Homeಮುಖಪುಟಹೆಲಿಕ್ಯಾಪ್ಟರ್ ಪತನ: ಜನರಲ್ ಬಿಪಿನ್ ರಾವತ್ ದುರ್ಮರಣ

ಹೆಲಿಕ್ಯಾಪ್ಟರ್ ಪತನ: ಜನರಲ್ ಬಿಪಿನ್ ರಾವತ್ ದುರ್ಮರಣ

ಜನರಲ್ ಬಿಪಿನ್ ರಾವತ್, ಶ್ರೀಮತಿ ಮಧುಲಿಕಾ ರಾವತ್ ಮತ್ತು ವಿಮಾನದಲ್ಲಿದ್ದ ಇತರ 11 ಜನರು ದುರದೃಷ್ಟಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತೀವ್ರ ವಿಷಾದದೊಂದಿಗೆ ಖಚಿತಪಡಿಸಲಾಗುತ್ತಿದೆ - IAF

- Advertisement -
- Advertisement -

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ರವರು ಸೇನಾ ಹೆಲಿಕಾಪ್ಟರ್ ಪತನದಲ್ಲಿ ದುರ್ಮರಣ ಹೊಂದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅವರ ಪತ್ನಿ ಸೇರಿ ಒಟ್ಟು 13 ಮಂದಿ ಮರಣ ಹೊಂದಿದ್ದಾರೆ. ಒಬ್ಬರು ಮಾತ್ರ ಬದುಕುಳಿದಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

“ಜನರಲ್ ಬಿಪಿನ್ ರಾವತ್, ಶ್ರೀಮತಿ ಮಧುಲಿಕಾ ರಾವತ್ ಮತ್ತು ವಿಮಾನದಲ್ಲಿದ್ದ ಇತರ 11 ಜನರು ದುರದೃಷ್ಟಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತೀವ್ರ ವಿಷಾದದೊಂದಿಗೆ ಖಚಿತಪಡಿಸಲಾಗುತ್ತಿದೆ” ಎಂದು ಭಾರತೀಯ ವಾಯುಪಡೆ ಟ್ವೀಟ್ ಮೂಲಕ ತಿಳಿಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರವರು ದೆಹಲಿಯಲ್ಲಿ ಬಿಪಿನ್ ರಾವತ್‌ರವರ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಅನೇಕರು ಬಿಪಿನ್ ರಾವತ್‌ರವರ ಮರಣಕ್ಕೆ ಸಾಂತ್ವಾನ ಸೂಚಿಸಿದ್ದಾರೆ.

ಜನರಲ್ ಬಿಪಿನ್ ರಾವತ್ ಒಬ್ಬ ಅತ್ಯುತ್ತಮ ಸೈನಿಕ. ನಿಜವಾದ ದೇಶಭಕ್ತ, ಅವರು ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಉಪಕರಣಗಳನ್ನು ಆಧುನೀಕರಿಸುವಲ್ಲಿ ಮಹತ್ತರವಾಗಿ ಕೊಡುಗೆ ನೀಡಿದ್ದಾರೆ. ಕಾರ್ಯತಂತ್ರದ ವಿಷಯಗಳ ಬಗ್ಗೆ ಅವರ ಒಳನೋಟಗಳು ಮತ್ತು ದೃಷ್ಟಿಕೋನಗಳು ಅಸಾಧಾರಣವಾಗಿವೆ. ಅವರ ಅಗಲಿಕೆ ನನಗೆ ಅತೀವ ದುಃಖ ತಂದಿದೆ. ಓಂ ಶಾಂತಿ ಎಂದು ಪ್ರಧಾನಿ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯವರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಇದು ಅನಿರೀಕ್ಷಿತ ದುರಂತ ಮತ್ತು ಈ ಕಷ್ಟದ ಸಮಯದಲ್ಲಿ ಅವರ ಕುಟುಂಬದೊಂದಿಗೆ ನಿಲ್ಲೋಣ. ಈ ದುರಂತದಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡ ಇತರ ಎಲ್ಲರಿಗೂ ಸಹ ಸಂತಾಪಗಳು. ಈ ದುಃಖದಲ್ಲಿ ಭಾರತ ಒಗ್ಗಟ್ಟಾಗಿ ನಿಂತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

IAFನ ಹೊಸ Mi-17 V5 ಹೆಲಿಕಾಪ್ಟರ್ ತಮಿಳುನಾಡಿನ ಸೂಲೂರು ವಾಯುನೆಲೆಯಿಂದ ವೆಲ್ಲಿಂಗ್ಟನ್‌ನಲ್ಲಿರುವ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ತೆರಳುವಾಗ 12.20 ರ ಸಮಯದಲ್ಲಿ ಕೂನೂರ್‌ನಲ್ಲಿ ಈ ದುರ್ಘಟನೆ ಜರುಗಿದೆ. ಕೊಯಮತ್ತೂರಿನ ಸೂಲೂರಿನ ಸೇನಾ ನೆಲೆಯಿಂದ ಸೇನಾ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ನೀಲಗಿರಿಯಲ್ಲಿ ಈ ಅಪಘಾತ ಸಂಭವಿಸಿದೆ.

ರಾವತ್ ಜೊತೆಯಲ್ಲಿ ಅವರ ಪತ್ನಿ ಮಧುಲಿಕಾ ರಾವತ್, ಅವರ ವಯಕ್ತಿಕ ಸಿಬ್ಬಂದಿ ಮತ್ತು ಇತರ ಅಧಿಕಾರಿಗಳು 09 ಜನರು ಸೇರಿ ಒಟ್ಟು 14 ಮಂದಿ ಇದ್ದರು.

ಅಪಘಾತದ ಘಟನೆಯ ನಂತರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್ ಟ್ವಿಟರ್‌ನಲ್ಲಿ ತಿಳಿಸಿದೆ.

63 ವರ್ಷದ ಬಿಪಿನ್ ರಾವತ್ ಪೂರ್ಣ ಮೂರು ವರ್ಷಗಳ ಅವಧಿಗೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ನಂತರ ರಾವತ್ ಅವರು ಡಿಸೆಂಬರ್ 31, 2019 ರಂದು ಭಾರತದ ಮೊದಲ ಸಿಡಿಎಸ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.


ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕ್ಯಾಪ್ಟರ್ ಪತನ: 10 ಅಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...