Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...