Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...