Homeಕರ್ನಾಟಕಭಾರಿ ಮಳೆ: ಬೆಂಗಳೂರು ಸೇರಿದಂತೆ ಸುತ್ತಮುತ್ತ ಜನಜೀವನ ಅಸ್ತವ್ಯಸ್ತ

ಭಾರಿ ಮಳೆ: ಬೆಂಗಳೂರು ಸೇರಿದಂತೆ ಸುತ್ತಮುತ್ತ ಜನಜೀವನ ಅಸ್ತವ್ಯಸ್ತ

ಹೆದ್ದಾರಿ ಜಲಾವೃತಗೊಂಡಿರುವುದರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ

- Advertisement -
- Advertisement -

ಶನಿವಾರದಿಂದ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತಗೊಂಡಿದೆ. ಸೋಮವಾರ ಬೆಳಿಗ್ಗೆ ಕೂಡಾ ಮಳೆ ಸುರಿದ್ದು, ಇದರಿಂದಾಗಿ ಹೆದ್ದಾರಿಯ ಕೆಂಗೇರಿ-ವಂಡರ್‌ ಲಾ ನಡುವಿನ ಸಂಚಾರಕ್ಕೆ ತೊಂದರೆಯಾಗಿದೆ. ರಾಮನಗರದಲ್ಲೂ ಭಾರಿ ಮಳೆಯಾಗಿದ್ದು, ಸುಮಾರು 20 ವರ್ಷಗಳ ನಂತರ ಕಣ್ವ ಅಣೆಕಟ್ಟು ತುಂಬಿದೆ ಎಂದು ವರದಿಯಾಗಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತಿರುವ ನೀರಿನಿಂದಾಗಿ ಸಂಚಾರ ಅಸ್ತವ್ಯಸ್ಥವಾಗಿದ್ದು ಬಿಡದಿ ರೈಲ್ವೇ ನಿಲ್ದಾಣದ ರೈಲ್ವೇ ಹಳಿಗಳು ನೀರಿನಿಂದ ಆವೃತವಾಗಿದೆ. ನಿರ್ಮಾಣ ಹಂತದಲ್ಲಿರುವ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನೀರು ತುಂಬಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಮನಗರ ಜಿಲ್ಲಾ ಪೊಲೀಸರು ಮುಂದಿನ ಮೂರು ದಿನಗಳು ಬದಲಿ ರಸ್ತೆಯ ಮೂಲಕ ಚಲಿಸುಂತೆ ಶನಿವಾರ ಪ್ರಯಾಣಿಕರಿಗೆ ಸೂಚನೆ ನೀಡಿದ್ದರು. “ಜಿಲ್ಲೆಯ ಹಲವು ಕೆರೆ ಕಟ್ಟೆಗಳು ತುಂಬಿದ ಪರಿಣಾಮವಾಗಿ ಕೆರೆಯ ಕೋಡಿಗಳು ಹರಿದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನರಿನ ಪ್ರವಾಹ ಉಂಟಾಗಿ ರಸ್ತೆ ದುರಸ್ತಿಗೊಂಡಿದೆ. ಹೀಗಾಗಿ ಮುಂದಿನ ಮೂರು ದಿನಗಳು ಬೆಂಗಳೂರು- ಮೈಸೂರು ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರು ಬೆಂಗಳೂರು-ಕನಕಪುರ- ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು – ಕುಣಿಗಲ್ – ಮೈಸೂರು ಮಾರ್ಗವಾಗಿ ಪ್ರಯಾಣಿಸಬೇಕು” ಎಂದು ಜಿಲ್ಲಾ ಪೊಲೀಸರು ವಿನಂತಿಸಿಕೊಂಡಿದ್ದರು.

ಈ ನಡುವೆ ರಾಮನಗರಲ್ಲಿ ನರೆ ಪರಿಸ್ಥಿತಿ ಉಂಟಾಗಿದ್ದು ಕಣ್ವಾ ಅಣಕಟ್ಟು 20 ವರ್ಷಗಳ ನಂತರ ತುಂಬಿದೆ ಎಂದು ಪತ್ರಕರ್ತರು ವರದಿ ಮಾಡಿದ್ದಾರೆ. ನಿರ್ಮಾಣ ಹಂತದಲ್ಲಿರುವ ಹೆದ್ದಾರಿಯಲ್ಲಿ ನೆರೆ ಉಂಟಾಗಿದ್ದು ವಾಹನಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗವು ದೃಶ್ಯವೂ ವೈರಲ್ ಆಗಿದೆ.

ಇದನ್ನೂ ಓದಿ: ಮಳೆ: ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ತತ್ತರ

ಬಿಡದಿ ರೈಲು ನಿಲ್ದಾಣವೂ ನೀರಿನಿಂದ ಆವೃತ್ತವಾಗಿದ್ದು, “ರೈಲುಗಳನ್ನು ದೋಣಿಗಳೊಂದಿಗೆ ಬದಲಾಯಿಸಲು ಯೋಜಿಸಲಾಗುತ್ತಿದೆ” ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಜೊತೆಗೆ ಅವರು ಬಿಡದಿ ರೈಲು ನಿಲ್ದಾಣದ ವಿಡಿಯೊವನ್ನು ಕೂಡಾ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತಗೊಂಡಿರುವ ವಿಡಿಯೊ ಕೂಡಾ ವೈರಲ್ ಆಗಿದೆ. ವಿಡಿಯೊದಲ್ಲಿ ಹಲವು ವಾಹನಗಳು ನೀರಿನಲ್ಲಿ ಮುಳುಗಿರುವುದು ಕಾಣಿಸಿಕೊಂಡಿದೆ.

ಮಳೆಯಿಂದಾಗಿ ಬೆಂಗಳೂರು ನಗರದ ಒಳಗಡೆಯು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಲಾಲ್​ಬಾಗ್, ಸೌಂತ್ ಎಂಡ್ ಸರ್ಕಲ್, ಜೆ.ಸಿ.ರಸ್ತೆ, ಜಯನಗರ, ಶಾಂತಿನಗರ ಸುತ್ತಮುತ್ತ ಹೆಚ್ಚಿನ ಮಳೆಯಾಗಿದೆ ಎಂದು ವರದಿಯಾಗಿದ್ದು, ಹಲವಾರು ಕಡೆಯಲ್ಲಿ ನೀರು ಶೇಖರಣೆಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...