Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...