಲಿರುವ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನೀರು ತುಂಬಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಮನಗರ ಜಿಲ್ಲಾ ಪೊಲೀಸರು ಮುಂದಿನ ಮೂರು ದಿನಗಳು ಬದಲಿ ರಸ್ತೆಯ ಮೂಲಕ ಚಲಿಸುಂತೆ ಶನಿವಾರ ಪ್ರಯಾಣಿಕರಿಗೆ ಸೂಚನೆ ನೀಡಿದ್ದರು. “ಜಿಲ್ಲೆಯ ಹಲವು ಕೆರೆ ಕಟ್ಟೆಗಳು ತುಂಬಿದ ಪರಿಣಾಮವಾಗಿ ಕೆರೆಯ ಕೋಡಿಗಳು ಹರಿದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನರಿನ ಪ್ರವಾಹ ಉಂಟಾಗಿ ರಸ್ತೆ ದುರಸ್ತಿಗೊಂಡಿದೆ. ಹೀಗಾಗಿ ಮುಂದಿನ ಮೂರು ದಿನಗಳು ಬೆಂಗಳೂರು- ಮೈಸೂರು ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರು ಬೆಂಗಳೂರು-ಕನಕಪುರ- ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು – ಕುಣಿಗಲ್ – ಮೈಸೂರು ಮಾರ್ಗವಾಗಿ ಪ್ರಯಾಣಿಸಬೇಕು” ಎಂದು ಜಿಲ್ಲಾ ಪೊಲೀಸರು ವಿನಂತಿಸಿಕೊಂಡಿದ್ದರು.

ಈ ನಡುವೆ ರಾಮನಗರಲ್ಲಿ ನರೆ ಪರಿಸ್ಥಿತಿ ಉಂಟಾಗಿದ್ದು ಕಣ್ವಾ ಅಣಕಟ್ಟು 20 ವರ್ಷಗಳ ನಂತರ ತುಂಬಿದೆ ಎಂದು ಪತ್ರಕರ್ತರು ವರದಿ ಮಾಡಿದ್ದಾರೆ. ನಿರ್ಮಾಣ ಹಂತದಲ್ಲಿರುವ ಹೆದ್ದಾರಿಯಲ್ಲಿ ನೆರೆ ಉಂಟಾಗಿದ್ದು ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗವು ದೃಶ್ಯವೂ ವೈರಲ್ ಆಗಿದೆ.

ಇದನ್ನೂ ಓದಿ: ಮಳೆ: ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ತತ್ತರ

ಬಿಡದಿ ರೈಲು ನಿಲ್ದಾಣವೂ ನೀರಿನಿಂದ ಆವೃತ್ತವಾಗಿದ್ದು, “ರೈಲುಗಳನ್ನು ದೋಣಿಗಳೊಂದಿಗೆ ಬದಲಾಯಿಸಲು ಯೋಜಿಸಲಾಗುತ್ತಿದೆ” ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಜೊತೆಗೆ ಅವರು ಬಿಡದಿ ರೈಲು ನಿಲ್ದಾಣದ ವಿಡಿಯೊವನ್ನು ಕೂಡಾ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತಗೊಂಡಿರುವ ವಿಡಿಯೊ ಕೂಡಾ ವೈರಲ್ ಆಗಿದೆ. ವಿಡಿಯೊದಲ್ಲಿ ಹಲವು ವಾಹನಗಳು ನೀರಿನಲ್ಲಿ ಮುಳುಗಿರುವುದು ಕಾಣಿಸಿಕೊಂಡಿದೆ.

ಮಳೆಯಿಂದಾಗಿ ಬೆಂಗಳೂರು ನಗರದ ಒಳಗಡೆಯು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಲಾಲ್​ಬಾಗ್, ಸೌಂತ್ ಎಂಡ್ ಸರ್ಕಲ್, ಜೆ.ಸಿ.ರಸ್ತೆ, ಜಯನಗರ, ಶಾಂತಿನಗರ ಸುತ್ತಮುತ್ತ ಹೆಚ್ಚಿನ ಮಳೆಯಾಗಿದೆ ಎಂದು ವರದಿಯಾಗಿದ್ದು, ಹಲವಾರು ಕಡೆಯಲ್ಲಿ ನೀರು ಶೇಖರಣೆಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...