Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...