Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...