Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...