Homeಕರ್ನಾಟಕಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ -...

ಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ – SFI ಆಕ್ರೋಶ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ಆರೆಸ್ಸೆಸ್‌ ಸಂಸ್ಥಾಪಕ ಕೆ.ಬಿ. ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು, ‘ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಮಾಡಿದ ದೊಡ್ಡ ಅವಮಾನ’ ಎಂದು ಭಾರತ ವಿದ್ಯಾರ್ಥಿ ಪರಿಷತ್‌‌ (ಎಸ್ಎಫ್ಐ) ರಾಜ್ಯ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಬಿಜಿಪಿ ಸರ್ಕಾರ ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಹಾಗೂ ಮತಾಂಧತೆ, ಮೌಡ್ಯ , ಲಿಂಗ ತಾರತಮ್ಯ ಬಿತ್ತುವ ಪಠ್ಯಗಳನ್ನು ಸೇರ್ಪಡೆ ಮಾಡಿ ನಾಡಿನ ಮಕ್ಕಳು ಓದುವ ಪಠ್ಯ ಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿದೆ ಎಂದು ಎಸ್ಎಫಐ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರೆಸ್ಸೆಸ್‌ ಬಿಜೆಪಿಯ ಸೈದ್ದಾಂತಿಕ ನಾಯಕ ವಿ.ಡಿ‌ ಯ. ಸಾವರ್ಕರ್ ಸ್ವಾತಂತ್ಯ ಹೋರಾಟದ ವೇಳೆ ಬ್ರಿಟಿಷರಿಗೆ ಕ್ಷಮಾಪನ ಪತ್ರ ಬರೆದು ಭಾರತದ ಸ್ವಾತಂತ್ಯ ಹೋರಾಟಕ್ಕೆ ದ್ರೋಹ ಬಗೆದಿದ್ದರು. ಈಗ ಈ ಸಾವರ್ಕರ್ ಸಂತತಿಯ ಬಿಜೆಪಿ ಸರ್ಕಾರ ಬ್ರಿಟಿಷರ ವಿರುದ್ಧ ರಾಜಿರಹಿತವಾಗಿ ಹೋರಾಡಿ 23 ವರ್ಷಕ್ಕೆ ನೇಣುಗಂಬಕ್ಕೇರಿದ ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ ಪಠ್ಯವನ್ನು ತೆಗೆದು ಹಾಕಿ ಮತ್ತೋಮ್ಮೆ ಬ್ರಿಟಿಷರ ಗುಲಾಮರು ತಾವು ಎಂಬುದನ್ನು ಬಿಜೆಪಿ ಸಾಬೀತುಪಡಿಸಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ಇದನ್ನೂ ಓದಿ: ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಇದೇ ಸಂದರ್ಭದಲ್ಲಿ ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ರಾಜ್ಯದ ಗೌರಿಬಿದನೂರು ತಾಲ್ಲೂಕಿನಲ್ಲಿರುವ ವಿದುರಾಶ್ವತ್ಥ ಸ್ವಾತಂತ್ರ್ಯ ಹೋರಾಟಗಾರರ ಹುತಾತ್ಮ ಸ್ಮಾರಕದ ಪೋಟೋ ಗ್ಯಾಲರಿಯ ಮೇಲೆ ಬಜರಂಗದಳ, ಆರೆಸ್ಸೆಸ್‌‌ ಕಾರ್ಯಕರ್ತರು ದಾಳಿ ಮಾಡಿ ಸ್ವಾತಂತ್ರ್ಯದ ಚರಿತ್ರೆಯನ್ನು ನಾಶಗೊಳಿಸುವ ದೇಶದ್ರೋಹದ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿರುವ ಎಸ್‌ಎಫ್‌ಐ ಘಟನೆಯನ್ನು ಖಂಡಿಸಿದೆ.

“2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣದಲ್ಲಿ ಆರೆಸ್ಸೆಸ್‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತೀಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ದೇಶಕ್ಕೆ ಆದರ್ಶರಾದ ಭಗತ್ ಸಿಂಗ್, ಮಹಾತ್ಮ ಗಾಂಧಿ, ಅಂಬೇಡ್ಕರ್, ಬಸವಣ್ಣ, ನಾರಾಯಣಗುರು, ಪೆರಿಯಾರ್, ಕುವೆಂಪು ಮುಂತಾದವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಓದದಂತೆ ಮಾಡುವ ಹುನ್ನಾರ ನಡೆದಿದ್ದು, ಇದು ದೇಶದ ಸಮಗ್ರತೆ, ಐಕ್ಯತೆಗೆ ದೊಡ್ಡ ಅಪಾಯಕಾರಿ ಎಂದು ಎಸ್‌ಎಫ್‌ಐ ಎಚ್ಚರಿಸಿದೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರೆಸ್ಸೆಸ್‌ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ ಎಂದು ಎಸ್‌ಎಫ್‌ಐ ಹೇಳಿದೆ.

ಹೆಡ್ಗೆವಾರ್‌ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣವು ಸಂಘ ಪರಿವಾರಕ್ಕೆ ಆದರ್ಶ ಎನಿಸಬಹುದೇ ಹೊರತು ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಎಸ್‌ಎಫ್‌ಐ ಹೇಳಿದ್ದು, ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...