Homeಕರ್ನಾಟಕಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ -...

ಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ – SFI ಆಕ್ರೋಶ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ಆರೆಸ್ಸೆಸ್‌ ಸಂಸ್ಥಾಪಕ ಕೆ.ಬಿ. ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು, ‘ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಮಾಡಿದ ದೊಡ್ಡ ಅವಮಾನ’ ಎಂದು ಭಾರತ ವಿದ್ಯಾರ್ಥಿ ಪರಿಷತ್‌‌ (ಎಸ್ಎಫ್ಐ) ರಾಜ್ಯ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಬಿಜಿಪಿ ಸರ್ಕಾರ ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಹಾಗೂ ಮತಾಂಧತೆ, ಮೌಡ್ಯ , ಲಿಂಗ ತಾರತಮ್ಯ ಬಿತ್ತುವ ಪಠ್ಯಗಳನ್ನು ಸೇರ್ಪಡೆ ಮಾಡಿ ನಾಡಿನ ಮಕ್ಕಳು ಓದುವ ಪಠ್ಯ ಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿದೆ ಎಂದು ಎಸ್ಎಫಐ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರೆಸ್ಸೆಸ್‌ ಬಿಜೆಪಿಯ ಸೈದ್ದಾಂತಿಕ ನಾಯಕ ವಿ.ಡಿ‌ ಯ. ಸಾವರ್ಕರ್ ಸ್ವಾತಂತ್ಯ ಹೋರಾಟದ ವೇಳೆ ಬ್ರಿಟಿಷರಿಗೆ ಕ್ಷಮಾಪನ ಪತ್ರ ಬರೆದು ಭಾರತದ ಸ್ವಾತಂತ್ಯ ಹೋರಾಟಕ್ಕೆ ದ್ರೋಹ ಬಗೆದಿದ್ದರು. ಈಗ ಈ ಸಾವರ್ಕರ್ ಸಂತತಿಯ ಬಿಜೆಪಿ ಸರ್ಕಾರ ಬ್ರಿಟಿಷರ ವಿರುದ್ಧ ರಾಜಿರಹಿತವಾಗಿ ಹೋರಾಡಿ 23 ವರ್ಷಕ್ಕೆ ನೇಣುಗಂಬಕ್ಕೇರಿದ ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ ಪಠ್ಯವನ್ನು ತೆಗೆದು ಹಾಕಿ ಮತ್ತೋಮ್ಮೆ ಬ್ರಿಟಿಷರ ಗುಲಾಮರು ತಾವು ಎಂಬುದನ್ನು ಬಿಜೆಪಿ ಸಾಬೀತುಪಡಿಸಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ಇದನ್ನೂ ಓದಿ: ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಇದೇ ಸಂದರ್ಭದಲ್ಲಿ ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ರಾಜ್ಯದ ಗೌರಿಬಿದನೂರು ತಾಲ್ಲೂಕಿನಲ್ಲಿರುವ ವಿದುರಾಶ್ವತ್ಥ ಸ್ವಾತಂತ್ರ್ಯ ಹೋರಾಟಗಾರರ ಹುತಾತ್ಮ ಸ್ಮಾರಕದ ಪೋಟೋ ಗ್ಯಾಲರಿಯ ಮೇಲೆ ಬಜರಂಗದಳ, ಆರೆಸ್ಸೆಸ್‌‌ ಕಾರ್ಯಕರ್ತರು ದಾಳಿ ಮಾಡಿ ಸ್ವಾತಂತ್ರ್ಯದ ಚರಿತ್ರೆಯನ್ನು ನಾಶಗೊಳಿಸುವ ದೇಶದ್ರೋಹದ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿರುವ ಎಸ್‌ಎಫ್‌ಐ ಘಟನೆಯನ್ನು ಖಂಡಿಸಿದೆ.

“2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣದಲ್ಲಿ ಆರೆಸ್ಸೆಸ್‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತೀಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ದೇಶಕ್ಕೆ ಆದರ್ಶರಾದ ಭಗತ್ ಸಿಂಗ್, ಮಹಾತ್ಮ ಗಾಂಧಿ, ಅಂಬೇಡ್ಕರ್, ಬಸವಣ್ಣ, ನಾರಾಯಣಗುರು, ಪೆರಿಯಾರ್, ಕುವೆಂಪು ಮುಂತಾದವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಓದದಂತೆ ಮಾಡುವ ಹುನ್ನಾರ ನಡೆದಿದ್ದು, ಇದು ದೇಶದ ಸಮಗ್ರತೆ, ಐಕ್ಯತೆಗೆ ದೊಡ್ಡ ಅಪಾಯಕಾರಿ ಎಂದು ಎಸ್‌ಎಫ್‌ಐ ಎಚ್ಚರಿಸಿದೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರೆಸ್ಸೆಸ್‌ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ ಎಂದು ಎಸ್‌ಎಫ್‌ಐ ಹೇಳಿದೆ.

ಹೆಡ್ಗೆವಾರ್‌ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣವು ಸಂಘ ಪರಿವಾರಕ್ಕೆ ಆದರ್ಶ ಎನಿಸಬಹುದೇ ಹೊರತು ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಎಸ್‌ಎಫ್‌ಐ ಹೇಳಿದ್ದು, ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...