Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...