Homeಕರ್ನಾಟಕಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ -...

ಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ – SFI ಆಕ್ರೋಶ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ಆರೆಸ್ಸೆಸ್‌ ಸಂಸ್ಥಾಪಕ ಕೆ.ಬಿ. ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು, ‘ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಮಾಡಿದ ದೊಡ್ಡ ಅವಮಾನ’ ಎಂದು ಭಾರತ ವಿದ್ಯಾರ್ಥಿ ಪರಿಷತ್‌‌ (ಎಸ್ಎಫ್ಐ) ರಾಜ್ಯ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಬಿಜಿಪಿ ಸರ್ಕಾರ ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಹಾಗೂ ಮತಾಂಧತೆ, ಮೌಡ್ಯ , ಲಿಂಗ ತಾರತಮ್ಯ ಬಿತ್ತುವ ಪಠ್ಯಗಳನ್ನು ಸೇರ್ಪಡೆ ಮಾಡಿ ನಾಡಿನ ಮಕ್ಕಳು ಓದುವ ಪಠ್ಯ ಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿದೆ ಎಂದು ಎಸ್ಎಫಐ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರೆಸ್ಸೆಸ್‌ ಬಿಜೆಪಿಯ ಸೈದ್ದಾಂತಿಕ ನಾಯಕ ವಿ.ಡಿ‌ ಯ. ಸಾವರ್ಕರ್ ಸ್ವಾತಂತ್ಯ ಹೋರಾಟದ ವೇಳೆ ಬ್ರಿಟಿಷರಿಗೆ ಕ್ಷಮಾಪನ ಪತ್ರ ಬರೆದು ಭಾರತದ ಸ್ವಾತಂತ್ಯ ಹೋರಾಟಕ್ಕೆ ದ್ರೋಹ ಬಗೆದಿದ್ದರು. ಈಗ ಈ ಸಾವರ್ಕರ್ ಸಂತತಿಯ ಬಿಜೆಪಿ ಸರ್ಕಾರ ಬ್ರಿಟಿಷರ ವಿರುದ್ಧ ರಾಜಿರಹಿತವಾಗಿ ಹೋರಾಡಿ 23 ವರ್ಷಕ್ಕೆ ನೇಣುಗಂಬಕ್ಕೇರಿದ ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ ಪಠ್ಯವನ್ನು ತೆಗೆದು ಹಾಕಿ ಮತ್ತೋಮ್ಮೆ ಬ್ರಿಟಿಷರ ಗುಲಾಮರು ತಾವು ಎಂಬುದನ್ನು ಬಿಜೆಪಿ ಸಾಬೀತುಪಡಿಸಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ಇದನ್ನೂ ಓದಿ: ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಇದೇ ಸಂದರ್ಭದಲ್ಲಿ ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ರಾಜ್ಯದ ಗೌರಿಬಿದನೂರು ತಾಲ್ಲೂಕಿನಲ್ಲಿರುವ ವಿದುರಾಶ್ವತ್ಥ ಸ್ವಾತಂತ್ರ್ಯ ಹೋರಾಟಗಾರರ ಹುತಾತ್ಮ ಸ್ಮಾರಕದ ಪೋಟೋ ಗ್ಯಾಲರಿಯ ಮೇಲೆ ಬಜರಂಗದಳ, ಆರೆಸ್ಸೆಸ್‌‌ ಕಾರ್ಯಕರ್ತರು ದಾಳಿ ಮಾಡಿ ಸ್ವಾತಂತ್ರ್ಯದ ಚರಿತ್ರೆಯನ್ನು ನಾಶಗೊಳಿಸುವ ದೇಶದ್ರೋಹದ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿರುವ ಎಸ್‌ಎಫ್‌ಐ ಘಟನೆಯನ್ನು ಖಂಡಿಸಿದೆ.

“2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣದಲ್ಲಿ ಆರೆಸ್ಸೆಸ್‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತೀಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ದೇಶಕ್ಕೆ ಆದರ್ಶರಾದ ಭಗತ್ ಸಿಂಗ್, ಮಹಾತ್ಮ ಗಾಂಧಿ, ಅಂಬೇಡ್ಕರ್, ಬಸವಣ್ಣ, ನಾರಾಯಣಗುರು, ಪೆರಿಯಾರ್, ಕುವೆಂಪು ಮುಂತಾದವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಓದದಂತೆ ಮಾಡುವ ಹುನ್ನಾರ ನಡೆದಿದ್ದು, ಇದು ದೇಶದ ಸಮಗ್ರತೆ, ಐಕ್ಯತೆಗೆ ದೊಡ್ಡ ಅಪಾಯಕಾರಿ ಎಂದು ಎಸ್‌ಎಫ್‌ಐ ಎಚ್ಚರಿಸಿದೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರೆಸ್ಸೆಸ್‌ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ ಎಂದು ಎಸ್‌ಎಫ್‌ಐ ಹೇಳಿದೆ.

ಹೆಡ್ಗೆವಾರ್‌ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣವು ಸಂಘ ಪರಿವಾರಕ್ಕೆ ಆದರ್ಶ ಎನಿಸಬಹುದೇ ಹೊರತು ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಎಸ್‌ಎಫ್‌ಐ ಹೇಳಿದ್ದು, ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...