Homeಕರ್ನಾಟಕಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ -...

ಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ – SFI ಆಕ್ರೋಶ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ಆರೆಸ್ಸೆಸ್‌ ಸಂಸ್ಥಾಪಕ ಕೆ.ಬಿ. ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು, ‘ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಮಾಡಿದ ದೊಡ್ಡ ಅವಮಾನ’ ಎಂದು ಭಾರತ ವಿದ್ಯಾರ್ಥಿ ಪರಿಷತ್‌‌ (ಎಸ್ಎಫ್ಐ) ರಾಜ್ಯ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಬಿಜಿಪಿ ಸರ್ಕಾರ ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಹಾಗೂ ಮತಾಂಧತೆ, ಮೌಡ್ಯ , ಲಿಂಗ ತಾರತಮ್ಯ ಬಿತ್ತುವ ಪಠ್ಯಗಳನ್ನು ಸೇರ್ಪಡೆ ಮಾಡಿ ನಾಡಿನ ಮಕ್ಕಳು ಓದುವ ಪಠ್ಯ ಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿದೆ ಎಂದು ಎಸ್ಎಫಐ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರೆಸ್ಸೆಸ್‌ ಬಿಜೆಪಿಯ ಸೈದ್ದಾಂತಿಕ ನಾಯಕ ವಿ.ಡಿ‌ ಯ. ಸಾವರ್ಕರ್ ಸ್ವಾತಂತ್ಯ ಹೋರಾಟದ ವೇಳೆ ಬ್ರಿಟಿಷರಿಗೆ ಕ್ಷಮಾಪನ ಪತ್ರ ಬರೆದು ಭಾರತದ ಸ್ವಾತಂತ್ಯ ಹೋರಾಟಕ್ಕೆ ದ್ರೋಹ ಬಗೆದಿದ್ದರು. ಈಗ ಈ ಸಾವರ್ಕರ್ ಸಂತತಿಯ ಬಿಜೆಪಿ ಸರ್ಕಾರ ಬ್ರಿಟಿಷರ ವಿರುದ್ಧ ರಾಜಿರಹಿತವಾಗಿ ಹೋರಾಡಿ 23 ವರ್ಷಕ್ಕೆ ನೇಣುಗಂಬಕ್ಕೇರಿದ ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ ಪಠ್ಯವನ್ನು ತೆಗೆದು ಹಾಕಿ ಮತ್ತೋಮ್ಮೆ ಬ್ರಿಟಿಷರ ಗುಲಾಮರು ತಾವು ಎಂಬುದನ್ನು ಬಿಜೆಪಿ ಸಾಬೀತುಪಡಿಸಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ಇದನ್ನೂ ಓದಿ: ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಇದೇ ಸಂದರ್ಭದಲ್ಲಿ ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ರಾಜ್ಯದ ಗೌರಿಬಿದನೂರು ತಾಲ್ಲೂಕಿನಲ್ಲಿರುವ ವಿದುರಾಶ್ವತ್ಥ ಸ್ವಾತಂತ್ರ್ಯ ಹೋರಾಟಗಾರರ ಹುತಾತ್ಮ ಸ್ಮಾರಕದ ಪೋಟೋ ಗ್ಯಾಲರಿಯ ಮೇಲೆ ಬಜರಂಗದಳ, ಆರೆಸ್ಸೆಸ್‌‌ ಕಾರ್ಯಕರ್ತರು ದಾಳಿ ಮಾಡಿ ಸ್ವಾತಂತ್ರ್ಯದ ಚರಿತ್ರೆಯನ್ನು ನಾಶಗೊಳಿಸುವ ದೇಶದ್ರೋಹದ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿರುವ ಎಸ್‌ಎಫ್‌ಐ ಘಟನೆಯನ್ನು ಖಂಡಿಸಿದೆ.

“2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣದಲ್ಲಿ ಆರೆಸ್ಸೆಸ್‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತೀಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ದೇಶಕ್ಕೆ ಆದರ್ಶರಾದ ಭಗತ್ ಸಿಂಗ್, ಮಹಾತ್ಮ ಗಾಂಧಿ, ಅಂಬೇಡ್ಕರ್, ಬಸವಣ್ಣ, ನಾರಾಯಣಗುರು, ಪೆರಿಯಾರ್, ಕುವೆಂಪು ಮುಂತಾದವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಓದದಂತೆ ಮಾಡುವ ಹುನ್ನಾರ ನಡೆದಿದ್ದು, ಇದು ದೇಶದ ಸಮಗ್ರತೆ, ಐಕ್ಯತೆಗೆ ದೊಡ್ಡ ಅಪಾಯಕಾರಿ ಎಂದು ಎಸ್‌ಎಫ್‌ಐ ಎಚ್ಚರಿಸಿದೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರೆಸ್ಸೆಸ್‌ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ ಎಂದು ಎಸ್‌ಎಫ್‌ಐ ಹೇಳಿದೆ.

ಹೆಡ್ಗೆವಾರ್‌ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣವು ಸಂಘ ಪರಿವಾರಕ್ಕೆ ಆದರ್ಶ ಎನಿಸಬಹುದೇ ಹೊರತು ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಎಸ್‌ಎಫ್‌ಐ ಹೇಳಿದ್ದು, ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...