Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...