Homeಎಕಾನಮಿಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

ಸಂಯಮದ ಆರ್ಥಿಕತೆಗಾಗಿ ಪ್ರಸನ್ನರವರ ಸತ್ಯಾಗ್ರಹ ಬೆಂಬಲಿಸೋಣ: ಶಶಿಕಾಂತ ಯಡಹಳ್ಳಿ

- Advertisement -
- Advertisement -

ಹಿರಿಯ ರಂಗಕರ್ಮಿಗಳೂ ಹಾಗೂ ಗಾಂಧಿವಾದಿಗಳೂ ಆದ ಹೆಗ್ಗೋಡಿನ ಪ್ರಸನ್ನರವರು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಿಂದ ಬೆಂಗಳೂರಿನ ವಲ್ಲಭ ನಿಕೇತನದಲ್ಲಿ ಪವಿತ್ರ ಆರ್ಥಿಕತೆಗಾಗಿ ಆಗ್ರಹಿಸಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಹಾಗೂ ಸತ್ಯಾಗ್ರಹವನ್ನು ತೀವ್ರಗೊಳಿಸಿದ ಪ್ರಸನ್ನರವರು ಅಕ್ಟೊಬರ್ 6 ರಿಂದ ಅಮರಣಾಂತ ಉಪವಾಸವನ್ನೂ ಆರಂಭಿಸಿದ್ದಾರೆ. ಜನಸಾಮಾನ್ಯರಲ್ಲಿ ಮಾರಕ ಆರ್ಥಿಕತೆಯ ಕುರಿತು ಅರಿವು ಮೂಡಿಸುವ ಹಾಗೂ ಆಳುವ ವರ್ಗವನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸತ್ಯಾಗ್ರಹವನ್ನು ಗ್ರಾಮ ಸೇವಾ ಸಂಘವು ಆರಂಭಿಸಿದೆ.

ಕೇಂದ್ರ ಸರಕಾರದ ದಮನಕಾರಿ ಆರ್ಥಿಕ ಯೋಜನೆಗಳಿಂದಾಗಿ ಬಹುತೇಕ ಉದ್ಯಮಗಳು ನಷ್ಟಕ್ಕೆ ತುತ್ತಾಗಿ ದಿವಾಳಿ ಹಂತಕ್ಕೆ ಬಂದು ನಿಂತಿವೆ. ದೇಶಾದ್ಯಂತ ಕೋಟ್ಯಾಂತರ ಕಾರ್ಮಿಕರು ನೌಕರರು ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ. ದೇಶದ ಆರ್ಥಿಕತೆಯೇ ಅಧೋಗತಿಗಿಳಿದಿದೆ. ಬೇಡಿಕೆಗೂ ಹಾಗೂ ಹೂಡಿಕೆಗೂ ನಡುವಿನ ಅಂತರ ಹೆಚ್ಚುತ್ತಲೇ ಸಾಗಿದೆ. ನೋಟು ಅಮಾನ್ಯೀಕರಣ ಹಾಗೂ ಅತಿರೇಕದ ಜಿಎಸ್ಟಿ ತೆರಿಗೆಗಳು ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿದು ಹಾಕಿದೆ. ಇದರಿಂದಾಗಿ ರೈತ ಕಾರ್ಮಿಕರಷ್ಟೇ ಅಲ್ಲಾ ಉದ್ಯಮಪತಿಗಳೂ ಆತ್ಮಹತ್ಯೆ ದಾರಿ ಕಂಡುಕೊಳ್ಳುತ್ತಿದ್ದಾರೆ.

ಒಂದು ಕಡೆ ಆಧುನಿಕ ಯಂತ್ರೋಪಕರಣಗಳ ವ್ಯಾಪಕ ಬಳಕೆಯಿಂದಾಗಿ ನಿರುದ್ಯೋಗ ಹೆಚ್ಚುತ್ತಲೇ ಸಾಗಿದರೆ ಇನ್ನೊಂದು ಕಡೆ ಅಭಿವೃದ್ಧಿಯ ಹೆಸರಲ್ಲಿ ಪರಿಸರವೇ ನಾಶವಾಗುತ್ತಿದೆ. ಅತ್ಯಮೂಲ್ಯವಾದ ಪ್ರಕೃತಿಯ ನಾಶದ ವಿಕೃತಿ ಹಾಗೂ ಅಮೂಲ್ಯ ಮಾನವ ಸಂಪನ್ಮೂಲಗಳ ನಿರ್ಲಕ್ಷತೆಗಳು ಭವಿಷ್ಯದ ಭಾರತವನ್ನು ವಿನಾಶದಂಚಿಗೆ ತಂದು ನಿಲ್ಲಿಸುವುದರಲ್ಲಿ ಸಂದೇಹವಿಲ್ಲ.

ಇಂತಹ ವಿಕ್ಷಿಪ್ತ ಪರಿಸ್ಥಿತಿಯಲ್ಲಿ ಗಾಂಧೀಜಿ ಪ್ರಸ್ತುತವೆನಿಸುತ್ತಾರೆ. ಅವರ ತತ್ವಾದರ್ಶಗಳು ಮಾದರಿ ಎನಿಸುತ್ತವೆ. ವಿನಾಶಕಾರಿ ಆರ್ಥಿಕತೆಯನ್ನು ನಿಯಂತ್ರಿಸಲು ಸಮಯೋಚಿತ ಸಂಯಮದ ಜನಪರ ಆರ್ಥಿಕ ವ್ಯವಸ್ಥೆಯ ಅಗತ್ಯತೆ ಈಗ ಬೇಕಾಗಿದೆ. ಇದಕ್ಕೆ ಪ್ರಸನ್ನರವರು ಪವಿತ್ರ ಆರ್ಥಿಕತೆ ಎಂದು ಕರೆದು ಅದಕ್ಕಾಗಿ ಆಗ್ರಹಿಸಲು ಸತ್ಯಾಗ್ರಹ ನಿರತರಾಗಿದ್ದಾರೆ.

ಗಾಂಧೀಜಿಯವರು ಪ್ರತಿಪಾದಿಸಿದ ಕಡಿಮೆ ಹೂಡಿಕೆ ಮಾಡಿ ಹೆಚ್ಚು ಜನರಿಗೆ ದುಡಿಮೆಗೆ ಅವಕಾಶ ಒದಗಿಸುವಂತಹ ವ್ಯವಸ್ಥೆಗಾಗಿ ಒತ್ತಾಯಿಸಲು ಹಾಗೂ ಕೆಲಸ ಮತ್ತು ಪರಿಸರವನ್ನು ನಾಶಮಾಡುವ ಪ್ರಸ್ತುತ ಜನವಿರೋಧಿ ಆರ್ಥಿಕ ವ್ಯವಸ್ಥೆಯನ್ನು ವಿರೋಧಿಸಲು ಪ್ರಸನ್ನರವರು ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಇದು ಬೋರ್ಗರಿವ ಪ್ರವಾಹದ ವಿರುದ್ದ ಈಜುವ ಪ್ರಕ್ರಿಯೆ. ಇಂತಹುದನ್ನೇ ಇಂಗ್ಲೀಷರ ಬಲಿಷ್ಟ ಏಕಾಧಿಪತ್ಯದ ವಿರುದ್ದ ಹೋರಾಟ ರೂಪಿಸಿದ ಗಾಂಧೀಜಿ ಕೊನೆಗೂ ಯಶಸ್ವಿಯಾಗಿದ್ದರು. ಗಾಂಧೀಜಿಯವರಿಗೆ ಜನಾಂದೋಲನ ಸಂಘಟಿಸುವ ಅಪಾರ ಸಾಮರ್ಥ್ಯ ಸಿದ್ದಿಸಿತ್ತು. ವಿದೇಶಿ ಆಡಳಿತಗಾರರ ದಮನದ ವಿರುದ್ದ ಜನತೆ ತಿರುಗಿ ಬಿದ್ದಿದ್ದರು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸ್ವದೇಶಿ ಶೋಷಕರ ವಿರುದ್ದ ಜನಾಂದೋಲನ ರೂಪಗೊಳ್ಳಲು ಪ್ರಯತ್ನಗಳು ಆರಂಭವಾಗಬೇಕಿದೆ. ಆ ನಿಟ್ಟಿನಲ್ಲಿ ಪುಟ್ಟ ಪ್ರಯತ್ನಕ್ಕೆ ಪ್ರಸನ್ನರವರು ಚಾಲನೆ ಕೊಟ್ಟಿದ್ದಾರೆ.

ವಿನಾಶದತ್ತ ಸಾಗುತ್ತಿರುವ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತರಲು, ನಿರುದ್ಯೋಗವನ್ನು ನಿವಾರಿಸಿ ಪರಿಸರವನ್ನು ಉಳಿಸಲು ಗಾಂಧೀಜಿಯವರು ಪ್ರತಿಪಾದಿಸಿದ ಸಂಯಮದ ಆರ್ಥಿಕತೆಯ ಅನುಷ್ಟಾನ ಇಂದಿನ ತುರ್ತು ಅಗತ್ಯವಾಗಿದೆ. ಪ್ರಸನ್ನರವರು ಪ್ರತಿಪಾದಿಸುವ ಪವಿತ್ರ ಆರ್ಥಿಕತೆಯ ಈ ಚಳುವಳಿಗೆ ಎಲ್ಲಾ ಪ್ರಜ್ಞಾವಂತ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಬೆಂಬಲಿಸಬೇಕಾದ ಅಗತ್ಯವಿದೆ.

ಈ ಇಳಿವಯಸ್ಸಿನಲ್ಲಿ ತಾವು ನಂಬಿದ ಗಾಂಧೀ ತತ್ವಾದರ್ಶಗಳಿಗಾಗಿ ಅಮರಣಾಂತ ಉಪವಾಸ ಆರಂಭಿಸಿರುವ ಪ್ರಸನ್ನನವರನ್ನು ಎಲ್ಲರೂ ಬೆಂಬಲಿಸೋಣ. ಬನ್ನಿ ನಮ್ಮೆಲ್ಲರ ನಡಿಗೆ ವಲ್ಲಭ ನಿಕೇತನದ ಕಡೆಗೆ ಸಾಗಲಿ. ಭವಿಷ್ಯದ ಸಂಯಮದ ಆರ್ಥಿಕತೆಯ ಬೆಳಕಿನ ಕಿರಣವೊಂದು ಇಲ್ಲಿಂದಲೇ ಉದಯಿಸಿ ವಿನಾಶ ತರುವ ಕತ್ತಲೆಯ ಆರ್ಥಿಕತೆಯನ್ನು ಕೊನೆಗಾಣಿಸಲು ಮುನ್ನುಡಿ ಬರೆಯಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ಹೋರಾಟವು ಟೆಕ್ನಾಲಜಿಯ ಮುನ್ನಡೆ,ಬಳಕೆಯಿಂದ ದುಡಿಮೆಯನ್ನು ಕಡಿಮೆ ಮಾಡುವುನ್ನು ವಿರೋದಿಸಬಾರದು.
    ಹೆಚ್ಚಿನ ಆಳಿನ ಬಳಕೆಯಿಂದ ಮಯ್ ದಂಡಿಸಿ ದುಡಿಮೆ ಬದಲು ಟೆಕ್ನಾಲಜಿಯಿಂದ ಕಡಿಮೆ ವೆಚ್ಚದಲ್ಲಿ ಆಗುವ ದುಡಿಮೆಯಿಂದ ಬರುವ ಮಿಗುಉಳಿತಾಯವನ್ನು ದುಡಿಯುವ ಗುಂಪಿಗೆ ತಲುಪಿಸುವ ದಾರಿಯ ಬಗೆಗೆ ಒತ್ರುಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...