Homeಕರ್ನಾಟಕಭಾರೀ ಮಳೆ: ಬೆಂಗಳೂರಿನಲ್ಲಿ ಇಬ್ಬರು ವಲಸೆ ಕಾರ್ಮಿಕರ ಸಾವು

ಭಾರೀ ಮಳೆ: ಬೆಂಗಳೂರಿನಲ್ಲಿ ಇಬ್ಬರು ವಲಸೆ ಕಾರ್ಮಿಕರ ಸಾವು

- Advertisement -
- Advertisement -

ಬೆಂಗಳೂರಿನಲ್ಲಿ ಮಂಗಳವಾರ ಸುರಿದ ಭಾರೀ ಮಳೆ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನಗರದ ಹಲವೆಡೆ ನೀರು ನಿಂತಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮುಂದಿನ 4-5 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದ್ದು ಬೆಂಗಳೂರಿನ ಗ್ರಾಮಾಂತರ ಮತ್ತು ನಗರಗಳ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಿದೆ.

ಮಳೆಗೆ ಮೃತಪಟ್ಟ ಇಬ್ಬರು ಉಳ್ಳಾಲ ಉಪನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂದು ವರಿದಿಯಾಗಿದೆ. ಮೃತಪಟ್ಟಿರುವವರಲ್ಲಿ ಒಬ್ಬರು ಬಿಹಾರದಿಂದ ಮತ್ತು ಇನ್ನೊಬ್ಬರು ಉತ್ತರ ಪ್ರದೇಶದದಿಂದ ವಲಸೆ ಬಂದ ಕಾರ್ಮಿಕರಾಗಿದ್ದಾರೆ. ಇಬ್ಬರ ಶವಗಳು ಪೈಪ್‌ಲೈನ್ ಕಾಮಗಾರಿ ಸ್ಥಳದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೃತರನ್ನು ಬಿಹಾರದ ದೇವಭಾರತ್ ಮತ್ತು ಉತ್ತರ ಪ್ರದೇಶದ ಅಂಕಿತ್ ಕುಮಾರ್ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಮಳೆ ತೀವ್ರಗೊಂಡಿತು. ಕಾರ್ಮಿಕರು ಕಾಮಗಾರಿ ಸ್ಥಳದಲ್ಲಿ ಇದ್ದರು. ಸಂಜೆ 7 ರ ಸುಮಾರಿಗೆ ನೀರಿನ ಮಟ್ಟ ಏರಿತು. ನಾವು ಅಲ್ಲಿ ಪ್ರತಿನಿತ್ಯ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ವರದಿಗಳ ಪ್ರಕಾರ, ನಗರದಲ್ಲಿ ನಿನ್ನೆ 24 ಗಂಟೆಯಲ್ಲಿ 114.6 ಮಿಮೀ ಮಳೆಯಾಗಿದೆ. ಸಂಜೆ ಪ್ರಾರಂಭವಾದ ಮಳೆಯು ತಡರಾತ್ರಿ ತೀವ್ರಗೊಂಡಿತ್ತು. ಮಳೆಯಿಂದಾಗಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ ಪರಿಣಾಮ ಹಲವಾರು ವಾಹನಗಳು ಮುಳುಗಿಹೋಗಿವೆ.

“ಮಳೆ ಬಂದರೆ ನಮಗೆ ಪ್ರಯಾಣಿಸಲು ತುಂಬಾ ಕಷ್ಟವಾಗುತ್ತದೆ. ಪ್ರತಿ ವರ್ಷವೂ ಇದೇ ಪರಿಸ್ಥಿತಿ ಇದೆ” ಎಂದು ಕಳೆದ ಐದು ವರ್ಷಗಳಿಂದ ಕೆ.ಆರ್. ಪುರಂ ಅಂಡರ್‌ಪಾಸ್ ಬಳಸುತ್ತಿರುವ ಬ್ಯಾಂಕ್ ಉದ್ಯೋಗಿ ಗ್ರೇಸ್ ಡಿಸೋಜಾ ಹೇಳಿದ್ದಾರೆ.

ಗುಡುಗು ಸಿಡಿಲಿನಿಂದ ಉಂಟಾದ ವಿದ್ಯುತ್ ವೈಫಲ್ಯದಿಂದಾಗಿ ಗ್ರೀನ್ ಲೈನಿನ ಮೆಟ್ರೋವನ್ನು ನಿಲ್ಲಿಸಬೇಕಾಗಿ ಬಂದು ಮೆಟ್ರೋ ಸೇವೆಗಳು ಸಹ ಅಲ್ಪಾವಧಿಗೆ ಪರಿಣಾಮ ಬೀರಿದವು.

ಇದನ್ನೂ ಓದಿ: ವಿಡಿಯೊ ; ಯುವಕನನ್ನು ಹೆಗಲ ಮೇಲೆ ಹೊತ್ತು ರಕ್ಷಣೆಗೆ ನಿಂತ ಮಹಿಳಾ ಇನ್ಸ್‌‌ಪೆಕ್ಟರ್‌‌!

ಬೆಂಗಳೂರಿನ ಜೆಪಿ ನಗರ, ಜಯನಗರ, ಲಾಲ್‌ಬಾಗ್, ಚಿಕ್ಕಪೇಟೆ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ಎಂಜಿ ರಸ್ತೆ, ಕಬ್ಬನ್ ಪಾರ್ಕ್, ವಿಜಯನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆ ಸೇರಿದಂತೆ ಹಲವಾರು ಪ್ರದೇಶದಲ್ಲಿ ಜನರು ಸಂಕಷ್ಟಕ್ಕೆ ಒಳಗಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...