Homeಕರ್ನಾಟಕಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ -...

ಭಗತ್‌ಸಿಂಗ್‌ ಪಾಠ ಕೈಬಿಟ್ಟು ಹೆಡ್ಗೆವಾರ್‌‌ ಭಾಷಣ; ಸ್ವಾತಂತ್ರ್ಯ ಹೋರಾಟಕ್ಕೆ BJP ಮಾಡಿದ ದೊಡ್ಡ ಅವಮಾನ – SFI ಆಕ್ರೋಶ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ಆರೆಸ್ಸೆಸ್‌ ಸಂಸ್ಥಾಪಕ ಕೆ.ಬಿ. ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು, ‘ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿ ಮಾಡಿದ ದೊಡ್ಡ ಅವಮಾನ’ ಎಂದು ಭಾರತ ವಿದ್ಯಾರ್ಥಿ ಪರಿಷತ್‌‌ (ಎಸ್ಎಫ್ಐ) ರಾಜ್ಯ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಬಿಜಿಪಿ ಸರ್ಕಾರ ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಹಾಗೂ ಮತಾಂಧತೆ, ಮೌಡ್ಯ , ಲಿಂಗ ತಾರತಮ್ಯ ಬಿತ್ತುವ ಪಠ್ಯಗಳನ್ನು ಸೇರ್ಪಡೆ ಮಾಡಿ ನಾಡಿನ ಮಕ್ಕಳು ಓದುವ ಪಠ್ಯ ಪುಸ್ತಕಗಳ ಕೇಸರೀಕರಣಕ್ಕೆ ಮುಂದಾಗಿದೆ ಎಂದು ಎಸ್ಎಫಐ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರೆಸ್ಸೆಸ್‌ ಬಿಜೆಪಿಯ ಸೈದ್ದಾಂತಿಕ ನಾಯಕ ವಿ.ಡಿ‌ ಯ. ಸಾವರ್ಕರ್ ಸ್ವಾತಂತ್ಯ ಹೋರಾಟದ ವೇಳೆ ಬ್ರಿಟಿಷರಿಗೆ ಕ್ಷಮಾಪನ ಪತ್ರ ಬರೆದು ಭಾರತದ ಸ್ವಾತಂತ್ಯ ಹೋರಾಟಕ್ಕೆ ದ್ರೋಹ ಬಗೆದಿದ್ದರು. ಈಗ ಈ ಸಾವರ್ಕರ್ ಸಂತತಿಯ ಬಿಜೆಪಿ ಸರ್ಕಾರ ಬ್ರಿಟಿಷರ ವಿರುದ್ಧ ರಾಜಿರಹಿತವಾಗಿ ಹೋರಾಡಿ 23 ವರ್ಷಕ್ಕೆ ನೇಣುಗಂಬಕ್ಕೇರಿದ ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ ಪಠ್ಯವನ್ನು ತೆಗೆದು ಹಾಕಿ ಮತ್ತೋಮ್ಮೆ ಬ್ರಿಟಿಷರ ಗುಲಾಮರು ತಾವು ಎಂಬುದನ್ನು ಬಿಜೆಪಿ ಸಾಬೀತುಪಡಿಸಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ಇದನ್ನೂ ಓದಿ: ‘ಪಠ್ಯಪುಸ್ತಕಗಳ ಬ್ರಾಹ್ಮಣೀಕರಣ’ ವಿರುದ್ಧ ‘ಮುಂದಿನ ನಡೆ ಬಗ್ಗೆ’ ಶನಿವಾರ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಭೆ

ಇದೇ ಸಂದರ್ಭದಲ್ಲಿ ದಕ್ಷಿಣ ಭಾರತದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ರಾಜ್ಯದ ಗೌರಿಬಿದನೂರು ತಾಲ್ಲೂಕಿನಲ್ಲಿರುವ ವಿದುರಾಶ್ವತ್ಥ ಸ್ವಾತಂತ್ರ್ಯ ಹೋರಾಟಗಾರರ ಹುತಾತ್ಮ ಸ್ಮಾರಕದ ಪೋಟೋ ಗ್ಯಾಲರಿಯ ಮೇಲೆ ಬಜರಂಗದಳ, ಆರೆಸ್ಸೆಸ್‌‌ ಕಾರ್ಯಕರ್ತರು ದಾಳಿ ಮಾಡಿ ಸ್ವಾತಂತ್ರ್ಯದ ಚರಿತ್ರೆಯನ್ನು ನಾಶಗೊಳಿಸುವ ದೇಶದ್ರೋಹದ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿರುವ ಎಸ್‌ಎಫ್‌ಐ ಘಟನೆಯನ್ನು ಖಂಡಿಸಿದೆ.

“2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣದಲ್ಲಿ ಆರೆಸ್ಸೆಸ್‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತೀಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಎಸ್‌ಎಫ್‌ಐ ಹೇಳಿದೆ.

ದೇಶಕ್ಕೆ ಆದರ್ಶರಾದ ಭಗತ್ ಸಿಂಗ್, ಮಹಾತ್ಮ ಗಾಂಧಿ, ಅಂಬೇಡ್ಕರ್, ಬಸವಣ್ಣ, ನಾರಾಯಣಗುರು, ಪೆರಿಯಾರ್, ಕುವೆಂಪು ಮುಂತಾದವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಓದದಂತೆ ಮಾಡುವ ಹುನ್ನಾರ ನಡೆದಿದ್ದು, ಇದು ದೇಶದ ಸಮಗ್ರತೆ, ಐಕ್ಯತೆಗೆ ದೊಡ್ಡ ಅಪಾಯಕಾರಿ ಎಂದು ಎಸ್‌ಎಫ್‌ಐ ಎಚ್ಚರಿಸಿದೆ.

ಇದನ್ನೂ ಓದಿ: ‘ಕೆಟ್ಟ ನಡತೆಯ ಇಂಥ ಸಿರಿಯೆಂಬ ಹೆಣ್ಣು’: ನೂತನ ಪಠ್ಯದಲ್ಲಿ ಹೆಣ್ಣನ್ನು ಕೀಳಾಗಿ ಬಿಂಬಿಸಿರುವ ಬನ್ನಂಜೆ ಗೋವಿಂದಾಚಾರ್ಯ

ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರೆಸ್ಸೆಸ್‌ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ ಎಂದು ಎಸ್‌ಎಫ್‌ಐ ಹೇಳಿದೆ.

ಹೆಡ್ಗೆವಾರ್‌ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣವು ಸಂಘ ಪರಿವಾರಕ್ಕೆ ಆದರ್ಶ ಎನಿಸಬಹುದೇ ಹೊರತು ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಎಸ್‌ಎಫ್‌ಐ ಹೇಳಿದ್ದು, ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...