Homeಕರ್ನಾಟಕಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ -...

ಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ – SFI ಆಕ್ರೋಶ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ಆರೆಸ್ಸೆಸ್‌ ಸಂಸ್ಥಾಪಕ ಕೆ.ಬಿ. ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು, ‘ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಮಾಡಿದ ದೊಡ್ಡ ಅವಮಾನ’ ಎಂದು ಭಾರತ ವಿದ್ಯಾರ್ಥಿ ಪರಿಷತ್‌‌ (ಎಸ್ಎಫ್ಐ) ರಾಜ್ಯ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಬಿಜಿಪಿ ಸರ್ಕಾರ ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಹಾಗೂ ಮತಾಂಧತೆ, ಮೌಡ್ಯ , ಲಿಂಗ ತಾರತಮ್ಯ ಬಿತ್ತುವ ಪಠ್ಯಗಳನ್ನು ಸೇರ್ಪಡೆ ಮಾಡಿ ನಾಡಿನ ಮಕ್ಕಳು ಓದುವ ಪಠ್ಯ ಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿದೆ ಎಂದು ಎಸ್ಎಫಐ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರೆಸ್ಸೆಸ್‌ ಬಿಜೆಪಿಯ ಸೈದ್ದಾಂತಿಕ ನಾಯಕ ವಿ.ಡಿ‌ ಯ. ಸಾವರ್ಕರ್ ಸ್ವಾತಂತ್ಯ ಹೋರಾಟದ ವೇಳೆ ಬ್ರಿಟಿಷರಿಗೆ ಕ್ಷಮಾಪನ ಪತ್ರ ಬರೆದು ಭಾರತದ ಸ್ವಾತಂತ್ಯ ಹೋರಾಟಕ್ಕೆ ದ್ರೋಹ ಬಗೆದಿದ್ದರು. ಈಗ ಈ ಸಾವರ್ಕರ್ ಸಂತತಿಯ ಬಿಜೆಪಿ ಸರ್ಕಾರ ಬ್ರಿಟಿಷರ ವಿರುದ್ಧ ರಾಜಿರಹಿತವಾಗಿ ಹೋರಾಡಿ 23 ವರ್ಷಕ್ಕೆ ನೇಣುಗಂಬಕ್ಕೇರಿದ ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ ಪಠ್ಯವನ್ನು ತೆಗೆದು ಹಾಕಿ ಮತ್ತೋಮ್ಮೆ ಬ್ರಿಟಿಷರ ಗುಲಾಮರು ತಾವು ಎಂಬುದನ್ನು ಬಿಜೆಪಿ ಸಾಬೀತುಪಡಿಸಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ಇದನ್ನೂ ಓದಿ: ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಇದೇ ಸಂದರ್ಭದಲ್ಲಿ ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ರಾಜ್ಯದ ಗೌರಿಬಿದನೂರು ತಾಲ್ಲೂಕಿನಲ್ಲಿರುವ ವಿದುರಾಶ್ವತ್ಥ ಸ್ವಾತಂತ್ರ್ಯ ಹೋರಾಟಗಾರರ ಹುತಾತ್ಮ ಸ್ಮಾರಕದ ಪೋಟೋ ಗ್ಯಾಲರಿಯ ಮೇಲೆ ಬಜರಂಗದಳ, ಆರೆಸ್ಸೆಸ್‌‌ ಕಾರ್ಯಕರ್ತರು ದಾಳಿ ಮಾಡಿ ಸ್ವಾತಂತ್ರ್ಯದ ಚರಿತ್ರೆಯನ್ನು ನಾಶಗೊಳಿಸುವ ದೇಶದ್ರೋಹದ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿರುವ ಎಸ್‌ಎಫ್‌ಐ ಘಟನೆಯನ್ನು ಖಂಡಿಸಿದೆ.

“2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣದಲ್ಲಿ ಆರೆಸ್ಸೆಸ್‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತೀಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ದೇಶಕ್ಕೆ ಆದರ್ಶರಾದ ಭಗತ್ ಸಿಂಗ್, ಮಹಾತ್ಮ ಗಾಂಧಿ, ಅಂಬೇಡ್ಕರ್, ಬಸವಣ್ಣ, ನಾರಾಯಣಗುರು, ಪೆರಿಯಾರ್, ಕುವೆಂಪು ಮುಂತಾದವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಓದದಂತೆ ಮಾಡುವ ಹುನ್ನಾರ ನಡೆದಿದ್ದು, ಇದು ದೇಶದ ಸಮಗ್ರತೆ, ಐಕ್ಯತೆಗೆ ದೊಡ್ಡ ಅಪಾಯಕಾರಿ ಎಂದು ಎಸ್‌ಎಫ್‌ಐ ಎಚ್ಚರಿಸಿದೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರೆಸ್ಸೆಸ್‌ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ ಎಂದು ಎಸ್‌ಎಫ್‌ಐ ಹೇಳಿದೆ.

ಹೆಡ್ಗೆವಾರ್‌ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣವು ಸಂಘ ಪರಿವಾರಕ್ಕೆ ಆದರ್ಶ ಎನಿಸಬಹುದೇ ಹೊರತು ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಎಸ್‌ಎಫ್‌ಐ ಹೇಳಿದ್ದು, ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...